ಪೌರತ್ವ ಕಾಯ್ದೆ ಬೆಂಬಲಿಸಿ ಮೋದಿಗೆ ಪತ್ರ ಬರೆದ ಸಾಹಿತಿ ಚಿದಾನಂದಮೂರ್ತಿ
ಬೆಂಗಳೂರು, ಡಿಸೆಂಬರ್, 28: ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾನೂನು ಬೆಂಬಲಿಸಿ ಹಿರಿಯ ಸಾಹಿತಿ ಎಂ ಚಿದಾನಂದಮೂರ್ತಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಡಿ 28 ರಂದು ಪತ್ರವನ್ನು ಕಳಿಸಿಕೊಟ್ಟಿರುವ ಅವರು, ಕಾಯ್ದೆ ಜಾರಿಗೊಳಿಸಿದ್ದಕ್ಕೆ ಧನ್ಯವಾದ ಅರ್ಪಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಕೈಗೊಳ್ಳುತ್ತಿರುವ ಕ್ರಮಗಳನ್ನು ಅವರು ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ. ಮೋದಿ ಅವರು ಭಾರತದಲ್ಲಿದ್ದುಕೊಂಡು ಭಾರತಕ್ಕೆ ಎರಡು ಬಗೆಯುವ ಶಕ್ತಿಗಳಿಗೆ ದುಸ್ವಪ್ನರಾಗಿದ್ದಾರೆ. ದೇಶದ ಭದ್ರತೆಗೆ ಇನ್ನಷ್ಟು ಕ್ರಮ ಕೈಗೊಳ್ಳಲಿ. ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾಯ್ದೆ ತಂದಿರುವುದು ಅತ್ಯಂತ ಸೂಕ್ತವಾಗಿದೆ ಬೆಂಬಲಿಸಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸಿರುವುದಕ್ಕೆ ಪ್ರಧಾನಮಂತ್ರಿ ನರೇಂದ್ರಮೋದಿ ಅವರನ್ನು ಅಭಿನಂದಿಸಿ ನಾಡಿನ ಹಿರಿಯ ಸಂಶೋಧಕರಾದ ಡಾ. ಎಂ.ಚಿದಾನಂದ ಮೂರ್ತಿ ಪತ್ರ ಬರೆದಿದ್ದಾರೆ. ಕಾಯ್ದೆಯು ಮುಸ್ಲೀಮರ ವಿರೋಧಿಯಲ್ಲ. ಭಾರತೀಯತ್ವದ, ಭಾರತೀಯ ಸಂಸ್ಕೃತಿಯ, ದೇಶಪ್ರೇಮಿಗಳ ಪರವಾದ ಕಾಯ್ದೆಯನ್ನು ಜಾರಿಗೊಳಿಸುವ ಮೂಲಕ ದಿಟ್ಟ ಕ್ರಮ ತೆಗೆದುಕೊಂಡಿದ್ದೀರಿ ಎಂದು ಡಾ. ಎಂ.ಚಿದಾನಂದ ಮೂರ್ತಿ ಅವರು ಪತ್ರದಲ್ಲಿ ಹೇಳಿದ್ದಾರೆ.

ವಿವಾದಿತ ರಾಷ್ಟ್ರೀಯ ಪೌರತ್ವ ತಿದ್ದುಪಡಿ ಮಸೂದೆ ಮಸೂದೆ ಸಂಸತ್ ನಲ್ಲಿ ಅನುಮೋದನೆ ಪಡೆದುಕೊಂಡು ಕಾನೂನಾಗಿದೆ. ಇದ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದು, ಬಿಜೆಪಿ ಕೂಡ ವ್ಯಾಪಕವಾಗಿ ಇದರ ಕುರಿತು ಜನಜಾಗೃತಿ ಮಾಡುತ್ತಿದೆ. ಈಶಾನ್ಯ ಭಾರತದಲ್ಲಿ ಹಾಗೂ ದೆಹಲಿಯಲ್ಲಿ ಹಿಂಸಾಚಾರಗಳು ನಡೆಯುತ್ತಿವೆ. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications