ವಿಶ್ವ ಟ್ರಾಮಾ ದಿನ: ಆಘಾತದಲ್ಲಿ ಸಿಲುಕಿದಾಗ ಫಸ್ಟ್ ಏಡ್ ಹೇಗೆ?
ಬೆಂಗಳೂರು ಅಕ್ಟೋಬರ್ 18: ''ಆಘಾತದ ಸಮಯದಲ್ಲಿ ಆತ್ಮೀಯರು ಹಾಗೂ ಆಘಾತದಲ್ಲಿ ಸಿಲುಕಿರುವವರ ರಕ್ಷಣೆಗೆ ಜನಸಾಮಾನ್ಯರು ಜೀವರಕ್ಷಕ ಪ್ರಾಥಮಿಕ ಚಿಕಿತ್ಸೆಗಳ ತರಬೇತಿ ಪಡೆದುಕೊಳ್ಳುವುದು ಅಗತ್ಯ,'' ಎಂದು ಯುನೈಟೆಡ್ ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ ಶಾಂತಕುಮಾರ್ ಮುರಡಾ ಅಭಿಪ್ರಾಯಪಟ್ಟರು.
ವಿಶ್ವ ಟ್ರಾಮಾ ದಿನದ ಅಂಗವಾಗಿ ಇಂದು ಜಯನಗರದ ಯುನೈಟೆಡ್ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದ್ದ ಎರಡು ದಿನಗಳ ಬೇಸಿಕ್ ಲೈಫ್ ಸಪೋರ್ಟ್ ಮತ್ತು ಫಸ್ಟ್ ಏಡ್ ಟ್ರಾಮಾ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ನಮ್ಮ ಸುತ್ತಮುತ್ತ ಇರುವ ವ್ಯಕ್ತಿಗಳಿಗೆ ಹಠಾತ್ತಾಗಿ ಹೃದಯಾಘಾತ, ಅಪಫಾತ ಅಥವಾ ಇನ್ನು ಯಾವುದಾದರೂ ಅವಘಡಗಳಾಗಿ ಆಘಾತಕ್ಕೀಡಾದಾಗ ಏನು ಮಾಡುವುದು ಎನ್ನುವುದು ತೋಚುವುದೇ ಇಲ್ಲ. ಪ್ರಾಥಮಿಕ ಚಿಕಿತ್ಸೆಯಿಂದ ದೊಡ್ಡ ತೊಂದರೆ ಉಂಟಾಗದಂತೆ ತಡೆಯುವ ನಿಟ್ಟಿನಲ್ಲಿ ಹಲವಾರು ಜನರಿಗೆ ಸರಿಯಾದ ತಿಳುವಳಿಕೆಯೇ ಇರುವುದಿಲ್ಲ ಎಂದರು.
3ನೇ ಎದುರಿಸಲು ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 1500 ಕೋಟಿ
ವೈದ್ಯಕೀಯ ಚಿಕಿತ್ಸೆಗೆ ಅವರನ್ನು ಕೊಂಡೊಯ್ಯುವ ವರೆಗಿನ ಅಮೂಲ್ಯ ಸಮಯ ಉಳಿಸುವ ನಿಟ್ಟಿನಲ್ಲಿ ಸಾಮಾನ್ಯವಾದ ತುರ್ತು ಜೀವರಕ್ಷಕ ಚಿಕಿತ್ಸೆಗಳ ತರಬೇತಿ ಪಡೆದುಕೊಳ್ಳುವುದು ಅತ್ಯವಶ್ಯ ಎಂದು ಹೇಳಿದರು.
