ಬಿಜೆಪಿಯ ಬೆನ್ನು ಬಿಡದೆ ಕಾಡುತ್ತಿದೆ ಅನಂತ್ಕುಮಾರ್ ಹೆಗ್ಡೆಯ ಆ ಹೇಳಿಕೆ
ಬಿಜೆಪಿಯ ಕೇಂದ್ರ ಸಚಿವ ಅನಂತ್ಕುಮಾರ್ ಹೆಗ್ಡೆ ಅವರ 'ಸಂವೀಧಾನ ಬದಲಿಕೆ' ಹೇಳಿಕೆಯು ಬಿಜೆಪಿಯ ಬೆನ್ನು ಬಿಡದಂತೆ ಕಾಡುತ್ತಿರುವಂತಿದೆ.
ಬಿಜೆಪಿಗರು ದಲಿತ ಸಮಾವೇಶ ಮಾಡಲಿ, ದಲಿತ ಸಂವಾದ ಮಾಡಲಿ, ಅಂಬೇಡ್ಕರ್ ಜಯಂತಿ ಮಾಡಲಿ ಅನಂತ್ಕುಮಾರ್ ಹೆಗ್ಡೆ ಹೇಳಿಕೆ ಬಗ್ಗೆ ಮತ್ತೆ ಮತ್ತೆ ಪ್ರಶ್ನೆಗಳು ಏಳುತ್ತಲೇ ಇವೆ. ಬಿಜೆಪಿ ನಾಯಕರು ಮುಜುಗರಕ್ಕೆ ಒಳಗಾಗುತ್ತಲೇ ಇದ್ದಾರೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ
ಕೆಲ ತಿಂಗಳುಗಳ ಹಿಂದೆ 'ಸಂವಿಧಾನ ಬದಲಿಸಲೆಂದೇ ನಾವು (ಬಿಜೆಪಿ) ಅಧಿಕಾರಕ್ಕೆ ಬಂದಿರುವುದು' ಎಂದು ಸಚಿವ ಅನಂತಕುಮಾರ್ ಹೆಗ್ಡೆ ಅವರು ಹೇಳಿದ್ದರು. ಇದಕ್ಕೆ ದಲಿತ ಸಂಘಟನೆಗಳು ಭಾರಿ ವಿರೋಧ ವ್ಯಕ್ತಪಡಿಸಿದ್ದವು, ಹಲವು ಪ್ರತಿಭಟನೆಗಳು ಆಗಿತ್ತು, ಬಿಜೆಪಿಯು ದಲಿತ ವಿರೋಧಿ ಎಂಬ ಚರ್ಚೆ ರಾಜ್ಯಾದ್ಯಂತ ಹರಡಿತ್ತು. ಅದು ಹಾಗೇ ಮುಂದುವರೆದಂತೆ ಕಾಣುತ್ತಿದೆ.

ಇಂದು ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರಿಗೆ ಮತ್ತೆ ಅನಂತ್ಕುಮಾರ್ ಹೆಗ್ಡೆ ಅವರ 'ಸಂವಿಧಾನ ಬದಲಾವಣೆ' ಹೇಳಿಕೆ ಎದುರಾಯಿತು.
ದಲಿತ ಮುಖಂಡರು ಕೆಲವರು 'ಅನಂತ್ಕುಮಾರ್ ಹೆಗ್ಡೆ ಅವರು ಸಂವಿಧಾನ ಬದಲಿಸಲೆಂದೇ ನಾವು ಅಧಿಕಾರಕ್ಕೆ ಬಂದಿರುವುದು ಎಂದಿದ್ದಾರೆ ಅವರ ವಿರುದ್ಧ ಏನು ಕ್ರಮ ಕೈಗೊಂಡಿದ್ದೀರಿ' ಎಂದು ನೇರವಾಗಿ ಪ್ರಶ್ನೆ ಮಾಡಿದರು.
ದಲಿತ ಮುಖಂಡರ ಪ್ರಶ್ನೆಯಿಂದ ಮುಜುಗರಕ್ಕೆ ಒಳಗಾದ ಯಡಿಯೂರಪ್ಪ ಅವರು 'ಮೋದಿ ಅವರು ಅನಂತ್ಕುಮಾರ್ ಹೆಗ್ಡೆಗೆ ಕ್ಷಮೆ ಕೇಳಲು ಸೂಚಿಸಿದ್ದಾರೆ' ಎಂದು ಸಂದರ್ಭಕ್ಕೆ ತಕ್ಕ ಉತ್ತರ ನೀಡಿ ಜಾಗ ಖಾಲಿ ಮಾಡಿದರು.
ಕೆಲವು ದಿನಗಳ ಮುಂಚೆ ಮೈಸೂರಿನಲ್ಲಿ ಸಹ ಇದೇ ರೀತಿ ಆಗಿತ್ತು, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಮುಂದೆಯೇ ದಲಿತ ಮುಖಂಡರು ಅನಂತ್ಕುಮಾರ್ ಹೆಗ್ಡೆ ಅವರ ಹೇಳಿಕೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಬಿಜೆಪಿ ಮತ್ತು ಅಮಿತ್ ಶಾಗೆ ಧಿಕ್ಕಾರ ಕೂಗಿದ್ದರು.
'ಅನಂತ್ಕುಮಾರ್ ಹೆಗ್ಡೆ ಹೇಳಿಕೆಗೂ ಪಕ್ಷಕ್ಕೂ ಸಂಬಂಧ ಇಲ್ಲ' ಎಂದು ಹೇಳಿದ್ದ ಅಮಿತ್ ಶಾ ಡ್ಯಾಮೆಜ್ ರಿಕವರಿ ಮಾಡಿಕೊಳ್ಳುವ ಪ್ರಯತ್ನ ಮಾಡಿದ್ದರು.
-
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಬಿ.ಎಸ್.ಯಡಿಯೂರಪ್ಪ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್












Click it and Unblock the Notifications