ಜೂನ್ 20ಕ್ಕೆ ಕಲಾಗ್ರಾಮದಲ್ಲಿ ಬಿಲ್ಜಾಣ ಧನಂಜಯ ಯಕ್ಷಗಾನ ಪ್ರಸಂಗ
ಬೆಂಗಳೂರು, ಜೂನ್ 16: ಬೆಂಗಳೂರಿನ ಸಮಸ್ತರು ರಂಗಸಂಶೋಧನಾ ಕೇಂದ್ರದಿಂದ ಜೂನ್ ಇಪ್ಪತ್ತರಂದು ಮಂಗಳವಾರ ಸಂಜೆ ಆರು ಗಂಟೆಗೆ ಮಲ್ಲತ್ತಹಳ್ಳಿ ಕಲಾಗ್ರಾಮದಲ್ಲಿ ಬಿಲ್ಜಾಣ ಧನಂಜಯ ಯಕ್ಷಗಾನ ಪ್ರಸಂಗ ಇದೆ. ಪ್ರವೇಶ ಉಚಿತವಾಗಿರುತ್ತದೆ. ಬೇಗಾರ್ ಶಿವಕುಮಾರ್ ಅವರು ಸಾರಥ್ಯ ವಹಿಸಲಿದ್ದಾರೆ.
ಬೆಂಗಳೂರಿನಲ್ಲಿರುವ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರಾದ ಸಿ.ಬಸವಲಿಂಗಯ್ಯ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. ಹಿರಿಯ ಪತ್ರಕರ್ತರಾದ ಗುಡಿಹಳ್ಳಿ ನಾಗರಾಜ್ ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ಯಕ್ಷಗಾನ ಮತ್ತು ಬಯಲಾಟ ಅಕಾಡೆಮಿ ರಿಜಿಸ್ಟ್ರಾರ್ ಎಸ್.ಎಚ್.ಶಿವರುದ್ರಪ್ಪ ಹಾಗೂ ನಾಟಕಾರರು-ಸಾಹಿತಿಗಳಾದ ಹೊರೆಯಾಲ ದೊರೆಸ್ವಾಮಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಬಡಗು ಶೈಲಿಯ ಆಟವಾಗಿ ಬಿಲ್ಜಾಣ ಧನಂಜಯ ಎಂಬ ಸಾಂಪ್ರದಾಯಿಕ ಪ್ರಸಂಗದ ಪ್ರಯೋಗ ನಡೆಯಲಿದೆ. ಈ ಆಟವನ್ನು ಬೇಗಾರ್ ಶಿವಕುಮಾರ್ ಅವರು ನಿರ್ದೇಶನ ಮಾಡಲಿದ್ದಾರೆ.

ಕೇಂದ್ರ ಸರಕಾರದ ಸಂಸ್ಕೃತಿ ಸಚಿವಾಲಯವು ಈ ಪ್ರದರ್ಶನಕ್ಕೆ ಧನ ಸಹಾಯ ನೀಡುತ್ತಿದೆ. ಅಂದಹಾಗೆ ಸಮಸ್ತರು ರಂಗಸಂಶೋಧನಾ ಕೇಂದ್ರವನ್ನು ಗೋಪಾಲಕೃಷ್ಣ ನಾಯರಿಯವರು ಮುನ್ನಡೆಸುತ್ತಿದ್ದಾರೆ. ಇದರ ಪ್ರಾದೇಶಿಕ ಘಟಕ ಬೆಂಗಳೂರು ನಗರ, ಹರಪನಹಳ್ಳಿ, ಸಾಲಿಗ್ರಾಮ, ತುಮಕೂರು ಹಾಗೂ ಚಿತ್ರದುರ್ಗದಲ್ಲಿ ಇದೆ.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು












Click it and Unblock the Notifications