ಲೋಕಸಭೆಯಲ್ಲಿ ಬಿಜೆಪಿ 22 ಸೀಟು ಗೆಲ್ಲಲು ಏರ್ಸ್ಟ್ರೈಕ್ ಸಹಾಯ ಮಾಡಲಿದೆ: ಯಡಿಯೂರಪ್ಪ
ಬೆಂಗಳೂರು, ಫೆಬ್ರವರಿ 28: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ 22 ಕ್ಕೂ ಹೆಚ್ಚು ಸೀಟುಗಳನ್ನು ಗೆಲ್ಲಲು ಈ ಏರ್ಸ್ಟ್ರೈಕ್ ನೆರವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸುವ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿಯವರು 40 ವರ್ಷದ ಬಳಿಕ ಮಾಡಿದ್ದಾರೆ.ಪುಲ್ವಾಮಾದಲ್ಲಿ ನಡೆದ ಆತ್ಮಾಹುತಿ ದಾಳಿಯಲ್ಲಿ 40ಕ್ಕೂ ಹೆಚ್ಚು ಯೋಧರು ಹುತಾತ್ಮರಾಗಿದ್ದರು. ಅವರ ಒಂದೊಂದು ಹನಿ ರಕ್ತಕ್ಕೂ ಸೇಡು ತೀರಿಸಿಕೊಳ್ಳುತ್ತೇನೆ ಎಂದು ಪ್ರಧಾನಿ ಹೇಳಿದ್ದರು ಅದನ್ನು ಮಾಡಿ ತೋರಿಸಿದ್ದಾರೆ.

ಇಡೀ ದೇಶದ ಜನರು ಇದನ್ನು ಇಡೀ ದೇಶದ ಜನರು ಸ್ವಾಗತ ಮಾಡಿದ್ದಾರೆ. ಸರ್ವ ಪಕ್ಷದವರೂ ಸ್ವಾಗತಿಸಿದ್ದಾರೆ.ಯುವಕರು ಸಂತಸ ವ್ಯಕ್ತಪಡಿಸಿದ್ದಾರೆ. ಇದೆಲ್ಲದರ ಪರಿಣಾಮ ಮುಭರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ 22ಕ್ಕೂ ಹೆಚ್ಚು ಸೀಟುಗಳನ್ನು ಗೆಲ್ಲಲು ಸಹಾಯವಾಗಲಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.












Click it and Unblock the Notifications