'ಸಿಎಂಗೆ ನಾಚಿಕೆ ಮಾನ ಮರ್ಯಾದೆ ಇದ್ರೆ, ಜಾರ್ಜ್ ರಾಜೀನಾಮೆ ಪಡೆಯಲಿ'
ಬೆಂಗಳೂರು, ಅಕ್ಟೋಬರ್ 26: ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ ಜಾರ್ಜ್ ಹಾಗೂ ಇಬ್ಬರು ಐಪಿಎಸ್ ಅಧಿಕಾರಿಗಳ ಮೇಲೆ ಸಿಬಿಐ ಎಫ್ ಐ ಆರ್ ದಾಖಲಿಸಿರುವ ಸುದ್ದಿ ಬರುತ್ತಿದ್ದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ಗುರುವಾರ ರಾತ್ರಿ ತುರ್ತು ಸುದ್ದಿಗೋಷ್ಠಿ ನಡೆಸಿದರು.
ಸಿಬಿಐ ಹಾಕಿರುವ ಎಫ್ ಐಆರ್ ನಲ್ಲಿ ಆರೋಪಿ ನಂ.1 ಎನಿಸಿಕೊಂಡಿರುವ ಕೆಜೆ ಜಾರ್ಜ್ ಅವರು ನೈತಿಕ ಹೊಣೆ ಹೊತ್ತು ಈ ಕೂಡಲೇ ರಾಜೀನಾಮೆ ನೀಡಲಿ ಎಂದು ಬಿಎಸ್ ಯಡಿಯೂರಪ್ಪ ಅವರು ಆಗ್ರಹಿಸಿದರು.
ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಗಣಪತಿ ಅವರ ತಂದೆ ಸುಪ್ರೀಂಕೋರ್ಟ್ ಗೆ ಹೋಗಿ ಸಿಬಿಐ ತನಿಖೆಗೆ ಆಗ್ರಹಿಸಿದ್ರು, ಸುಪ್ರೀಂಕೋರ್ಟ್ ಸಿಬಿಐ ತನಿಖೆಗೆ ಆದೇಶ ನೀಡಿತ್ತು. ಸಿಬಿಐ ತನಿಖೆ ಹಿನ್ನೆಲೆ ಸಚಿವ ಜಾರ್ಜ್ ವಿರುದ್ಧ ಎಫ್ ಐ ಆರ್ ದಾಖಲು ಮಾಡಿದೆ.

ಸಿಎಂಗೆ ಸ್ವಲ್ಪವಾದರೂ ನಾಚಿಕೆ ಇದ್ಯಾ
ಸಿಎಂ ಪರಮಾಪ್ತ ಜಾರ್ಜ್ ರನ್ನು ಆರೋಪಿ 1 ಎಂದು ಉಲ್ಲೇಖಿಸಿದೆ. ಹೀಗಾಗಿ, ಸಿಎಂಗೆ ಸ್ವಲ್ಪವಾದರೂ ನಾಚಿಕೆ, ಮಾನ, ಮರ್ಯಾದೆ ಇದ್ದರೆ ಜಾರ್ಜ್ ರನ್ನು ತಕ್ಷಣ ಸಚಿವ ಸಂಪುಟದಿಂದ ಕೈಬಿಡಬೇಕು, ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದರು.

ಸಾಕ್ಷಿ ನಾಶ ಸಂಭವ ಹೆಚ್ಚು
ಸಚಿವ ಸ್ಥಾನದಲ್ಲಿ ಜಾರ್ಜ್ ಮುಂದುವರೆದರೆ ಪ್ರಕರಣದ ಸಾಕ್ಷಿ ನಾಶ ಸಂಭವ ಹೆಚ್ಚು,ಹೀಗಾಗಿ ತಕ್ಷಣ ಸಚಿವ ಸ್ಥಾನದಿಂದ ಕೈಬಿಟ್ಟು ತನಿಖೆಗೆ ಸಹಕರಿಸಬೇಕು. ಸಿಎಂ ಸಿದ್ದರಾಮಯ್ಯ ಜಾರ್ಜ್ ರಾಜೀನಾಮೆ ವಿಚಾರವಾಗಿ ಈಗ ಇನ್ಯಾವುದು ಕುಂಟ ನೆಪ ಹೇಳ್ತಾರೋ ಗೊತ್ತಿಲ್ಲ.

ಬಿಜೆಪಿ ಬೃಹತ್ ಹೋರಾಟ ನಡೆಸಲಿದೆ
ಒಂದು ವೇಳೆ ಸಿದ್ದರಾಮಯ್ಯ ಅವರು ರಾಜೀನಾಮೆ ಪಡೆಯದಿದ್ದರೆ ಬಿಜೆಪಿ ಬೃಹತ್ ಹೋರಾಟ ನಡೆಸಲಿದೆ. ಈ ಹಿಂದೆಯೇ ಜಾರ್ಜ್ ವಿರುದ್ಧ ಸತ್ಯಾಗ್ರಹಕ್ಕೆ ನಿರ್ಧರಿಸಿದ್ದೆವು. ಸಿಬಿಐ ಜಾರ್ಜ್ ವಿರುದ್ಧ ತನಿಖೆ ಆರಂಭಿಸಿದ ಮೇಲೆ ಹೋರಾಟ ಮಾಡುವುದಾಗಿ ತಿಳಿಸಿದ್ದೆ.

ಯಾವುದೋ ಸಚಿವರು ಸರ್ಟಿಫಿಕೇಟ್ ಕೊಟ್ರೆ ಆಗಲ್ಲ
ಸುಪ್ರೀಮ್ ಕೋರ್ಟ್ ಗೆ ಹೋಗಿದ್ದು ಗಣಪತಿ ತಂದೆ- ಸುಪ್ರೀಂ ಆದೇಶದ ಬಗ್ಗೆ ಸಿದ್ದರಾಮಯ್ಯ ಸಂಪುಟದ ಸಚಿವರು ಹಗುರವಾಗಿ ಮಾತನಾಡಿದ್ರೆ ರಾಜ್ಯದ ಜನ ಅರ್ಥ ಮಾಡ್ಕೋತಾರೆ- ಜಾರ್ಜ್ ಗೆ ಸಿಎಂ, ಯಾವುದೋ ಸಚಿವರು ಸರ್ಟಿಫಿಕೇಟ್ ಕೊಟ್ರೆ ಆಗಲ್ಲ - ಯಡಿಯೂರಪ್ಪ
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications