ಡಿಸೆಂಬರ್ 31ರ ರಾತ್ರಿ ಮೆಟ್ರೋ ಪ್ರಯಾಣ ದುಬಾರಿ
ಬೆಂಗಳೂರು, ಡಿಸೆಂಬರ್ 28 : ಹೊಸ ವರ್ಷದ ಆಚರಣೆಗಾಗಿ ಮಹಾತ್ಮಾ ಗಾಂಧಿ ರಸ್ತೆ, ಟ್ರಿನಿಟಿ ವೃತ್ತದೆಡೆಗೆ ಹೋಗುವವರಿಗೆ ಅನುಕೂಲವಾಗುವಂತೆ ಡಿ.31ರ ರಾತ್ರಿ 11 ರಿಂದ ಮಧ್ಯರಾತ್ರಿ 2 ರವರೆಗೆ ನಾಯಂಡಹಳ್ಳಿ-ಬೈಯ್ಯಪ್ಪನಹಳ್ಳಿ ಮತ್ತು ನಾಗಸಂದ್ರ-ಯಲಚೇನಹಳ್ಳಿ ನಡುವೆ ಪ್ರತಿ 15 ನಿಮಿಷದ ಅಂತರದಲ್ಲಿ ರೈಲು ಸೇವೆ ಇರಲಿದೆ.
ಈ ೪ ಗಂಟೆ ವಿಸ್ತರಣಾ ಅವಧಿಯಲ್ಲಿ ಎಂಜಿ ರಸ್ತೆ, ಟ್ರಿನಿಟಿ ವೃತ್ತ ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಿಂದ ಯಾವ ನಿಲ್ದಾಣಕ್ಕೆ ಹೋಗಬೇಕಿದ್ದರೂ 50 ರೂ. ಟಿಕೆಟ್ ದರವಿರಲಿದೆ. ಟ್ರಿನಿಟಿ-ನಾಗಸಂದ್ರ ನಡುವೆ ಹೊರತುಪಡಿಸಿ ಈ ಮೂರು ನಿಲ್ದಾಣದಿಂದ ನಾಲ್ಕೂ ದಿಕ್ಕಿನ ಕೊನೆಯ ನಿಲ್ದಾಣಕ್ಕೆ ಪ್ರಯಾಣಿಸಿದರೂ 50 ರೂ. ಆಗುವುದಿಲ್ಲ. ಆದರೆ ಡಿ.31ರ ರಾತ್ರಿ ಒಂದು ನಿಲ್ದಾಣಕ್ಕೆ ಹೋಗಬೇಕೆಂದರೆ ಅಷ್ಟು ಹಣ ನೀಡಲೇಬೇಕು. ಚಿಲ್ಲರೆ ಸಮಸ್ಯೆಯ ಕಾರಣ ನೀಡಿ ನಿಗಮ ಈ ನಿರ್ಧಾರ ಕೈಗೊಂಡಿದೆ.

ಕ್ರಿಸ್ಮಸ್ ಮತ್ತು ಹೊಸ ವರ್ಷಕ್ಕೆ ವರ್ಷಕ್ಕೆ ಪ್ರತಿ ವರ್ಷ ಮೆಟ್ರೋ ಸೇವೆಯನ್ನು ತಡರಾತ್ರಿ 2 ಗಂಟೆಯವರೆಗೂ ವಿಸ್ತರಿಸುತ್ತಿದೆ. ಕಳೆದ ವರ್ಷ ಡಿ.31ರ ರಾತ್ರಿ 11 ರಿಂದ 2 ಗಂಟೆಯವರೆಗೆ 35 ಸಾವಿರ ಮಂದಿ ಮೆಟ್ರೋ ಬಳಸಿದ್ದರು.
ಅಂದು ಒಟ್ಟಾರೆ ನಮ್ಮ ಮೆಟ್ರೋ ಟಿಕೇಟ್ ಆದಾಯ 39.60 ಲಕ್ಷ ರೂ ಆಗಿದ್ದರೆ, ವಿಸ್ತರಣೆಯಾದ 4 ಗಂಟೆ ಅವಧಿಯಲ್ಲೇ 5.59 ಲಕ್ಷ ರೂ. ಸಂಗ್ರಹವಾಗಿತ್ತು. ಈ ವರ್ಷ ನಾಲ್ಕು ದಿಕ್ಕಿಗೂ ಮೆಟ್ರೋ ವಿಸ್ತರಣೆಯಾಗಿರುವುದರಿಂದ ಎಂಜಿ ರಸ್ತೆ ಆಗಮಿಸಲು ಹೆಚ್ಚಿನ ಜನ ಮೆಟ್ರೋ ಬಳಸಲಿದ್ದಾರೆ. ಹಾಗಾಗಿ ನಿಗಮ ಹೆಚ್ಚಿನ ದರ ನಿಗದಿ ಮಾಡಿದೆ.
-
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು












Click it and Unblock the Notifications