ಮನವೊಲಿಕೆ ಯತ್ನ ವಿಫಲ, ಮುಂದುವರಿದ ಬಿಎಸ್ವೈ ಧರಣಿ
ಬೆಂಗಳೂರು, ನ. 20 : ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಅಹೋರಾತ್ರಿ ಧರಣಿಯನ್ನು ಕೈ ಬಿಡುವಂತೆ ಮನವೊಲಿಸುವ ಯತ್ನ ವಿಫಲವಾಗಿದೆ. ಆದ್ದರಿಂದ ಇನ್ನೂ ನಾಲ್ಕು ದಿನ ಬೆಂಗಳೂರಿನಲ್ಲಿ ಯಡಿಯೂರಪ್ಪ ಅವರ ಧರಣಿ ಮುಂದುವರೆಯಲಿದೆ. ಯಡಿಯೂರಪ್ಪ ಮನವೊಲಿಕೆ ಯತ್ನದಿಂದ ಸಚಿವ ಟಿ.ಬಿ.ಜಯಚಂದ್ರ ಹಿಂದೆ ಸರಿದಿದ್ದಾರೆ.
ಬೆಂಗಳೂರಿನ ಆನಂದ್ ರಾವ್ ವೃತ್ತದ ಬಳಿ ಶಾದಿಭಾಗ್ಯ ಯೋಜನೆಯನ್ನು ಎಲ್ಲಾ ವರ್ಗಗಳಿಗೆ ವಿಸ್ತರಿಸರಣೆ ಮಾಡಬೇಕು ಹಾಗೂ ಎಪಿಎಲ್ ಕಾರ್ಡ್ದಾರರಿಗೂ ಪಡಿತರ ವಿತರಣೆ ಮಾಡಬೇಕು ಎಂಬ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕೆಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಡೆಸುತ್ತಿರುವ ಅಹೋರಾತ್ರಿ ಧರಣಿ ಬುಧವಾರ 20ನೇ ದಿನಕ್ಕೆ ಕಾಲಿಟ್ಟಿದೆ.

ಧರಣಿಯ 19ನೇದಿನ ಕಾನೂನು ಮತ್ತು ಸಂಸದೀಯ ಸಚಿವ ಟಿ.ಬಿ.ಜಯಚಂದ್ರ ಯಡಿಯೂರಪ್ಪ ಮನವೊಲಿಕೆಗೆ ಮುಂದಾಗಿದ್ದರು. ಅದಕ್ಕಾಗಿ ವೇದಿಕೆಯನ್ನು ಸಿದ್ದಗೊಳಿಸಿದ್ದರು. ವಾಟಾಳ್ ನಾಗರಾಜ್ ಮತ್ತು ಎಂ.ಡಿ.ಲಕ್ಷ್ಮೀನಾರಾಯಣ ಅವರೊಂದಿಗೆ ಧರಣಿ ಸ್ಥಳಕ್ಕೆ ತೆರಳಿ, ಯಡಿಯೂರಪ್ಪ ಅವರ ಮನವೊಲಿಸಲು ತೀರ್ಮಾನಿಸಿದ್ದರು. (ಧರಣಿ ನಿಲ್ಲಿಸುವುದಿಲ್ಲ ಸಿದ್ದುಗೆ ಯಡಿಯೂರಪ್ಪ ಸವಾಲು)
ಆದರೆ, ಅದಕ್ಕೂ ಮೊದಲೇ ಜಯಚಂದ್ರ ಅವರಿಗೆ ಸ್ಪಷ್ಟ ಸಂದೇಶ ಕಳುಹಿಸಿದ ಯಡಿಯೂರಪ್ಪ ತಾವು ಧರಣಿ ಕೈ ಬಿಡುವುದಿಲ್ಲ ಎಂಬ ಸ್ಪಷ್ಟ ಸಂದೇಶ ರವಾನಿಸಿದರು. ಇದರಿಂದ ಜಯಚಂದ್ರ ತಮ್ಮ ಆಲೋಚನೆಯನ್ನು ಹಿಂಪಡೆದರು. ಈ ಕುರಿತು ಜಯಚಂದ್ರ ಅವರು ಹೇಳಿಕೆ ನೀಡಿದ್ದು, ಅಧಿವೇಶದನ ಹಿನ್ನಲೆಯಲ್ಲಿ ಧರಣಿ ಕೈಬಿಡುವಂತೆ ಮನವೊಲಿಕೆ ಮಾಡಲು ಮುಂದಾಗಿದ್ದೆ.
ಒಬ್ಬ ಸಚಿವನಾಗಿ ಪ್ರತಿಪಕ್ಷ ನಾಯಕರು ಧರಣಿ ಮಾಡುವುದನ್ನು ತಡೆಯುವುದು ನನ್ನ ಕರ್ತವ್ಯವಾಗಿತ್ತು. ಆದ್ದರಿಂದ ಯಡಿಯೂರಪ್ಪ ಅವರನ್ನು ಸಂಜೆ 4 ಗಂಟೆಗೆ ಭೇಟಿ ಮಾಡಲು ಆಲೋಚಿಸಿದ್ದೆ. ಅದಕ್ಕೂ ಮೊದಲೇ ಧರಣಿ ನಿಲ್ಲಿಸುವುದಿಲ್ಲ ಎಂದು ಯಡಿಯೂರಪ್ಪ ಸ್ಪಷ್ಟ ಸಂದೇಶ ರವಾನಿಸಿದರು. ಆದ್ದರಿಂದ ಸಂಧಾನ ಪ್ರಯತ್ನ ಕೈ ಚೆಲ್ಲಿದೆ ಎಂದು ಜಯಚಂದ್ರ ಹೇಳಿದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications