ಗೆಳೆಯನ ನೆನೆದು ಭಾವುಕರಾದ ಸಿಎಂ ಯಡಿಯೂರಪ್ಪ
Recommended Video
ಬೆಂಗಳೂರು, ಸೆಪ್ಟೆಂಬರ್ 23: ಮಾಜಿ ಕೇಂದ್ರ ಸಚಿವ ದಿವಂಗತ ಅನಂತ್ಕುಮಾರ್ ಅವರ 60ನೇ ಜನ್ಮ ದಿನ ನಿಮಿತ್ತ ಭಾನುವಾರ ನಗರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಿಎಂ ಯಡಿಯೂರಪ್ಪ ಗೆಳೆಯನ ನೆನೆದು ಭಾವುಕರಾದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಯಡಿಯೂರಪ್ಪ, ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೇರಲು ಮತ್ತು ನಾನು ವೈಯಕ್ತಿಕವಾಗಿ ಇಷ್ಟು ಪ್ರಗತಿ ಸಾಧಿಸಲು ಅನಂತ್ಕುಮಾರ್ ಅವರ ಕೊಡುಗೆ ಅಪಾರವಾಗಿದೆ ಎಂದು ಅವರು ಹೇಳಿದರು.
ಅನಂತ್ಕುಮಾರ್ ಅವರೊಂದಿಗಿನ ಹಳೆಯ ದಿನಗಳನ್ನು ನೆನಪಿಸಿಕೊಂಡ ಯಡಿಯೂರಪ್ಪ, 'ಜನಸಂಘದ ಕಾಲದಿಂದಲೂ ನಾನು ಮತ್ತು ಅನಂತ್ಕುಮಾರ್ ರಾಜ್ಯದಲ್ಲಿ ಪಕ್ಷ ಕಟ್ಟಲು ಸಂಘಟನೆ ಮಾಡಿದ್ದೆವು' ಎಂದು ಹೇಳಿದರು.

'ಪ್ರತಿದಿನವೂ ಪ್ರವಾಸವನ್ನು ನಾವು ನಿಗದಿ ಮಾಡಿಕೊಳ್ಳುತ್ತಿದ್ದೆವು, ನಮಗೆ ಅಟಲ್ ಬಿಹಾರಿ ವಾಜಪೇಯಿ, ಎಲ್.ಕೆ.ಅಡ್ವಾಣಿ ಅವರುಗಳು ಬೆಂಬಲ ನೀಡುತ್ತಿದ್ದರು, ಆ ದಿನಗಳಲ್ಲಿ ನನ್ನ ನೆಚ್ಚಿನ ಒಡನಾಡಿ ಅನಂತ್ಕುಮಾರ್ ಆಗಿದ್ದರು, ರಾಜ್ಯಕ್ಕೆ ಅವರ ಅವಶ್ಯಕತೆ ಇತ್ತು' ಎಂದು ಅವರು ಹೇಳಿದರು.
ಅನಂತ್ಕುಮಾರ್ ಅವರ ಹಲವು ವೈಶಿಷ್ಟ್ಯತೆಗಳನ್ನು ಹೇಳಿದ ಯಡಿಯೂರಪ್ಪ, 'ಅನಂತ್ಕುಮಾರ್ ಅವರ ನೆನಪಿನ ಶಕ್ತಿ ಅಗಾಧವಾಗಿತ್ತು, ಅವರು ಕೇವಲ ಐದು ನಿಮಿಷಗಳಲ್ಲಿ ನನಗೆ ಭಾಷಣ ತಯಾರು ಮಾಡಿಕೊಟ್ಟುಬಿಡುತ್ತಿದ್ದರು' ಎಂದು ಹೇಳಿದರು.
ಅನಂತ್ಕುಮಾರ್ ಅವರ ಬಹುಕಾಲದ ಗೆಳೆಯ ಸದಾನಂದಗೌಡ ಅವರೂ ಸಹ ಅನಂತ್ಕುಮಾರ್ ಅವರೊಂದಿಗಿನ ತಮ್ಮ ಒಡನಾಟವನ್ನು ನೆನಪಿಸಿಕೊಂಡರು.
ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆಪಿ.ನಡ್ಡಾ, ಅನಂತ್ಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತ್ಕುಮಾರ್, ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಇನ್ನೂ ಹಲವು ಬಿಜೆಪಿ ಪ್ರಮುಖರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications