ಮೋದಿ ಆಗಮನ ಹಿನ್ನೆಲೆ ಸಿದ್ಧತೆ ಪರಿಶೀಲಿಸಿದ ಬಿಎಸ್ ಯಡಿಯೂರಪ್ಪ
ಬೆಂಗಳೂರು, ಫೆಬ್ರವರಿ 02 : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಕಾರ್ಯಕ್ರಮದ ಪೂರ್ವ ಸಿದ್ಧತೆಯನ್ನು ಪರಿಶೀಲಿಸಿದರು.
ಫೆಬ್ರವರಿ 4 ರಂದು ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಆಗಮಿಸಲಿದ್ದಾರೆ, ಅಂದು ನಗರದ ಅರಮನೆ ಮೈದಾನದಲ್ಲಿ ಬಿಜೆಪಿ ಪರಿವರ್ತನಾ ಅಮಾವೇಶದ ಸಮಾರೋಪ ಕಾರ್ಯಕ್ರಮವೂ ಕೂಡ ಜರುಗಲಿದೆ. ಅಂದು ಪ್ರಧಾನಿ ಅಗಮನ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಬೆಂಗಳೂರು ಬಂದ್ ಗೆ ಕರೆ ನೀಡಿದ್ದಾರೆ.
ಫೆ.4ರಂದು ಅರಮನೆ ಮೈದಾನದಲ್ಲಿ ಮೋದಿ ಮೋಡಿ
ಇದೆಲ್ಲದರ ಹಿನ್ನೆಲೆಯಲ್ಲಿ ಅರಮನೆ ಮೈದಾನದಲ್ಲಿ ಕೈಗೊಂಡಿರುವ ವೇದಿಕೆ ನಿರ್ಮಾಣ ಕಾಮಗಾರಿ ಹಾಗೂ ಉಳಿದಸಿದ್ಧತೆಗಳನ್ನು ಪರಿಶೀಲಿಸಿದರು. ಈ ವೇಳೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಮಾಜಿ ಸಚಿವ ಗೋವಿಂದ ಕಾರಜೋಳ, ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಸಾಥ್ ನೀಡಿದರು.
Comments
bengaluru narendra modi karnataka palace ground ಬೆಂಗಳೂರು ನರೇಂದ್ರ ಮೋದಿ ಕರ್ನಾಟಕ ಅರಮನೆ ಮೈದಾನ yediyurappa ಯಡಿಯೂರಪ್ಪ
English summary
State BJP chief BS Yeddyurappa visited palace ground and inspected preparations of rally on Sunday which prime minister Narendra modi will address.
Story first published: Friday, February 2, 2018, 12:22 [IST]