ಗಾಡಿ ಓಡಿಸುವಾಗ ನಿಮ್ಮ ಕರೆ ನನಗೆ ಕನೆಕ್ಟ್ ಆದ್ರೆ ನಂಗೊತ್ತಿಲ್ಲ, ಹುಷಾರ್!
ಬೆಂಗಳೂರು, ಜನವರಿ 25: ವಾಹನ ಚಾಲನೆ ಮಾಡುವ ವೇಳ ನೀವು ಮಾಡುವ ಕರೆಯು ನನಗೂ ಕನೆಕ್ಟ್ ಆಗಬಹುದು ಹೀಗೆ ಹೇಳ್ತಿರೋದು ಯಾರುಗೊತ್ತೇ? ಯಮದೇವ.
ಹೌದು ಇತ್ತೀಚಿನ ದಿನಗಳಲ್ಲಿ ವಾಹನ ಚಾಲನೆ ವೇಳೆ ಮೊಬೈಲ್ ಬಳಕೆ ವಿಪರೀತವಾಗಿದೆ. ಕಾರಿನಲ್ಲಿ ಪ್ರಯಾಣಿಸುವಾಗ ಸೀಟ್ ಬೆಲ್ಟ್ ಧರಿಸುವುದು, ಬೈಕ್ನಲ್ಲಿ ಪ್ರಯಾಣಿಸುವಾಗ ಹೆಲ್ಮೆಟ್ ಹಾಕುವ ಹಾಗೆಯೇ ಗಾಡಿ ಓಡಿಸುವಾಗ ಮೊಬೈಲ್ ಬಳಕೆಯನ್ನು ಬಿಡಬೇಕಾಗಿರುವುದು ನಿಮ್ಮ ಜವಾಬ್ದಾರಿ.
ಮೊಬೈಲ್ ಬಳಕೆಯಿಂದ ನಿಮ್ಮ ಜೊತೆಗೆ ಬೇರೆಯವರ ಜೀವಕ್ಕೂ ಕುತ್ತು ಬರುವ ಸಾಧ್ಯತೆ ಇರುತ್ತದೆ. ಹೀಗಾಗಿ ಬೆಂಗಳೂರು ಸಿಟಿ ಪೊಲೀಸರು ವಾಹನ ಚಲಾವಣೆ ವೇಳೆ ಮೊಬೈಲ್ ಬಳಕೆ ಬೇಡ ಎನ್ನುವ ಜಾಗೃತಿ ಸಂದೇಶ ಸಾರಲು ಸಿದ್ಧರಾಗಿದ್ದಾರೆ. ಈ ಕುರಿತು ಟ್ವಿಟ್ಟರ್ನಲ್ಲಿ ಪೋಸ್ಟ್ ಒಂದನ್ನು ಹಾಕಿರುವ ಅವರು ಎಚ್ಚರವಿರಲಿ, ಗಾಡಿ ಓಡಿಸ್ತಾ ನೀವು ಮಾಡುವ ಕರೆ ನನಗೂ ಕನೆಕ್ಟ್ ಆಗಬಹುದು ಎನ್ನುವ ಸುಂದರ ಶೀರ್ಷಿಕೆ ನೀಡಿ ಜೊತೆಗೆ ಎಚ್ಚರಿಕೆಯನ್ನು ನೀಡಿದ್ದಾರೆ.

ವಾಹನ ಚಲಾವಣೆ ವೇಳೆ ಮೊಬೈಲ್ ಬಳಕೆ ಜೀವಕ್ಕೆ ಅಪಾಯವನ್ನು ತರಬಹುದು ಹಾಗಾಗಿ ಯಾವುದೇ ಕಾರಣಕ್ಕು ಮೊಬೈಲ್ ಬಳಕೆ ಬೇಡ ಎಂದು ಮನವಿ ಮಾಡಿದ್ದಾರೆ. ಯಮ ಬರ್ತಾನೆ, ನಿಮ್ಮ ಬೈಕ್ ಹಿಂದೆ ಬರ್ತಾನೆ, ಹೆಲ್ಮೆಟ್ ಹಾಕ್ತೀರಾ ಇಲ್ವಾ, ನನ್ನ ಜತೆ ಬರ್ತೀರಾ ಅಂತ ವಾರ್ನಿಂಗ್ ಕೊಡ್ತಾನೆ, ಒಂದು ಹೆಲ್ಮೆಟ್ ಧರಿಸದಿದ್ದರೆ ಏನೆಲ್ಲಾ ಅನಾಹುತವಾಗುತ್ತದೆ ಎಂದು ಜನರಿಗೆ ಮನವರಿಕೆ ಮಾಡಿಕೊಡುವ ಉದ್ದೇಶದಿಂದ ಬೆಂಗಳೂರು ಟ್ರಾಫಿಕ್ ಪೊಲೀಸರು ಯಮನ ಕಾನ್ಸೆಪ್ಟ್ ಇಟ್ಟುಕೊಂಡು ನಗರಾದ್ಯಂತ ಜಾಗೃತಿ ಮೂಡಿಸಿದ್ದರು.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications