ಮಣಿಪಾಲ್ ಆಸ್ಪತ್ರೆಯಲ್ಲಿ ಯುಆರ್ ಎ ಕೊನೆ ಕ್ಷಣಗಳು
ಬೆಂಗಳೂರು, ಆ.22: ಜ್ಞಾನಪೀಠ ಪ್ರಶಸ್ತಿ ವಿಜೇತ ಸಾಹಿತಿ ಪ್ರೊ. ಯು.ಆರ್ ಅನಂತಮೂರ್ತಿ ಅವರನ್ನು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದೀರ್ಘಕಾಲದಿಂದ ಕಿಡ್ನಿ ಸಂಬಂಧಿತ ಸಮಸ್ಯೆಯಿಂದ ಅನಂತಮೂರ್ತಿ(82) ಅವರು ಬಳಲುತ್ತಿದ್ದರು. ಅದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ.[ವೈದ್ಯರ ಅಧಿಕೃತ ಹೇಳಿಕೆ ಇಲ್ಲಿದೆ]
ಈ ಹಿಂದಿನ ಸುದ್ದಿ ಅಪ್ದೇಟ್ ಗಳ ವಿವರ ಇಲ್ಲಿದೆ
ನಗರದ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಯ ತುರ್ತು ನಿಗಾ ಘಟಕ(ಐಸಿಯು) ದಲ್ಲಿ ಅನಂತಮೂರ್ತಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಬಹುಕಾಲದಿಂದ ಕಿಡ್ನಿ ತೊಂದರೆ ಅನುಭವಿಸಿದ್ದು, ಕಾಲಕಾಲಕ್ಕೆ ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದರು.[ಅನಂತಮೂರ್ತಿ ಬಗ್ಗೆ ಏನಿದು ಇಂಥ ಪ್ರಮಾದ?]
ಸಮಯ 6.00: ಅನಂತಮೂರ್ತಿ ಅವರ ಆರೋಗ್ಯದಲ್ಲಿ ತುಸು ಚೇತರಿಕೆ ಕಂಡು ಬಂದಿದೆ.
* ರಕ್ತದೊತ್ತಡ ಹತೋಟಿಗೆ ಬಂದಿದ್ದು, ಇನ್ನೆರಡು ದಿನಗಳ ಕಾಲ ವೆಂಟಿಲೇಟರ್ ನಲ್ಲೇ ಇರಬೇಕಾಗುತ್ತದೆ.
* ಐಸಿಯುನಲ್ಲಿ ಡಾ.ಸುನೀಲ್ ಕಾರಂತ್ ನೇತೃತ್ವದ ತಂಡ ನಿಗಾ ವಹಿಸಿದೆ ಎಂದು ಡಾ. ಸುದರ್ಶನ್ ಬಲ್ಲಾಳ್ ಹೇಳಿದ್ದಾರೆ.
ಸಮಯ 15.30: ಯು.ಆರ್ ಆನಂತಮೂರ್ತಿ ಅವರು ಪ್ರಜ್ಞಾಸ್ಥಿತಿಯಲ್ಲಿದ್ದಾಗ ನನ್ನನ್ನು ಗುರುತು ಹಿಡಿದು ವಿಶ್ ಮಾಡಿದರು ಎಂದು ಡಾ. ಸುದರ್ಶನ್ ಬಲ್ಲಾಳ್ ಹೇಳಿದ್ದಾರೆ.
* ಬೆಳಗ್ಗೆ ಸುದ್ದಿ ವಾಹಿನಿಯಲ್ಲಿ ಅನಂತಮೂರ್ತಿ ಅವರ ಅನಾರೋಗ್ಯದ ಬಗ್ಗೆ ಸುದ್ದಿ ಬರುತ್ತಿದ್ದಂತೆ, ಆಪ್ತರು, ಮಿತ್ರರು ಹಾಗೂ ಅಭಿಮಾನಿಗಳು ಮಣಿಪಾಲ್ ಆಸ್ಪತ್ರೆಗೆ ಧಾವಿಸುತ್ತಿದ್ದಾರೆ.
