ಯಶ್ ಹುಟ್ಟುಹಬ್ಬಕ್ಕೆ ವೆಬ್ ಲೋಕಕ್ಕೆ ಯಶೋಮಾರ್ಗ ಎಂಟ್ರಿ!
ನಟ ಯಶ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಅವರ ಮುಂದಾಳತ್ವದ ಎನ್ ಜಿಒ 'ಯಶೋಮಾರ್ಗ' ಇಂದು ವೆಬ್ ಲೋಕಕ್ಕೆ ಎಂಟ್ರಿಕೊಟ್ಟಿದೆ.
ಬೆಂಗಳೂರು, ಜನವರಿ 08: ಕರುನಾಡ ಕಲಾ ವಿಕ್ರಮ, ರಾಜಾಹುಲಿ, ರಾಕಿಂಗ್ ಸ್ಟಾರ್, ಅಣ್ತಮ್ಮ ನಟ ಯಶ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಅವರ ಮುಂದಾಳತ್ವದ ಎನ್ ಜಿಒ 'ಯಶೋಮಾರ್ಗ' ಇಂದು ವೆಬ್ ಲೋಕಕ್ಕೆ ಎಂಟ್ರಿಕೊಟ್ಟಿದೆ.
ಬೆಂಗಳೂರಿನ ಹೊಸಕೆರೆ ಹಳ್ಳಿ ರಿಂಗ್ ರಸ್ತೆ ಸಮೀಪದ ತಮ್ಮ ನಿವಾಸದಲ್ಲಿ ಅಭಿಮಾನಿಗಳ ಸಮ್ಮುಖದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಯಶ್ ಅವರಿಗೆ ಇದು ಮದುವೆ ನಂತರದ ಮೊದಲ ಹುಟ್ಟುಹಬ್ಬವಾಗಿದೆ. 31ನೇ ಹುಟ್ಟುಹಬ್ಬ ಆಚರಿಸಿಕೊಂಡ ಯಶ್ ಅವರ ಜತೆ ತಾರಾ ಪತ್ನಿ ರಾಧಿಕಾ ಪಂಡಿತ್ ಕೂಡಾ ಜತೆಗಿದ್ದು, ಅಭಿಮಾನಿಗಳ ಕೇಕ್, ಶುಭಹಾರೈಕೆ, ಉಡುಗೊರೆಗಳನ್ನು ಸ್ವೀಕರಿಸಿದರು.[ಯಶ್ ಗೆ ಶುಭ ಹಾರೈಕೆ]
ಇದೇ ಸಂದರ್ಭದಲ್ಲಿ ಯಶ್ ಅವರು ತಮ್ಮ ಸರ್ಕಾರೇತರ ಸಂಸ್ಥೆ 'ಯಶೋಮಾರ್ಗ' ಕ್ಕೆ ಪ್ರತ್ಯೇಕ ವೆಬ್ ಸೈಟ್ ಲಾಂಚ್ ಮಾಡಿದರು. ಇಲ್ಲಿ ತನಕ ನಿಮ್ಮ ಯಶ್ ವೆಬ್ ಸೈಟ್ ನ ಭಾಗವಾಗಿ ಯಶೋಮಾರ್ಗದ ಮಾಹಿತಿ ಜನರಿಗೆ ತಲುಪುತ್ತಿತ್ತು. ಏನಿದು ಯಶೋ ಮಾರ್ಗ? ಹೊಸ ವೆಬ್ ಸೈಟ್ ನಲ್ಲಿ ಏನಿದೆ? ಮುಂದೆ ಓದಿ,..[ದಾಹ ತೀರಿಸಿ ಉತ್ತರ ಕರ್ನಾಟಕ ಜನತೆಯ ಹೃದಯ ಗೆದ್ದ ಯಶ್]

ಯಶೋಮಾರ್ಗ ಆರಂಭಿಸಿದ್ದು ಏಕೆ?
ನನ್ನ ಕಣ್ಮುಂದೆಯೇ ಲಕ್ಷಾಂತರ ಮಂದಿ ಹಸಿವೆಯಿಂದ ಬಳಲುವುದನ್ನು, ಜೀವನಕ್ಕೆ ಬೇಕಾದ ಮೂಲಭೂತ ಸೌಕರ್ಯಗಳಿಲ್ಲದೇ ಸೊರಗುವುದನ್ನು, ಬಿಸಿಲ ಬೇಗೆಯಲ್ಲಿ ಒಣಗುವುದನ್ನು ನಾನು ನೋಡಿದ್ದೇನೆ. ಅವರ ಕಷ್ಟಗಳನ್ನು ನೀಗಿಸುವುದಕ್ಕೆ ಸರ್ಕಾರ ಪ್ರಯತ್ನಿಸುತ್ತಿದೆ. ಸಹೃದಯರು ಶ್ರಮಿಸುತ್ತಿದ್ದಾರೆ. ಅದು ಕೇವಲ ಸರ್ಕಾರದ ಕರ್ತವ್ಯ ಅಂತ ಕೈ ಕಟ್ಟಿ ಕೂರುವುದು ಸರಿ ಅಂತ ನನಗೇಕೋ ಅನ್ನಿಸುತ್ತಿಲ್ಲ. ಹೀಗಾಗಿ ನನ್ನ ಕೈಲಾದ್ದನ್ನು ಮಾಡುವುದಕ್ಕೆ ಮುಂದಾಗಿದ್ದೇನೆ ಎಂದು ಯಶ್ ಹೇಳಿಕೊಂಡಿದ್ದಾರೆ

ಯಶೋಮಾರ್ಗ ಫೌಂಡೇಶನ್
ವ್ಯವಸ್ಥೆಯನ್ನು ದೂರುವುದು ಸುಲಭ. ಯಾರ ಕಡೆಗೋ ಬೆರಳು ತೋರಿಸಿ, ನೀವೇನು ಮಾಡಿದ್ದೀರಿ ಎಂದು ಕೇಳುವ ಮೊದಲು, ನಾನೇನು ಮಾಡಿದ್ದೇನೆ ಎಂದು ನನ್ನನ್ನು ಕೇಳಿಕೊಳ್ಳುವುದು ಮಾನವೀಯತೆ. ಅದು ನಮ್ಮ ಹಿರಿಯರು ನನಗೆ ಕಲಿಸಿದ ಪಾಠ. ಅವರ ಮಾರ್ಗದರ್ಶನ, ಆಶೀರ್ವಾದ ಮತ್ತು ಹಾರೈಕೆಯೊಂದಿಗೆ ನಾನು ನನ್ನ ಪುಟ್ಟ ಕೈಗಳಿಂದ ಏನನ್ನಾದರೂ ಮಾಡಲೇಬೇಕು ಎಂದು ನಿರ್ಧಾರ ಮಾಡಿದ್ದೇನೆ.
ಅದರ ಫಲವಾಗಿಯೇ ಹುಟ್ಟಿಕೊಂಡದ್ದು ಯಶೋಮಾರ್ಗ ಫೌಂಡೇಶನ್.

ಕುಡಿಯುವ ನೀರಿನ ಯೋಜನೆ ಕೈಗೊಂಡ ಯಶ್
ಯಶೋಮಾರ್ಗ ಸಂಸ್ಥೆ ಮೂಲಕ ಉತ್ತರ ಕರ್ನಾಟಕದ ಈಗಾಗಲೇ ಒಂದು ಹಂತದ ಯೋಜನೆ ಪೂರೈಸಲಾಗಿದೆ. ಕಲಬುರಗಿ, ರಾಯಚೂರು ಜಿಲ್ಲೆಗಳ 50 ಗ್ರಾಮಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ. ಎರಡನೇ ಹಂತದಲ್ಲಿ ಗದಗ, ಯಾದಗಿರಿ, ಕೊಪ್ಪಳ ಹಾಗೂ ಬಾಗಲಕೋಟೆ ಜಿಲ್ಲೆಯ 15 ಗ್ರಾಮಗಳಿಗೆ ನೀರು ಒದಗಿಸಲಾಗಿದೆ.

ಕೆರೆಗಳ ಪುನರುಜ್ಜೀವನ ಕಾರ್ಯ
ಕೊಪ್ಪಳ ಜಿಲ್ಲೆ ಕೆರೆಗಳ ಹೂಳೆತ್ತುವಿಕೆ, ನೀರು ಒದಗಿಸುವುದು, ಬರಡಾದ ನೆಲವನ್ನು ಹಸಿರು ಭೂಮಿಯಾಗಿ ಪರಿವರ್ತಿಸುವ ಕಾರ್ಯ. ಯಲ್ಬುರ್ಗಾದ ಗೋಶಾಲೆಗಳ ಸಂರಕ್ಷಣೆ. ಹೈದರಾಬಾದ್ ಕರ್ನಾಟಕ ಭಾಗದ ಜನರ ಆಶೋತ್ತರಗಳನ್ನು ಈಡೇರಿಸುವ ಪ್ರಯತ್ನ ನಡೆಸುವುದು ಯಶೋಮಾರ್ಗದ ಮುಂದಿನ ಯೋಜನೆಯಾಗಿದೆ.

ಯಶೋ ಮಾರ್ಗವನ್ನು ಸಂಪರ್ಕಿಸುವುದು ಹೇಗೆ?
ಯಶ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಅವರ ಮುಂದಾಳತ್ವದ ಎನ್ ಜಿಒ 'ಯಶೋಮಾರ್ಗ' ಇಂದು ವೆಬ್ ಲೋಕಕ್ಕೆ ಎಂಟ್ರಿಕೊಟ್ಟಿದೆ. ಯಶೋ ಮಾರ್ಗವನ್ನು ಫೇಸ್ ಬುಕ್, ಟ್ವಿಟ್ಟರ್ ನಲ್ಲಿ ಹಿಂಬಾಲಿಸಬಹುದು, ನಿಮ್ಮ ದೇಣಿಗೆ ನೀಡಬಹುದು, ನಿಮ್ಮ ಸಮಸ್ಯೆ ಹೇಳಿಕೊಳ್ಳಬಹುದು, ಇಮೇಲ್ ಬರೆಯಬಹುದು. ಹೆಚ್ಚಿನ ವಿವರಗಳಿಗೆ ಸಂಪರ್ಕ ವಿಳಾಸ ಇಂತಿದೆ
* Fb.com/Yashomarga
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications