ಮನವೊಲಿಕೆ ಯತ್ನ ವಿಫಲ, ಮುಂದುವರಿದ ಬಿಎಸ್ವೈ ಧರಣಿ
ಬೆಂಗಳೂರು, ನ. 20 : ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಅಹೋರಾತ್ರಿ ಧರಣಿಯನ್ನು ಕೈ ಬಿಡುವಂತೆ ಮನವೊಲಿಸುವ ಯತ್ನ ವಿಫಲವಾಗಿದೆ. ಆದ್ದರಿಂದ ಇನ್ನೂ ನಾಲ್ಕು ದಿನ ಬೆಂಗಳೂರಿನಲ್ಲಿ ಯಡಿಯೂರಪ್ಪ ಅವರ ಧರಣಿ ಮುಂದುವರೆಯಲಿದೆ. ಯಡಿಯೂರಪ್ಪ ಮನವೊಲಿಕೆ ಯತ್ನದಿಂದ ಸಚಿವ ಟಿ.ಬಿ.ಜಯಚಂದ್ರ ಹಿಂದೆ ಸರಿದಿದ್ದಾರೆ.
ಬೆಂಗಳೂರಿನ ಆನಂದ್ ರಾವ್ ವೃತ್ತದ ಬಳಿ ಶಾದಿಭಾಗ್ಯ ಯೋಜನೆಯನ್ನು ಎಲ್ಲಾ ವರ್ಗಗಳಿಗೆ ವಿಸ್ತರಿಸರಣೆ ಮಾಡಬೇಕು ಹಾಗೂ ಎಪಿಎಲ್ ಕಾರ್ಡ್ದಾರರಿಗೂ ಪಡಿತರ ವಿತರಣೆ ಮಾಡಬೇಕು ಎಂಬ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕೆಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಡೆಸುತ್ತಿರುವ ಅಹೋರಾತ್ರಿ ಧರಣಿ ಬುಧವಾರ 20ನೇ ದಿನಕ್ಕೆ ಕಾಲಿಟ್ಟಿದೆ.

ಧರಣಿಯ 19ನೇದಿನ ಕಾನೂನು ಮತ್ತು ಸಂಸದೀಯ ಸಚಿವ ಟಿ.ಬಿ.ಜಯಚಂದ್ರ ಯಡಿಯೂರಪ್ಪ ಮನವೊಲಿಕೆಗೆ ಮುಂದಾಗಿದ್ದರು. ಅದಕ್ಕಾಗಿ ವೇದಿಕೆಯನ್ನು ಸಿದ್ದಗೊಳಿಸಿದ್ದರು. ವಾಟಾಳ್ ನಾಗರಾಜ್ ಮತ್ತು ಎಂ.ಡಿ.ಲಕ್ಷ್ಮೀನಾರಾಯಣ ಅವರೊಂದಿಗೆ ಧರಣಿ ಸ್ಥಳಕ್ಕೆ ತೆರಳಿ, ಯಡಿಯೂರಪ್ಪ ಅವರ ಮನವೊಲಿಸಲು ತೀರ್ಮಾನಿಸಿದ್ದರು. (ಧರಣಿ ನಿಲ್ಲಿಸುವುದಿಲ್ಲ ಸಿದ್ದುಗೆ ಯಡಿಯೂರಪ್ಪ ಸವಾಲು)
ಆದರೆ, ಅದಕ್ಕೂ ಮೊದಲೇ ಜಯಚಂದ್ರ ಅವರಿಗೆ ಸ್ಪಷ್ಟ ಸಂದೇಶ ಕಳುಹಿಸಿದ ಯಡಿಯೂರಪ್ಪ ತಾವು ಧರಣಿ ಕೈ ಬಿಡುವುದಿಲ್ಲ ಎಂಬ ಸ್ಪಷ್ಟ ಸಂದೇಶ ರವಾನಿಸಿದರು. ಇದರಿಂದ ಜಯಚಂದ್ರ ತಮ್ಮ ಆಲೋಚನೆಯನ್ನು ಹಿಂಪಡೆದರು. ಈ ಕುರಿತು ಜಯಚಂದ್ರ ಅವರು ಹೇಳಿಕೆ ನೀಡಿದ್ದು, ಅಧಿವೇಶದನ ಹಿನ್ನಲೆಯಲ್ಲಿ ಧರಣಿ ಕೈಬಿಡುವಂತೆ ಮನವೊಲಿಕೆ ಮಾಡಲು ಮುಂದಾಗಿದ್ದೆ.
ಒಬ್ಬ ಸಚಿವನಾಗಿ ಪ್ರತಿಪಕ್ಷ ನಾಯಕರು ಧರಣಿ ಮಾಡುವುದನ್ನು ತಡೆಯುವುದು ನನ್ನ ಕರ್ತವ್ಯವಾಗಿತ್ತು. ಆದ್ದರಿಂದ ಯಡಿಯೂರಪ್ಪ ಅವರನ್ನು ಸಂಜೆ 4 ಗಂಟೆಗೆ ಭೇಟಿ ಮಾಡಲು ಆಲೋಚಿಸಿದ್ದೆ. ಅದಕ್ಕೂ ಮೊದಲೇ ಧರಣಿ ನಿಲ್ಲಿಸುವುದಿಲ್ಲ ಎಂದು ಯಡಿಯೂರಪ್ಪ ಸ್ಪಷ್ಟ ಸಂದೇಶ ರವಾನಿಸಿದರು. ಆದ್ದರಿಂದ ಸಂಧಾನ ಪ್ರಯತ್ನ ಕೈ ಚೆಲ್ಲಿದೆ ಎಂದು ಜಯಚಂದ್ರ ಹೇಳಿದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications