ಸಾಹಿತಿ ಅಗ್ರಹಾರ ಕೃಷ್ಣಮೂರ್ತಿಗೆ ಕಾನೂನು ಹೋರಾಟದಲ್ಲಿ ಗೆಲುವು
ಬೆಂಗಳೂರು, ಜನವರಿ 19: ಸಾಹಿತಿ ಅಗ್ರಹಾರ ಕೃಷ್ಣಮೂರ್ತಿ ಅವರು ಕೇಂದ್ರ ಸಾಹಿತ್ಯ ಅಕಾಡೆಮಿ ಹಣವನ್ನು ದುಂದುವೆಚ್ಚ ಮಾಡಿರುವ ಆರೋಪದಿಂದ ಕಾನೂನಾತ್ಮಕವಾಗಿ ಹೊರಬಂದಿದ್ದಾರೆ.
ಅವರು ಕೇಂದ್ರ ಸಾಹಿತ್ಯ ಅಕಾಡೆಮಿಯ ಕಾರ್ಯದರ್ಶಿಯಾಗಿದ್ದ ವೇಳೆ ಸಕ್ಷಮ ಪ್ರಾಧಿಕಾರದ ಅನುಮತಿ ಇಲ್ಲದೆ ಅಕಾಡೆಮಿ ಹಣವನ್ನು ದುಂದುವೆಚ್ಚ ಮಾಡಿರುವ ಆರೋಪ ಕೇಳಿಬಂದಿತ್ತು.
ಇದರ ಬಾಬ್ತು 30 ಲಕ್ಷ ನಷ್ಟ ಬಾಬ್ತು ಪಡೆಯಬೇಕು ಎಂಬ ಅಕಾಡೆಮಿಯ ಶಿಸ್ತು ಸಮಿತಿ ಆದೇಶವನ್ನು ರದ್ದುಗೊಳಿಸಿದ್ದ ನ್ಯಾಯಪೀಠದ ಆದೇಶವನ್ನು ಇದೀಗ ರಾಜ್ಯ ಹೈಕೋರ್ಟ್ ವಿಭಾಗೀಯ ನ್ಯಾಯಪೀಠವೂ ಎತ್ತಿಹಿಡಿದಿದೆ. ಹೀಗಾಗಿ ಇಂದಿನ ಆದೇಶ 67 ವರ್ಷದ ಕೃಷ್ಣಮೂರ್ತಿ ಅವರು ತಮ್ಮ ಕಾನೂನು ಸಮರದಲ್ಲಿ ಜಯ ಸಾಧಿಸಿ ನಿರಮ್ಮಳರಾಗುವಂತೆ ಮಾಡಿದೆ.

ತನ್ನ ಆದೇಶ ನೀಡುವ ಮುನ್ನ ಸಮಿತಿ, ನಡೆಸಿರುವ ವಿಚಾರಣಾ ಪ್ರಕ್ರಿಯೆ ಸರಿಯಿಲ್ಲ ಮತ್ತು ಬೈ-ಲಾ ಪ್ರಕಾರ, ನಿವೃತ್ತಿ ಹೊಂದಿದವರ ಮೇಲೆ ಈ ರೀತಿಯ ಕ್ರಮ ಕೈಗೊಂಡಿರುವುದು ಕಾನೂನು ಬಾಹಿರ' ಎಂದು ನ್ಯಾಯಮೂರ್ತಿ ಪಿ.ಬಿ.ಭಜಂತ್ರಿ ಅವರಿದ್ದ ಏಕಸದಸ್ಯ ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿತ್ತು.
ಮೇಲ್ಮನವಿ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ ನ್ಯಾಯಮೂರ್ತಿ ಎಸ್.ಸುಜಾತ ಹಾಗೂ ನ್ಯಾಯಮೂರ್ತಿ ರವಿ ಹೊಸಮನಿ ಅವರಿದ್ದ ವಿಭಾಗೀಯ ನ್ಯಾಯಪೀಠವು, ಬುಧವಾರ ಪ್ರಕಟಿಸಿತು. ಕಂಬಾರರ ಮೇಲ್ಮನವಿಯನ್ನು ವಜಾಗೊಳಿಸಿ ಆದೇಶಿಸಿತು.
Recommended Video
ಕೇಂದ್ರ ಸಾಹಿತ್ಯ ಅಕಾಡೆಮಿ ಕಾರ್ಯಕ್ರಮಗಳಿಗೆ ಕೃಷ್ಣಮೂರ್ತಿ ಅವರು ನಿಗದಿಗಿಂತಲೂ ಹೆಚ್ಚಿನ ಅನುದಾನ ಬಿಡುಗಡೆ ಮಾಡಿದ್ದಾರೆ ಮತ್ತು ದೆಹಲಿಯಲ್ಲಿ ಕಚೇರಿ ಹೊಂದಿದ್ದು ಮೇಲಿಂದ ಮೇಲೆ ಬೆಂಗಳೂರಿಗೆ ಅಧಿಕೃತ ಪ್ರವಾಸ ಕೈಗೊಂಡು ಹಣ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಕುರಿತಂತೆ ಶಿಸ್ತು ಸಮಿತಿ 2014ರ ಜೂನ್ 3ರಂದು ನಷ್ಟ ಭರ್ತಿ ಪಾವತಿಗೆ ಆದೇಶಿಸಿತ್ತು.
-
ಮಂಗಳೂರಿಗೆ ಬರಲಿದೆ 26,000 ಟನ್ LPG ತೈಲ ಹೊತ್ತ 'ಶಿವಾಲಿಕ್' ಹಡಗು -
ಮಾರ್ಚ್ 17ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 16ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ












Click it and Unblock the Notifications