Yelahanka flyover: ಯಲಹಂಕ ಮೇಲ್ಸೇತುವೆ ಸೆಪ್ಟೆಂಬರ್ ಒಳಗೆ ಪೂರ್ಣಗೊಳಿಸಲು ಗಡುವು
ಬೆಂಗಳೂರು: ನಗರದ ಉತ್ತರ ಭಾಗದ ಯಲಹಂಕ ಫ್ಲೈಓವರ್ ಕಾಮಗಾರಿಯನ್ನು ಈ ವರ್ಷ ಸೆಪ್ಟೆಂಬರ್ ಅಂತ್ಯದೊಳಗೆ ಕಡ್ಡಾಯವಾಗಿ ಪೂರ್ಣಗೊಳಿಸುವಂತೆ ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ಮುಖ್ಯ ಆಯುಕ್ತ ಎಂ.ಮಹೇಶ್ವರ ರಾವ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಬೆಂಗಳೂರು ಉತ್ತರ ನಗರ ನಿಗಮ ವ್ಯಾಪ್ತಿಯ ವಿವಿಧ ಪ್ರದೇಶಗಳನ್ನು ಶನಿವಾರ ಪರಿಶೀಲಿಸಿದ ಅವರು, ದೊಡ್ಡಬಳ್ಳಾಪುರ ಮುಖ್ಯ ರಸ್ತೆಯಲ್ಲಿನ ಸುಮಾರು 2 ಕಿಲೋಮೀಟರ್ ಉದ್ದದ ಯಲಹಂಕ ಮೇಲ್ಸೇತುವೆ ಕಾಮಗಾರಿ ಈಗಾಗಲೇ ಶೇ.70ರಷ್ಟು ಪೂರ್ಣಗೊಂಡಿದೆ ಎಂದು ಮಾಹಿತಿ ನೀಡಿದರು.

ರಾತ್ರಿ ಸಮಯದಲ್ಲಿ ಮಾತ್ರ ಕಾಮಗಾರಿ
"ಒಟ್ಟು 56 ಪಿಲ್ಲರ್ಗಳ ಪೈಕಿ 51 ಪಿಲ್ಲರ್ಗಳ ನಿರ್ಮಾಣ ಕಾರ್ಯ ಮುಗಿದಿದೆ. ಉಳಿದ ಐದು ಪಿಲ್ಲರ್ಗಳ ಕಾಮಗಾರಿ ಬಾಕಿಯ ಇದೆ. 447 ಸೆಗ್ಮೆಂಟ್ಗಳಲ್ಲಿ 351 ಸೆಗ್ಮೆಂಟ್ಗಳನ್ನು ಈಗಾಗಲೇ ಅಳವಡಿಸಲಾಗಿದ್ದು, ಇನ್ನೂ 96 ಸೆಗ್ಮೆಂಟ್ಗಳ ಅಳವಡಿಕೆ ಬಾಕಿ ಇದೆ. ಹಗಲು ವೇಳೆ ಈ ಭಾಗದಲ್ಲಿ ನಿರಂತರವಾಗಿ ವಾಹನ ಸಂಚಾರ ಇರುವುದರಿಂದ ರಾತ್ರಿ ಸಮಯದಲ್ಲಿ ಮಾತ್ರ ಕಾಮಗಾರಿ ನಡೆಸಲಾಗುತ್ತಿದೆ ಎಂದು ವಿವರಿಸಿದರು.
ನಗರ ಪಾಲಿಕೆಯಿಂದ ಡೀಡ್ ನೀಡಿರುವ ಜಾಗಗಳನ್ನು ಕೂಡಲೇ ವಶಕ್ಕೆ ಪಡೆದು ಫೆನ್ಸಿಂಗ್ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗುತ್ತಿಗೆದಾರರು ನಿಗದಿತ ಅವಧಿಯೊಳಗೆ ಉಳಿದ ಕಾಮಗಾರಿಯನ್ನು ಪೂರ್ಣಗೊಳಿಸಬೇಕೆಂದು ಸ್ಪಷ್ಟ ಸೂಚನೆ ನೀಡಿದರು.
ಈ ವೇಳೆ ಹೆಣ್ಣೂರು-ಬಾಗಲೂರು ರಸ್ತೆಯ 5 ಕಿಲೋಮೀಟರ್ ವ್ಯಾಪ್ತಿಯ ವೈಟ್ಟಾಪಿಂಗ್ ಕಾಮಗಾರಿಯ ಪ್ರಗತಿಯನ್ನು ಸಹ ಪರಿಶೀಲಿಸಿದರು. ರಸ್ತೆಯ ಒಂದು ಬದಿಯಲ್ಲಿ 4 ಕಿಮೀ ವೈಟ್ಟಾಪಿಂಗ್ ಕೆಲಸ ಪೂರ್ಣಗೊಂಡಿದ್ದು, ಉಳಿದ 1 ಕಿಮೀ ಕಾಮಗಾರಿ 15 ದಿನಗಳೊಳಗೆ ಮುಗಿಸಲು ಸೂಚನೆ ನೀಡಲಾಗಿದೆ. ಇನ್ನೊಂದು ಬದಿಯ ವೈಟ್ಟಾಪಿಂಗ್ ಕಾಮಗಾರಿಯನ್ನು ಒಂದು ತಿಂಗಳೊಳಗೆ ಆರಂಭಿಸಲಾಗುವುದು ಎಂದು ಮಾಹಿತಿ ನೀಡಿದರು.
ರೈಲ್ವೆ ಅಂಡರ್ಬ್ರಿಡ್ಜ್ಗೆ ಗಡುವು
ಯಲಹಂಕ ರೈಲ್ವೆ ಅಂಡರ್ಬ್ರಿಡ್ಜ್ (ಆರ್ಯುಬಿ) ಕಾಮಗಾರಿಯ ಕುರಿತು ಮಾತನಾಡಿದ ಅವರು, ಒಂದು ಬದಿಯ ಕೆಲಸ ಸಂಪೂರ್ಣವಾಗಿ ಮುಗಿದಿದ್ದು, ಬಾಕ್ಸ್ ಪುಷಿಂಗ್ ಕಾರ್ಯವೂ ಪೂರ್ಣಗೊಂಡಿದೆ. ಆದರೆ ಮತ್ತೊಂದು ಬದಿಯ ಕಾಮಗಾರಿ ಭೂಸ್ವಾಧೀನ ಸಮಸ್ಯೆಯಿಂದ ಸ್ಥಗಿತಗೊಂಡಿದೆ. ರೈಲ್ವೆ ಭೂಮಿ ಸಂಬಂಧಿತ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಿ, ಉಳಿದ ಕಾಮಗಾರಿಯನ್ನು ತಕ್ಷಣ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜೊತೆಗೆ ರಸ್ತೆ ಅಗಲೀಕರಣಕ್ಕೂ ಅಗತ್ಯ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಿದರು.
ಈ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಿ, ರೈಲ್ವೆ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಉಳಿದ ಕಾಮಗಾರಿಯನ್ನು ಕೂಡಲೇ ಪೂರ್ಣಗೊಳಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜೊತೆಗೆ ಈ ಭಾಗದಲ್ಲಿ ವಾಹನ ಸಂಚಾರದ ಒತ್ತಡ ಕಡಿಮೆ ಮಾಡಲು ರಸ್ತೆ ಅಗಲೀಕರಣಕ್ಕೂ ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.
ಯಲಹಂಕ ಫ್ಲೈಓವರ್ ಪೂರ್ಣಗೊಂಡ ಬಳಿಕ ಉತ್ತರ ಬೆಂಗಳೂರಿನ ದೊಡ್ಡಬಳ್ಳಾಪುರ ರಸ್ತೆ, ಹೆಬ್ಬಾಳ, ಬಾಗಲೂರು ಹಾಗೂ ಯಲಹಂಕ ಭಾಗಗಳಲ್ಲಿ ಸಂಚಾರ ಸುಗಮವಾಗಲಿದೆ. ಪ್ರತಿದಿನ ಸಾವಿರಾರು ಪ್ರಯಾಣಿಕರು ಎದುರಿಸುತ್ತಿರುವ ಟ್ರಾಫಿಕ್ ಸಮಸ್ಯೆ ಕಡಿಮೆಯಾಗಲಿದ್ದು, ನಗರಾಭಿವೃದ್ಧಿಗೆ ಇದು ಮಹತ್ವದ ಹೆಜ್ಜೆಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
-
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
45,000 ಕೋಟಿ ರೂಪಾಯಿ ಸಂಗ್ರಹ ಗುರಿ, ಮದ್ಯಪ್ರಿಯರಿಗೆ ದಿಢೀರ್ ಎದುರಾಯ್ತು ಆಘಾತ... Karnataka Budget 2026 -
ಶ್ರೀ ಮಾತಾ ವೈಷ್ಟೋದೇವಿ ಭಕ್ತರಿಗೆ ಕರ್ನಾಟಕ ಸರ್ಕಾರದ ವತಿಯಿಂದ ಭರ್ಜರಿ ಸುದ್ದಿ | Karnataka Budget 2026 -
ರಾಜ್ಯ ಬಜೆಟ್ನಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ: 56,432 ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ -
5,00,00,000 ರೂಪಾಯಿ, ಕನ್ನಡ ನಾಡಿನ ಭಕ್ತರಿಗೆ ಭರ್ಜರಿ ಉಡುಗೊರೆ... Karnataka Budget 2026 -
Karnataka Budget 2026: 4.5 ಲಕ್ಷ ಕೋಟಿಯ ರಾಜ್ಯ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಗುವುದೇ ಭರ್ಜರಿ ಕೊಡುಗೆ? -
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್












Click it and Unblock the Notifications