ಬಿಎಸ್ ವೈ ವಿರುದ್ಧದ ಡಿನೋಟಿಫೈ ಕೇಸು ತನಿಖೆಗೆ ತಡೆಯಾಜ್ಞೆ ಇಲ್ಲ
ಯಡಿಯೂರಪ್ಪ ವಿರುದ್ಧದ ಡಿನೋಟಿಫೈ ಪ್ರಕರಣ ತನಿಖೆಗೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಣೆ. ಬಿಎಸ್ ಯಡಿಯೂರಪ್ಪ ಅವರಿಗೆ ಮತ್ತೊಂದು ಸಂಕಟ. 2010ರ ಗಂಗೇನಹಳ್ಳಿಯಲ್ಲಿನ ಡಿನೋಟಿಫೈ ಹಗರಣ.
ಬೆಂಗಳೂರು, ಜುಲೈ 3: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧದ ಡಿನೋಟಿಫೈ ಪ್ರಕರಣದ ತನಿಖೆಯನ್ನು ನಿಲ್ಲಿಸಲು ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ರಾಜ್ಯ ಹೈಕೋರ್ಟ್ ಸೋಮವಾರ ತಿರಸ್ಕರಿಸಿದೆ.
ವಿಧಾನಸಭೆ ಚುನಾವಣೆಯ ಟಿಕೆಟ್ ಹಂಚಿಕೆಗೆ ಬಿಜೆಪಿಯಿಂದ ಸಮೀಕ್ಷೆ
ಇದರಿಂದಾಗಿ, ತನಿಖೆಗೆ ತಡೆಯಾಜ್ಞೆ ಬಂದು ಕೊಂಚ ನಿರಾಳತೆಯನ್ನು ನಿರೀಕ್ಷಿಸುತ್ತಿದ್ದ ಬಿಎಸ್ ವೈ ಅವರಿಗೆ ಕೊಂಚ ಹಿನ್ನಡೆಯುಂಟಾಗಿದೆ.
ಏನಿದು ಪ್ರಕರಣ?: 2010ರಲ್ಲಿ ಗಂಗೇನಹಳ್ಳಿ ವ್ಯಾಪ್ತಿಯಲ್ಲಿ 1 ಎಕರೆ 11 ಗುಂಟೆ ಜಮೀನನ್ನು ಡಿನೋಟಿಫೈ ಮಾಡಿರುವ ಪ್ರಕರಣದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಜಯಕುಮಾರ್ ಎಂಬುವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಹಿನ್ನೆಲೆಯಲ್ಲಿ, ನ್ಯಾಯಾಲಯದಿಂದ ತನಿಖೆಗೆ ಆದೇಶವಾಗಿ, ಲೋಕಾಯುಕ್ತ ಅಧಿಕಾರಿಗಳು ಮಾಜಿ ಮುಖ್ಯಮಂತ್ರಿ ಬಿಎಸ್ ವೈ ವಿರುದ್ಧ ತನಿಖೆ ಆರಂಭಿಸಿದ್ದರು.
ಕರ್ನಾಟಕದಲ್ಲಿ ಅವಧಿ ಪೂರ್ವ ಚುನಾವಣೆಗೆ ಬಿಜೆಪಿ, ಜೆಡಿಎಸ್ ಸಿದ್ಧತೆ
ಈ ತನಿಖೆಯನ್ನು ನಿಲ್ಲಿಸುವಂತೆ ಬಿಎಸ್ ವೈ ನ್ಯಾಯಾಲಯದ ಮೆಟ್ಟಿಲೇರಿದ್ದರು.
Comments
English summary
Former Chief Minister B.S. Yeddyurappa's plea to High Court of Karnataka seeking permission to stop the inquiry against him in Gangenahalli De-notify case, has been rejected by judicial bench.
Story first published: Monday, July 3, 2017, 14:53 [IST]