ಮಾತುಕತೆಗೆ ಕರೆದಿಲ್ಲ : ಸಿದ್ದು ವಿರುದ್ಧ ಬಿಎಸ್ವೈ ಆರೋಪ
ಬೆಂಗಳೂರು,ನ. 18 : ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಕೆಜೆಪಿ ಅಧ್ಯಕ್ಷ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. ಅಧಿಕಾರಕ್ಕೆ ಅಂಟಿಕೊಂಡು ಕುಳಿತಿರುವ ಸಿದ್ದರಾಮಯ್ಯ, ತಾವು ಧರಣಿ ನಡೆಸುತ್ತಿದ್ದರೂ ಮಾತುಕತೆ ನಡೆಸುವ ಸೌಜನ್ಯವನ್ನು ತೋರಿಲ್ಲ ಎಂದು ಆರೋಪಿಸಿದ್ದಾರೆ.
ಆನಂದ್ ರಾವ್ ವೃತ್ತದ ಧರಣಿ ಸ್ಥಳದಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿದ ಬಿ.ಎಸ್.ಯಡಿಯೂರಪ್ಪ, ಸಿಎಂ ಸಿದ್ದರಾಮಯ್ಯ ಅಧಿಕಾರಕ್ಕೆ ಅಂಟಿಕೊಂಡು ಕುಳಿತಿದ್ದಾರೆ. ಪ್ರತಿಪಕ್ಷಗಳ ಮಾತಿಗೆ ಅವರು ಮನ್ನಣೆ ನೀಡುತ್ತಿಲ್ಲ ಎಂದು ಆರೋಪಿಸಿದರು. ಧರಣಿ ನಿತರ ಸಮಸ್ಯೆ ಆಲಿಸುವಷ್ಟು ಸಮಯ ಅವರ ಬಳಿ ಇಲ್ಲ, ಇದು ಪ್ರತಿಪಕ್ಷಗಳನ್ನು ಅವರು ಕಡೆಗಣಿಸುತ್ತಿರುವುದಕ್ಕೆ ಸಾಕ್ಷಿ ಎಂದರು.

ಅ.31 ರಿಂದ ಶಾದಿಭಾಗ್ಯ ಯೋಜನೆ ವಿಸ್ತರಣೆ ಹಾಗೂ ಎಪಿಎಲ್ ಕಾರ್ಡ್ದಾರರಿಗೂ ಪಡಿತರ ವಿತರಣೆ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದೇನೆ. ಆದರೆ, ಸಿಎಂ ಸಿದ್ದರಾಮಯ್ಯ ಸೌಜನ್ಯಕ್ಕೂ ಕರೆದು ನಮ್ಮೊಂದಿಗೆ ಮಾತುಕತೆ ನಡೆಸಿಲ್ಲ ಎಂದು ಆರೋಪಿಸಿದರು. ನ.24ರ ವರೆಗೆ ಧರಣಿ ಮುಂದುವರೆಸಿ, ನಂತರ ನ.25 ರಿಂದ ಬೆಳಗಾವಿ ಅಧಿವೇಶನದಲ್ಲಿಯೂ ಧರಣಿ ಮುಂದುವರೆಸುತ್ತೇನೆ ಎಂದು ಯಡಿಯೂರಪ್ಪ ಘೋಷಿಸಿದರು. (ನ.24ರವರೆಗೆ ಧರಣಿ ವಿಸ್ತರಣೆ)
ಅವರ ಧರಣಿ ಪ್ರಚಾರಕ್ಕಾಗಿ : ಯಡಿಯೂರಪ್ಪ ಧರಣಿ ಬಗ್ಗೆ ನವದೆಹಲಿಯಲ್ಲಿರುವ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ಶಾದಿ ಭಾಗ್ಯ ಯೋಜನೆಯನ್ನು ಸಮಾಜದ ಎಲ್ಲ ಬಡವರಿಗೂ ವಿಸ್ತರಿಸುವಂತೆ ಒತ್ತಾಯಿಸಿ ಅವರು ನಡೆಸುತ್ತಿರುವ ಧರಣಿ ಕೇವಲ ಪ್ರಚಾರ ತಂತ್ರ ಎಂದು ಆರೋಪಿಸಿದರು.
ಸರ್ಕಾರ ಬಜೆಟ್ ಮಂಡಿಸುವಾಗಲೇ ಶಾದಿ ಭಾಗ್ಯ ಯೋಜನೆ ಬಗ್ಗೆ ಉಲ್ಲೇಖಿಸಲಾಗಿತ್ತು. ಆಗ ವಿಧಾನಸೌಧದಲ್ಲಿ ಯಡಿಯೂರಪ್ಪ ಉಪಸ್ಥಿತರಿದ್ದರು. ಆಗ ಅವರು ಯೋಜನೆ ಕುರಿತು ಏಕೆ ಪ್ರಸ್ತಾಪಿಸಿಲ್ಲ ಎಂದು ಸಿಎಂ ಪ್ರಶ್ನಿಸಿದರು. ಸದ್ಯ ಅಧಿಕಾರ ಕಳೆದುಕೊಂಡಿದ್ದರಿಂದ ಯಡಿಯೂರಪ್ಪ ಅವರಿಗೆ ಬಡವರ ನೆನಪಾಗುತ್ತಿದೆ. ಆದ್ದರಿಂದ ಅವರೊಂದಿಗೆ ಮಾತುಕತೆ ನಡೆಸಿಲ್ಲ ಎಂದು ಸಮರ್ಥನೆ ನೀಡಿದರು.
ಶಾದಿ ಭಾಗ್ಯ, ಮೂಡನಂಬಿಕೆ ನಿಷೇಧ ವಿಧೇಯಕ ಸೇರಿದಂತೆ ಪ್ರತಿಕ್ಷಗಳು ಕೇಳುವ ಎಲ್ಲಾ ಪ್ರಶ್ನೆಗಳಿಗೂ ನ.25ರಿಂದ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರ ಉತ್ತರ ನೀಡಲಿದೆ. ಅದನ್ನು ಶಾಂತಿಯಿಂದ ಕುಳಿತು ಕೇಳಿಸಿಕೊಳ್ಳುವ ತಾಳ್ಮೆ ಅವರಿಗೆ ಇರಬೇಕು ಎಂದು ಸಿದ್ದರಾಮಯ್ಯ ಹೇಳಿದರು.
-
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ












Click it and Unblock the Notifications