ತುರ್ತು ಸಂದರ್ಭಗಳಲ್ಲಿ ಜೀವಗಳನ್ನು ಉಳಿಸುವ ಮಹತ್ವ
ತುರ್ತು ಸಂದರ್ಭಗಳಲ್ಲಿ ಜೀವಗಳನ್ನು ಉಳಿಸುವ ಮಹತ್ವವನ್ನು ತಿಳಿಸುವ ಹಾಗೂ ಆಫಾತಗಳನ್ನು ಹೇಗೆ ನಿಭಾಯಿಸಬೇಕು ಎಂದು ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನಗರದ ಯುನೈಟೆಡ್ ಆಸ್ಪತ್ರೆಯಲ್ಲಿ ಜನಸಾಮಾನ್ಯರಿಗೆ ವಿಶ್ವ ಟ್ರಾಮಾ ದಿನದ ಅಂಗವಾಗಿ ಅಕ್ಟೋಬರ್ 18 ಮತ್ತು 19 ರಂದು ಜೀವರಕ್ಷಕ ಪ್ರಾಥಮಿಕ ಚಿಕಿತ್ಸೆಗಳ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿದ್ದೇವೆ. ಸುಮಾರು 100 ಕ್ಕೂ ಹೆಚ್ಚು ಜನರು ಈ ತರಬೇತಿಯಲ್ಲಿ ಪಾಲ್ಗೊಂಡಿದ್ದು ಬಹಳ ಸಂತಸದ ವಿಷಯ ಎಂದು ಹೇಳಿದರು.
ಡಾ. ಲೋರಿಯಾ ರಹಮಾನ್ ನೀಡುವ ತರಬೇತಿ
ಅಮೇರಿಕನ್ ಹಾರ್ಟ್ ಅಸೋಸಿಯೇಷನ್ - ಅಡ್ವಾನ್ಸ್ಡ್ ಕಾರ್ಡಿಯಾಕ್ ಲೈಪ್ ಸಪೋರ್ಟ್ ನಿಂದ ತರಬೇತಿಯನ್ನು ಪಡೆದುಕೊಂಡಿರುವ ಡಾ. ಲೋರಿಯಾ ರಹಮಾನ್ ಅವರು ಈ ತರಬೇತಿಯನ್ನು ನಡೆಸಿಕೊಟ್ಟರು. ನಂತರ ಮಾತನಾಡಿದ ಅವರು, ಈ ತರಬೇತಿಯಲ್ಲಿ ಅಪಘಾತಗಳು ಮತ್ತು ಬಿದ್ದಾಗ, ಬೆಂಕಿಯ ಅವಘಢಗಳ ಸಂದರ್ಭದಲ್ಲಿ, ಪ್ರಾಣಿಗಳು ಕಚ್ಚಿದ ಸಂಧರ್ಭದಲ್ಲಿ, ಹೃದಯಾಘಾತ ಮತ್ತು ಸ್ಟ್ರೋಕ್ ಗಳಾದಾಗ ನೀಡಬೇಕಾದಂತ ಪ್ರಥಮ ಚಿಕಿತ್ಸೆಯ ಬಗ್ಗೆ ತರಬೇತಿಯನ್ನು ನೀಡಲಾಗಿದೆ. ಹೆಚ್ಚು ಹೆಚ್ಚು ಜನರು ಈ ತರಬೇತಿಯನ್ನು ಪಡೆದುಕೊಳ್ಳುವುದರಿಂದ ಆಘಾತದ ಮತ್ತು ತುರ್ತು ಸಂಧರ್ಭಗಳಲ್ಲಿ ವೈದ್ಯಕೀಯ ನೆರವು ದೊರೆಯುವ ಮುನ್ನ ಹಲವಾರು ರೋಗಿಗಳ ಜೀವ ಉಳಿಸಬಹುದಾಗಿದೆ ಎಂದು ಹೇಳಿದರು.
ಯುರಾಲಜಿ ವಿಭಾಗದ ಮುಖ್ಯಸ್ಥ ಡಾ ರಾಜೀವ್ ಬಶೇಟ್ಟೆ
ತರಬೇತಿ ಕಾರ್ಯಕ್ರಮದಲ್ಲಿ ಯುರಾಲಜಿ ವಿಭಾಗದ ಮುಖ್ಯಸ್ಥರಾದ ಡಾ ರಾಜೀವ್ ಬಶೇಟ್ಟೆ, ಮೆಡಿಕಲ್ ಸುಪರಿಂಡೆಂಟ್ ಡಾ ಪ್ರಥ್ಯುಶ್ ಮಿಗ್ಲಾನಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ಯುನೈಟೆಡ್ ಆಸ್ಪತ್ರೆಯ ಸಂಸ್ಥಾಪಕರಾದ ಡಾ ವಿಕ್ರಮ್ ಸಿದ್ದಾರೆಡ್ಡಿ ಅವರು ತರಬೇತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ತರಬೇತುದಾರರಿಗೆ ಪ್ರಮಾಣ ಪತ್ರಗಳನ್ನು ವಿತರಿಸಿದರು.
