ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಿಢೀರನೆ ತಿರುಪತಿ ತಿಮ್ಮಪ್ಪನ ಮೊರೆ ಹೋದ ಯಡಿಯೂರಪ್ಪ

|
Google Oneindia Kannada News

ಬೆಂಗಳೂರು, ಮೇ 05: ಸಿಎಂ ಕುಮಾರಸ್ವಾಮಿ ಅವರು ಶತೃ ವಿನಾಶಕ್ಕೆ ಹೋಮ-ಹವನದ ಮೊರೆ ಹೋದರೆ ಯಡಿಯೂರಪ್ಪ ಅವರು ತಿರುಪತಿಗೆ ಹೋಗಿ ವೆಂಕಟೇಶ್ವರನ ದರ್ಶನ ಪಡೆದು ಬಂದಿದ್ದಾರೆ.

ದಿಢೀರನೆ ನಿನ್ನೆ ತಿರುಪತಿಗೆ ತೆರಳಿದ ಯಡಿಯೂರಪ್ಪ ಅವರು ದರ್ಶನ ಮುಗಿಸಿ ಅಷ್ಟೆ ಬೇಗ ವಾಪಸ್ ಬಂದಿದ್ದಾರೆ. ಅಲ್ಲಿ ವಿಶೇಷ ಪೂಜೆಯನ್ನು ಅವರು ಕೈಗೊಂಡಿದ್ದರು.

ಆಗಸ್ಟ್‌ ತನಕ ಕರ್ನಾಟಕ ಬಿಜೆಪಿ ಅಧ್ಯಕ್ಷರ ಬದಲಾವಣೆ ಇಲ್ಲ! ಆಗಸ್ಟ್‌ ತನಕ ಕರ್ನಾಟಕ ಬಿಜೆಪಿ ಅಧ್ಯಕ್ಷರ ಬದಲಾವಣೆ ಇಲ್ಲ!

ಇಂದು ಈ ಬಗ್ಗೆ ಸುದ್ದಿಗಾರರೊಂದಿಗೆ ತಮ್ಮ ನಿವಾಸದ ಬಳಿ ಮಾತನಾಡಿದ ಅವರು, ರಾಜ್ಯದಲ್ಲಿ ಬರ ನೀಗಲಿ, ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗಲೆಂದು ದೇವರ ಬಳಿ ಪ್ರಾರ್ಥಿಸಿದ್ದಾಗಿ ಹೇಳಿದ್ದಾರೆ.

Yeddyurappa visited Thirupathi temple on May 04

ಸಿಎಂ ಕುಮಾರಸ್ವಾಮಿ ಅವರು ಹೋಮ ಮಾಡಿಸಲಿಕ್ಕೂ, ಯಡಿಯೂರಪ್ಪ ಅವರು ತಿರುಪತಿಗೆ ಅಚಾನಕ್ಕಾಗಿ ಹೋಗಿರುವುದಕ್ಕೂ ಏನಾದರೂ ಸಂಬಂಧ ವಿದೆಯೇ ಎಂಬ ಚರ್ಚೆಯೂ ಅಲ್ಲಲ್ಲಿ ಕೇಳಿ ಬರುತ್ತಿದೆ.

ಲೋಕ ಫಲಿತಾಂಶದ ಬಳಿಕ ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬದಲಾವಣೆ?ಲೋಕ ಫಲಿತಾಂಶದ ಬಳಿಕ ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬದಲಾವಣೆ?

ಮುಂದುವರೆದು ಮಾತನಾಡಿದ ಯಡಿಯೂರಪ್ಪ ಅವರು, ಉಪಚುನಾವಣೆಯಲ್ಲಿ ನಮ್ಮದೇ ಗೆಲುವು ಎಂದು ಹೇಳಿದ್ದಾರೆ. ಅಲ್ಲದೆ, ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ 22 ಸೀಟು ಪಕ್ಕಾ ಎಂದು ಮತ್ತೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

English summary
BJP president BS Yeddyurappa visited Thirupathi Venkateshwara swamy temple yesterday. He said i prayed for Karnataka's farmer and Narendra Modi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X