ಬಿಎಸ್ವೈ ವಿಲೀನಕ್ಕೆ ಸ್ಪೀಕರ್ ಕಾಗೋಡು ಏನನ್ತಾರೆ?

ಎರಡೂ ಪಕ್ಷಗಳ ನಾಯಕರ ನಿರ್ಧಾರದಂತೆ ವಿಲೀನಕ್ಕೆ ಒಪ್ಪಿಗೆ ಸೂಚಿಸಿ ಪತ್ರ ಕೊಟ್ಟಿದ್ದೇವೆ. ಬಿಜೆಪಿಯನ್ನು ಬಲಪಡಿಸುವುದು, ಮೋದಿಯನ್ನು ಪ್ರಧಾನಿಯನ್ನಾಗಿ ಮಾಡುವುದೇ ನನ್ನ ಮುಂದಿರುವ ಗುರಿಯಾಗಿದೆ ಎಂದು ಹೇಳಿದ್ದಾರೆ. ಈ ಸಂದರ್ಭದಲ್ಲಿ ಶೋಭಾ ಕರಂದ್ಲಾಜೆ, ಸಿಎಂ ಉದಾಸಿ, ರೇಣುಕಾಚಾರ್ಯ, ಎಂಡಿ ಲಕ್ಷ್ಮಿನಾರಾಯಣ, ಎಸ್ಆರ್ ವಿಶ್ವನಾಥ್, ಸಿಟಿ ರವಿ ಮೊದಲಾದವರು ಹಾಜರಿದ್ದರು.
ಈ ಮಧ್ಯೆ, ಗದಗದಲ್ಲಿ ಮಾತನಾಡಿರುವ ಮಾಜಿ ಉಪ ಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ಅವರು ಶ್ರೀರಾಮುಲು ನೇತೃತ್ವದ ಬಿಎಸ್ಆರ್ ಕಾಂಗ್ರೆಸ್ ಪಕ್ಷವು ಶೀಘ್ರವೇ ಬಿಜೆಪಿ ಜತೆ ವಿಲೀನವಾಗಲಿದೆ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಸ್ಪೀಕರ್ ಕಾಗೋಡು ತಿಮ್ಮಪ್ಪ ಏನನ್ತಾರೆ?
ಬಿಜೆಪಿಯಿಂದ ಅಭಿಪ್ರಾಯ ಬಂದ ನಂತರ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಸ್ಪಷ್ಟಪಡಿಸಿದ್ದಾರೆ. ಯಡಿಯೂರಪ್ಪ ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ತಲಾ 40 ಸದಸ್ಯರನ್ನು ಹೊಂದಿವೆ. ಮತ ಗಳಿಕೆ ಆಧಾರದಲ್ಲಿ ಜೆಡಿಎಸ್ ಮುಂದೆ ಇದ್ದ ಕಾರಣ ಅದಕ್ಕೆ ಅಧಿಕೃತ ವಿರೋಧ ಪಕ್ಷದ ಸ್ಥಾನಮಾನ ನೀಡಲಾಗಿತ್ತು. ಈಗ ಯಡಿಯೂರಪ್ಪ ಮತ್ತು ಇತರೆ ಶಾಸಕರಾದ ಯುಬಿ ಬಣಕಾರ್, ಗುರುಪಾದಪ್ಪ ನಾಗಮಾರಪಲ್ಲಿ, ವಿಶ್ವನಾಥ್ ಪಾಟೀಲ್ ಅವರು ತಮ್ಮನ್ನು ಬಿಜೆಪಿ ಸದಸ್ಯ ಎಂದು ಮಾನ್ಯತೆ ಮಾಡುವಂತೆ ಮನವಿ ಕೊಟ್ಟಿದ್ದಾರೆ. ಆದರೆ ಈ ಬಗ್ಗೆ ಬಿಜೆಪಿ ಅಭಿಪ್ರಾಯ ಕೂಡ ಮುಖ್ಯವಾಗಿದೆ. ಅವರು ಸೇರಿಸಿಕೊಂಡಿದ್ದಾರೆಯೇ ಇಲ್ಲವೇ ಎಂಬುದು ಗೊತ್ತಿಲ್ಲ. ಈ ವಿಚಾರದಲ್ಲಿ ಬಿಜೆಪಿ ಪತ್ರ ಕೊಟ್ಟ ನಂತರ ನಾನು ನನ್ನ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ಪಕ್ಷಾಂತರ ನಿಷೇಧ ಕಾಯ್ದೆ?
ಇನ್ನು, ಪಕ್ಷಾಂತರ ನಿಷೇಧ ಕಾಯ್ದೆ ಬಗ್ಗೆ ಪ್ರತಿಕ್ರಿಯಿಸಿದ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು 'ಅದು ನನ್ನ ವ್ಯಾಪ್ತಿಗೆ ಬರುವುದಿಲ್ಲ. ಅದನ್ನು ಚುನಾವಣಾ ಆಯೋಗ ನಿರ್ಧಾರ ಮಾಡುತ್ತದೆ'ಎಂದು ಕ್ಲುಪ್ತವಾಗಿ ತಿಳಿಸಿದರು.
ಆಯೋಗದ ಲೆಕ್ಕಾಚಾರವೇನು?
ಎಲ್ಲಾ ಶಾಸಕರು ಸ್ವಯಂಪ್ರೇರಿತರಾಗಿ ಬಿಜೆಪಿಯಲ್ಲಿ ವಿಲೀನಗೊಳಿಸುತ್ತಿರುವ ಪತ್ರವನ್ನು ಚುನಾವಣಾ ಆಯೋಗಕ್ಕೆ ಪ್ರತ್ಯೇಕವಾಗಿ ನೀಡಬೇಕು. ಈ ಪ್ರಕ್ರಿಯೆಗಳು ಪೂರ್ಣಗೊಳ್ಳಲು ಮೂರ್ನಾಲ್ಕು ದಿನ ಹಿಡಿಯಲಿದೆ. ಪಕ್ಷಾಂತರ ನಿಷೇಧ ಕಾಯ್ದೆ ಪ್ರಕಾರ ಮೂರನೇ ಒಂದರಷ್ಟು ಶಾಸಕರು ತಮಗೆ ಇಷ್ಟವಾದ ಪಕ್ಷಕ್ಕೆ ವಲಸೆ ಹೋಗಲು ಕಾನೂನಿನಲ್ಲಿ ಅವಕಾಶವಿದೆ. ಹೀಗಾಗಿ ಬಿಜೆಪಿ-ಕೆಜೆಪಿ ವಿಲೀನಕ್ಕೆ ಯಾವ ಅಡ್ಡಿಗಳೂ ಎದುರಾಗುವುದಿಲ್ಲ ಎನ್ನಲಾಗಿದೆ.
-
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price












Click it and Unblock the Notifications