ಯಡಿಯೂರಪ್ಪ ಧರಣಿ ಬೆಳಗಾವಿಗೆ ಸ್ಥಳಾಂತರ
ಬೆಂಗಳೂರು, ನ. 25 : ಶಾದಿಭಾಗ್ಯ ಯೋಜನೆ ವಿಸ್ತರಣೆ ಮತ್ತು ಎಪಿಎಲ್ ಕಾರ್ಡ್ದಾರರಿಗೆ ಹಿಂದಿನಂತೆ ಪಡಿತರ ವಿತರಣೆ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಮಾಜಿ ಸಿಎಂ, ಕೆಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಡೆಸುತ್ತಿದ್ದ 24 ದಿನಗಳ ಧರಣಿ ಭಾನುವಾರ ಬೆಂಗಳೂರಿನಲ್ಲಿ ಅಂತ್ಯಗೊಂಡಿದೆ. ಸೋಮವಾರದಿಂದ ಬೆಳಗಾವಿಯಲ್ಲಿ ಧರಣಿ ಮುಂದುವರೆಸುವುದಾಗಿ ಯಡಿಯೂರಪ್ಪ ಘೋಷಿಸಿದ್ದಾರೆ.
ಭಾನುವಾರ ಧರಣಿ ಅಂತ್ಯಗೊಳಿಸಿದ ನಂತರ ಸುದ್ದಿಗೋಷ್ಠಿ ನಡೆಸಿದ ಯಡಿಯೂರಪ್ಪ, ಸೋಮವಾರ ಅಧಿವೇಶ ಆರಂಭವಾಗುವುದಕ್ಕೂ ಮೊದಲು, ಬೆಳಗಾವಿಯಲ್ಲಿ ಪಕ್ಷದ ಶಾಸಕರೊಂದಿಗೆ ಸಮಾಲೋಚನೆ ನಡೆಸಿ, ಸದನದಲ್ಲೇ ಅಹೋರಾತ್ರಿ ಧರಣಿ ನಡೆಸುವ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

ಭಾನುವಾರ ನನ್ನ ಹೋರಾಟ ಅಂತ್ಯಗೊಂಡಿಲ್ಲ. ರಾಜ್ಯ ಸರ್ಕಾರದ ಜನವಿರೋಧಿ ನೀತಿ ವಿರುದ್ಧ ಹೋರಾಟದ ಆರಂಭವಿದು ಎಂದು ಹೇಳಿದರು. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನ ಮಂಡಲ ಅಧಿವೇಶನದ ಕಲಾಪಗಳಿಗೆ ನಾನು ಅಡ್ಡಿ ಉಂಟುಮಾಡುವುದಿಲ್ಲ. ಸಭಾಧ್ಯಕ್ಷರ ಅನುಮತಿ ಪಡೆದು ಆರಂಭದಲ್ಲಿ ನನ್ನ ಉದ್ದೇಶವನ್ನು ವಿವರಿಸುತ್ತೇನೆ. ನಂತರ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತೇನೆ ಎಂದರು. (ಮನವೊಲಿಕೆ ಯತ್ನ ವಿಫಲ, ಮುಂದುವರಿದ ಬಿಎಸ್ವೈ ಧರಣಿ)
24 ದಿನಗಳಿಂದ ಧರಣಿ ನಡೆಸಿದರೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೌಜನ್ಯಕ್ಕೂ ತಮ್ಮೊಂದಿಗೆ ಮಾತುಕತೆ ನಡೆಸಲಿಲ್ಲ. ಸರ್ವಾಧಿಕಾರಿ. ಅಧಿಕಾರದ ಪಿತ್ತ ಅವರ ನೆತ್ತಿಗೇರಿದೆ ಅವರ ಇಂತಹ ವರ್ತನೆಗೆ ರಾಜ್ಯದ ಜನತೆ ತಕ್ಕ ಉತ್ತರ ನೀಡುತ್ತಾರೆ ಎಂದು ಯಡಿಯೂರಪ್ಪ ವಾಗ್ದಾಳಿ ನಡೆಸಿದರು.
ಅ.31ರಿಂದ ನ.24ರ ವರೆಗೆ ಬಿ.ಎಸ್.ಯಡಿಯೂರಪ್ಪ ಆನಂದ್ ರಾವ್ ವೃತ್ತದಲ್ಲಿ ಆಹೋರಾತ್ರಿ ಧರಣಿ ನಡೆಸಿದರು. ನಗರ ಪೊಲೀಸರು ಎರಡು ಬಾರಿ ಧರಣಿ ಸ್ಥಳ ತೆರವುಗೊಳಿಸುವಂತೆ ನೀಡಿದ ನೋಟಿಸ್ ಅನ್ನು ಅವರು ಸ್ವೀಕರಿಸಿರಲಿಲ್ಲ. ಧರಣಿ ಅಂತ್ಯಗೊಳಿಸುವಂತೆ ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಟಿ.ಬಿ.ಜಯಚಂದ್ರ ನಡೆಸಿದ ಸಂಧಾನವೂ ವಿಫಲವಾಗಿತ್ತು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications