ಯಲಚೇನಹಳ್ಳಿ- ಅಂಜನಾಪುರ ವಿಸ್ತರಿತ ಮೆಟ್ರೋ ಮಾರ್ಗಕ್ಕೆ ಯಡಿಯೂರಪ್ಪ ಚಾಲನೆ

ಬೆಂಗಳೂರು, ಜನವರಿ 14:ಯಲಚೇನಹಳ್ಳಿ-ಅಂಜನಾಪುರ ವಿಸ್ತರಿತ ನಮ್ಮ ಮೆಟ್ರೋ ಹಸಿರು ಮಾರ್ಗಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು ಚಾಲನೆ ನೀಡಿದ್ದಾರೆ.
6 ಕಿ.ಮೀ ಉದ್ದದ ನೂತನ ಮಾರ್ಗಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಚಾಲನೆ ನೀಡಿದ್ದಾರೆ.

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಸಿರುನಿಶಾನೆ ತೋರಿದ್ದಾರೆ. ಮೆಟ್ರೋ ಹಸಿರು ಮಾರ್ಗ ತುಮಕೂರು ರಸ್ತೆ ನಾಗಸಂಧ್ರದಿಂದ ಕನಕಪುರ ರಸ್ತೆಯ ಯಲಚೇನಹಳ್ಳಿವರೆಗೆ ಇತ್ತು.

ಈಗ ಈ ಮಾರ್ಗವನ್ನು ಯಲಚೇನಹಳ್ಳಿಯಿಂದ ಅಂಜನಾಪುರಕ್ಕೆ 6 ಕಿ.ಮೀ ನಷ್ಟು ದೂರ ವಿಸ್ತರಿಸಲಾಗಿದೆ. ಕನಕಪುರ ರಸ್ತೆಯಲ್ಲಿ 6 ಕಿ.ಮೀನಷ್ಟು ದೂರ ವಿಸ್ತರಿಸಲಾಗಿದೆ. ಸಚಿವ ಆರ್ ಅಶೋಕ್, ಸದಾನಂದಗೌಡ, ಗೋವಿಂದ ಕಾರಜೋಳ, ಎಸ್‌ಆರ್ ವಿಶ್ವನಾಥ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.'

Namma Metro

ಮೆಟ್ರೋ ಮಾರ್ಗಗಳು: ಕೋಣನಕುಂಟೆ ಕ್ರಾಸ್, ದೊಡ್ಡಕಲ್ಲಸಂದ್ರ, ವಾಜರಹಳ್ಳಿ, ತಲಘಟ್ಟಪುರ, ರೇಷ್ಮೆ ಸಂಸ್ಥೆ(ಅಂಜನಾಪುರ). ಈ ಮಾರ್ಗದಲ್ಲಿ ಕಳೆದ ಮೂರು ತಿಂಗಳಿನಿಂದ ಪ್ರಾಯೋಗಿಕ ಸಂಚಾರ ನಡೆಸಿರುವ ಮೆಟ್ರೋ ರೈಲು, ಕಳೆದ ತಿಂಗಳು ರೈಲ್ವೆ ಸೇಫ್ಟಿ ಸರ್ಟಿಫಿಕೇಟ್ ಪಡೆದಿತ್ತು. ಈ ಹಿನ್ನೆಲೆಯಲ್ಲಿ ಇಂದು ನೂತನ ರೈಲು ಮಾರ್ಗ ಲೋಕಾರ್ಪಣೆಗೊಂಡಿದೆ.

ಈ ಮೆಟ್ರೋ ಮಾರ್ಗದಿಂದಾಗಿ ನಿತ್ಯ 75 ಸಾವಿರಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಅನುಕೂಲವಾಗಲಿದೆ.

ಈ ಮಾರ್ಗದಲ್ಲಿ ಒಟ್ಟು ಐದು ಮಾರ್ಗಗಳು ಬರಲಿವೆ. ಇದೀಗ ನಗರದ ಸಂಚಾರಿಗಳಿಗೆ ಮತ್ತೊಂದು ಅಂತಹದ್ದೇ ರೀತಿಯ ಸೇವೆ ನೀಡುತ್ತಿರುವ ಸರ್ಕಾರದಿಂದ ಯೆಲಚೇನಹಳ್ಳಿಯಿಂದ ಸಿಲ್ಕ್ ಇನ್ಸ್ ಟಿಟ್ಯೂಟ್ ಗೆ ಹಸಿರು ಮಾರ್ಗದಲ್ಲಿ ನಮ್ಮ ಮೆಟ್ರೊ ಸಂಚಾರ ಆರಂಭವಾಗಲಿದೆ.

Recommended Video

      Yediyurappa ಮತ್ತು Vijayendra ನ ಮಾಯ ಜಾಲ!!| Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+