ಬಿಜೆಪಿಯ ಬೆನ್ನು ಬಿಡದೆ ಕಾಡುತ್ತಿದೆ ಅನಂತ್ಕುಮಾರ್ ಹೆಗ್ಡೆಯ ಆ ಹೇಳಿಕೆ
ಬಿಜೆಪಿಯ ಕೇಂದ್ರ ಸಚಿವ ಅನಂತ್ಕುಮಾರ್ ಹೆಗ್ಡೆ ಅವರ 'ಸಂವೀಧಾನ ಬದಲಿಕೆ' ಹೇಳಿಕೆಯು ಬಿಜೆಪಿಯ ಬೆನ್ನು ಬಿಡದಂತೆ ಕಾಡುತ್ತಿರುವಂತಿದೆ.
ಬಿಜೆಪಿಗರು ದಲಿತ ಸಮಾವೇಶ ಮಾಡಲಿ, ದಲಿತ ಸಂವಾದ ಮಾಡಲಿ, ಅಂಬೇಡ್ಕರ್ ಜಯಂತಿ ಮಾಡಲಿ ಅನಂತ್ಕುಮಾರ್ ಹೆಗ್ಡೆ ಹೇಳಿಕೆ ಬಗ್ಗೆ ಮತ್ತೆ ಮತ್ತೆ ಪ್ರಶ್ನೆಗಳು ಏಳುತ್ತಲೇ ಇವೆ. ಬಿಜೆಪಿ ನಾಯಕರು ಮುಜುಗರಕ್ಕೆ ಒಳಗಾಗುತ್ತಲೇ ಇದ್ದಾರೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ
ಕೆಲ ತಿಂಗಳುಗಳ ಹಿಂದೆ 'ಸಂವಿಧಾನ ಬದಲಿಸಲೆಂದೇ ನಾವು (ಬಿಜೆಪಿ) ಅಧಿಕಾರಕ್ಕೆ ಬಂದಿರುವುದು' ಎಂದು ಸಚಿವ ಅನಂತಕುಮಾರ್ ಹೆಗ್ಡೆ ಅವರು ಹೇಳಿದ್ದರು. ಇದಕ್ಕೆ ದಲಿತ ಸಂಘಟನೆಗಳು ಭಾರಿ ವಿರೋಧ ವ್ಯಕ್ತಪಡಿಸಿದ್ದವು, ಹಲವು ಪ್ರತಿಭಟನೆಗಳು ಆಗಿತ್ತು, ಬಿಜೆಪಿಯು ದಲಿತ ವಿರೋಧಿ ಎಂಬ ಚರ್ಚೆ ರಾಜ್ಯಾದ್ಯಂತ ಹರಡಿತ್ತು. ಅದು ಹಾಗೇ ಮುಂದುವರೆದಂತೆ ಕಾಣುತ್ತಿದೆ.

ಇಂದು ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರಿಗೆ ಮತ್ತೆ ಅನಂತ್ಕುಮಾರ್ ಹೆಗ್ಡೆ ಅವರ 'ಸಂವಿಧಾನ ಬದಲಾವಣೆ' ಹೇಳಿಕೆ ಎದುರಾಯಿತು.
ದಲಿತ ಮುಖಂಡರು ಕೆಲವರು 'ಅನಂತ್ಕುಮಾರ್ ಹೆಗ್ಡೆ ಅವರು ಸಂವಿಧಾನ ಬದಲಿಸಲೆಂದೇ ನಾವು ಅಧಿಕಾರಕ್ಕೆ ಬಂದಿರುವುದು ಎಂದಿದ್ದಾರೆ ಅವರ ವಿರುದ್ಧ ಏನು ಕ್ರಮ ಕೈಗೊಂಡಿದ್ದೀರಿ' ಎಂದು ನೇರವಾಗಿ ಪ್ರಶ್ನೆ ಮಾಡಿದರು.
ದಲಿತ ಮುಖಂಡರ ಪ್ರಶ್ನೆಯಿಂದ ಮುಜುಗರಕ್ಕೆ ಒಳಗಾದ ಯಡಿಯೂರಪ್ಪ ಅವರು 'ಮೋದಿ ಅವರು ಅನಂತ್ಕುಮಾರ್ ಹೆಗ್ಡೆಗೆ ಕ್ಷಮೆ ಕೇಳಲು ಸೂಚಿಸಿದ್ದಾರೆ' ಎಂದು ಸಂದರ್ಭಕ್ಕೆ ತಕ್ಕ ಉತ್ತರ ನೀಡಿ ಜಾಗ ಖಾಲಿ ಮಾಡಿದರು.
ಕೆಲವು ದಿನಗಳ ಮುಂಚೆ ಮೈಸೂರಿನಲ್ಲಿ ಸಹ ಇದೇ ರೀತಿ ಆಗಿತ್ತು, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಮುಂದೆಯೇ ದಲಿತ ಮುಖಂಡರು ಅನಂತ್ಕುಮಾರ್ ಹೆಗ್ಡೆ ಅವರ ಹೇಳಿಕೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಬಿಜೆಪಿ ಮತ್ತು ಅಮಿತ್ ಶಾಗೆ ಧಿಕ್ಕಾರ ಕೂಗಿದ್ದರು.
'ಅನಂತ್ಕುಮಾರ್ ಹೆಗ್ಡೆ ಹೇಳಿಕೆಗೂ ಪಕ್ಷಕ್ಕೂ ಸಂಬಂಧ ಇಲ್ಲ' ಎಂದು ಹೇಳಿದ್ದ ಅಮಿತ್ ಶಾ ಡ್ಯಾಮೆಜ್ ರಿಕವರಿ ಮಾಡಿಕೊಳ್ಳುವ ಪ್ರಯತ್ನ ಮಾಡಿದ್ದರು.
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications