ವಿಶ್ವದ ಅತಿದೊಡ್ಡ ಚಿತ್ರಕಲಾ ಪ್ರದರ್ಶನ ಬೆಂಗಳೂರಲ್ಲಿ, ಬನ್ನಿ ಪಾಲ್ಗೊಳ್ಳಿ
ಬೆಂಗಳೂರು, ಫೆಬ್ರವರಿ 20: ಇದು ಬಣ್ಣಗಳ ಲೋಕ, ಮನಸ್ಸಿನಲ್ಲಿರುವ ಕಲ್ಪನೆಯನ್ನು ಕೆಲವರು ಬರವಣಿಗೆ ಮೂಲಕ ಪ್ರದರ್ಶಿಸಿದರೆ ಇನ್ನು ಕೆಲವರು ಪೇಟಿಂಗ್ ಮೂಲಕ ಸಮಾಜದ ಮುಂದಿಡುತ್ತಾರೆ.
ಫೆಬ್ರವರಿ 23 ಹಾಗೂ 24ರಂದು ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ವೆಗಾ ಸಿಟಿ ಮಾಲ್ನಲ್ಲಿ ಚಿತ್ರಗಳ ಪ್ರದರ್ಶನ ನಡೆಯಲಿದೆ.
ಈ ಕಾರ್ಯಕ್ರಮವನ್ನು ಬೆಂಗಳೂರು ಆರ್ಚ್ ಬಿಷಪ್ ರೆವರೆಂಡ್ ಪೀಟರ್ ಮಚಾಡೊ ಉದ್ಘಾಟಿಸಲಿದ್ದಾರೆ. ಮೇಯರ್ ಗಂಗಾಬಿಕಾ ಮಲ್ಲಿಕಾರ್ಜುನ್ ಅವರೊಂದಿಗೆ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ಪಾಲ್ಗೊಳ್ಳಲಿದ್ದಾರೆ.

ಹವ್ಯಾಸಿಗಳು ಮತ್ತು ವೃತ್ತಿಪರರು 5 ವರ್ಷದಿಂದ 90 ವರ್ಷದ ಹಿರಿಯರವರೆಗೆ ಪುರುಷರು, ಮಹಿಳೆಯರು ಮತ್ತು ಮಕ್ಕಳಿಂದ ರಚಿಸಿದ 10,000 ಪೇಂಟಿಂಗ್ಗಳು ಫ್ರೀಹ್ಯಾಂಡ್ ಮತ್ತು ಆಯಿಲ್ ಕ್ಯಾನ್ವಾಸ್ಗಳು ಪ್ರದರ್ಶನದಲ್ಲಿರುತ್ತವೆ ಮತ್ತು ಅವುಗಳಲ್ಲಿ ಸಾಮಾಜಿಕ ಒಳಿತಿನ ಸಂದೇಶಗಳನ್ನು ಒಳಗೊಂಡಿರುತ್ತವೆ ಪ್ರಶಸ್ತಿ ಪುರಸ್ಕೃತ ಪೇಂಟಿಂಗ್ಗಳೂ ಅವುಗಳಲ್ಲಿರುತ್ತವೆ.
ಬನ್ನೇರುಘಟ್ಟ ಮುಖ್ಯರಸ್ತೆಯ ವೆಗಾ ಸಿಟಿ ಮಾಲ್ನಲ್ಲಿ ಪ್ರದರ್ಶನದಲ್ಲಿದ್ದ 10,000 ಪೇಂಟಿಂಗ್ಗಳಲ್ಲಿ ಕೆಲ ವಾರಗಳ ಹಿಂದೆ ಜಯನಗರದ ಕಿತ್ತೂರು ರಾಣಿ ಚೆನ್ನಮ್ಮ ಸ್ಟೇಡಿಯಂನಲ್ಲಿ ನಡೆದ ಕಲರೋಥಾನ್-11 ಕಾರ್ಯಕ್ರಮದಲ್ಲಿ ಸ್ಥಳದಲ್ಲಿಯೇ ರಚಿಸಿದ ಚಿತ್ರಗಳು ಹಾಗೂ ಹಿಂದಿನ ಆವೃತ್ತಿಯ ಚಿತ್ರಗಳೂ ಇರುತ್ತವೆ.

ವೆಗಾ ಸಿಟಿ ಮಾಲ್ನಲ್ಲಿ ನಡೆಯಲಿರುವ ಈ ಪ್ರದರ್ಶನದಲ್ಲಿ ಭಾಗವಹಿಸುವ ಹಲವು ಪ್ರಪ್ರಥಮ ಬಾರಿಗೆ ಚಿತ್ರ ರಚಿಸಿದವರೂ ಇದ್ದಾರೆ, ಅವರ ಚಿತ್ರಗಳನ್ನೂ ಕೂಡಾ ಅತ್ಯಂತ ಸಾಮಾನ್ಯ 100ರೂ.ದರದಲ್ಲಿ ಸಾರ್ವಜನಿಕವಾಗಿ ಹರಾಜು ಹಾಕಲಾಗುತ್ತದೆ ಮತ್ತು ಮಾರಾಟದ ಗಳಿಕೆ ವೃದ್ಧಾಶ್ರಮ ಓಂ ಆಶ್ರಮ ಟ್ರಸ್ಟ್ಗೆ ಸೇರುತ್ತದೆ. ಇದು ಬಣ್ಣಗಳಲ್ಲಿ ಮುಳುಗಿ ಹೋಗುವ ಮತ್ತು ದುರ್ಬಲ ವರ್ಗದವರ ಜೀವನಗಳಿಗೆ ಕೊಂಚ ಬಣ್ಣ ಸೇರ್ಪಡೆ ಮಾಡುವ ಸಮಯ.
-
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Cylinder Shortage: ರಾಜ್ಯದಲ್ಲಿ ಅನಿಲ ಪೂರೈಕೆ ಸಮಸ್ಯೆಗೆ ಮುಕ್ತಿ? ಸಚಿವ ಮುನಿಯಪ್ಪ ಮಹತ್ವ ಮಾಹಿತಿ -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ












Click it and Unblock the Notifications