Recommended Video
ಕೊರೊನಾ ಜಾಗೃತಿ, ಲಸಿಕೆ ರಿಯಾಯಿತಿ
ಸಾಮಾಜಿಕ ಕಾಳಜಿ ಹಾಗೂ ಕೊರೊನಾ ಲಸಿಕೆಯಿಂದ ಹೆಚ್ಚು ಜನರನ್ನು ರಕ್ಷಣೆ ಮಾಡುವ ಉದ್ದೇಶದಿಂದ, ಕೋವ್ಯಾಕ್ಸಿನ್ ಕೊರೊನಾ ಲಸಿಕೆಯನ್ನು ಹೊಂದಿರುವ ಜಯನಗರದ ಯುನೈಟೆಡ್ ಆಸ್ಪತ್ರೆ, ಸರ್ಕಾರ ನಿಗದಿಪಡಿಸಿರುವ ದರದ 210 ರೂಪಾಯಿ ರಿಯಾಯಿತಿ ನೀಡಲಿರುವುದಾಗಿ ಘೋಷಿಸಿದ್ದನ್ನು ಇಲ್ಲಿ ಸ್ಮರಿಸಬಹುದು. "ಬೆಂಗಳೂರು ನಗರದಲ್ಲೆಡೆ ಲಸಿಕೆಗಳ ಕೊರತೆ ಕಂಡುಬರುತ್ತಿದೆ. ವ್ಯಾಪಕವಾಗಿ ಹರಡುತ್ತಿರುವ ಡೆಲ್ಟಾ ಪ್ಲಸ್ ರೂಪಾಂತರ ವಿರುದ್ಧ ಪರಿಣಾಮಕಾರಿಯಾಗಿರುವ ಕೋವ್ಯಾಕ್ಸಿನ್ ಲಸಿಕೆ ಕೊರತೆ ಹೆಚ್ಚಾಗಿದೆ. ನಮ್ಮ ಆಸ್ಪತ್ರೆಯ ಮಂಡಳಿ ವತಿಯಿಂದ ಎರಡು ತಿಂಗಳ ಹಿಂದೆ ಕೋವ್ಯಾಕ್ಸಿನ್ ಹಾಗೂ ಇತರೆ ಲಸಿಕೆಗಳಿಗೆ ಮುಂಗಡ ಹಣ ನೀಡಿ ಖರೀದಿಸಿದ್ದೆವು. ಈಚೆಗೆ ನಮ್ಮ ಆಸ್ಪತ್ರೆಗೆ 20,000 ಡೋಸ್ ಕೋವ್ಯಾಕ್ಸಿನ್ ಲಸಿಕೆ ಪೂರೈಕೆಯಾಗಿದೆ. ಇದರಲ್ಲಿ 5000 ಡೋಸ್ ಗಳನ್ನು ಕೊರೊನಾ ಎರಡನೇ ಅಲೆಯಲ್ಲಿ ಅತ್ಯುತ್ತಮ ಸೇವೆ ಒದಗಿಸಿದ ನಮ್ಮ ಕಲಬುರ್ಗಿ ಆಸ್ಪತ್ರೆಯಲ್ಲಿ ಬಳಸಲಿದ್ದೇವೆ" ಎಂದು ಯುನೈಟೆಡ್ ಆಸ್ಪತ್ರೆಯ ಸಂಸ್ಥಾಪಕ ಅಧ್ಯಕ್ಷರಾದ ಡಾ. ವಿಕ್ರಮ್ ಸಿದ್ದಾರೆಡ್ಡಿ ಮಾಹಿತಿ ನೀಡಿದರು.