* ಸಾಹಿತಿಗಳಾದ ಜಯಂತ್ ಕಾಯ್ಕಿಣಿ, ಗಿರೀಶ್ ಕಾಸರವಳ್ಳಿ, ವಿವೇಕ್ ಶಾನುಭಾಗ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
* ಅನಂತಮೂರ್ತಿ ಅವರು ಐಸಿಯುನಲ್ಲಿರುವುದರಿಂದ ಸಾರ್ವಜನಿಕರಿಗೆ ಪ್ರವೇಶ ನೀಡಲಾಗುತ್ತಿಲ್ಲ.

ಮಣಿಪಾಲ್ ವೈದ್ಯ ಸುದರ್ಶನ್ ಬಲ್ಲಾಳ್ ಅವರ ರ ಸುದಿಗೋಷ್ಠಿ ವಿವರ:
* ಕಳೆದ 2 ವರ್ಷದಿಂದ ಅನಂತಮೂರ್ತಿ ಅವರು ಕಿಡ್ನಿ ತೊಂದರೆಯಿಂದ ಬಳಲುತ್ತಿದ್ದಾರೆ.
* ಅನಂತಮೂರ್ತಿ ಅವರು ನಿರಂತರವಾಗಿ ಡಯಾಲಿಸೀಸ್ ಮಾಡಿಸಿಕೊಳ್ಳುತ್ತಿದ್ದರು. ಹೀಗಾಗಿ ಕಿಡ್ನಿ ಕಾರ್ಯನಿರ್ವಹಿಸುತ್ತಿತ್ತು.
* ಅನಂತಮೂರ್ತಿ ಕಿಡ್ನಿ, ಹೃದಯ, ಶ್ವಾಸಕೋಶ ಸಮಸ್ಯೆ ಕೂಡಾ ಇದೆ.
* ಅನಂತಮೂರ್ತಿ ಅವರಿಗೆ ಕಳೆದ 15 ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ಎರಡು ದಿನಗಳಿಂದ ಎರಡು ಕಿಡ್ನಿಗಳು ವೈಫಲ್ಯವಾಗಿದೆ.
* ಎರಡು ದಿನಗಳಿಂದ ವೆಂಟಿಲೇಟರ್ ಸಪೋರ್ಟ್ ನಲ್ಲಿರುವ ಅನಂತಮೂರ್ತಿ ಅವರಿಗೆ ನುರಿತ ವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿದೆ.
* ಯುಆರ್ ಎ ಅವರಿಗೆ ತಗುಲಿರುವ ಸೋಂಕು ಹರಡದಂತೆ ಎಚ್ಚರವಹಿಸಲಾಗುತ್ತಿದೆ ಎಂದರು. [ದೇವರ ಬಗ್ಗೆ ಕಲಬುರ್ಗಿ ಹೇಳಿದ್ದು]

ಕಳೆದ ಎರಡು ದಿನಗಳಿಂದ ತೀವ್ರ ಸಮಸ್ಯೆ ಎದುರಿಸಿದ ಅನಂತಮೂರ್ತಿ ಅವರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಅನಂತಮೂರ್ತಿ ಅವರ ಆರೋಗ್ಯ ಸುಧಾರಣೆಯಾಗಲಿದೆ ಆತಂಕಪಡುವ ಅಗತ್ಯವಿಲ್ಲ ಎಂದು ವೈದ್ಯರು ಹೇಳಿದ್ದಾರೆ.
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಮೇಳಿಗೆಯಲ್ಲಿ ಜನಿಸಿದ ಯುಆರ್ ಅನಂತಮೂರ್ತಿ ಅವರು ಸಂಸ್ಕಾರ, ಘಟಶ್ರಾದ್ದ, ಬರ, ಭಾರತೀಪುರ ಮುಂತಾದ ಉತ್ತಮ ಕೃತಿಗಳನ್ನು ನೀಡಿದ್ದಾರೆ. ಅನಂತಮೂರ್ತಿ ಅವರ ಕಾದಂಬರಿಗಳು, ಅವರ ಚಿಂತನೆ ರಾಷ್ಟ್ರಮಟ್ಟದಲ್ಲಿ ಚರ್ಚಿತವಾಗಿವೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications