Yelahanka flyover: ಯಲಹಂಕ ಮೇಲ್ಸೇತುವೆ ಸೆಪ್ಟೆಂಬರ್ ಒಳಗೆ ಪೂರ್ಣಗೊಳಿಸಲು ಗಡುವು
ಬೆಂಗಳೂರು: ನಗರದ ಉತ್ತರ ಭಾಗದ ಯಲಹಂಕ ಫ್ಲೈಓವರ್ ಕಾಮಗಾರಿಯನ್ನು ಈ ವರ್ಷ ಸೆಪ್ಟೆಂಬರ್ ಅಂತ್ಯದೊಳಗೆ ಕಡ್ಡಾಯವಾಗಿ ಪೂರ್ಣಗೊಳಿಸುವಂತೆ ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ಮುಖ್ಯ ಆಯುಕ್ತ ಎಂ.ಮಹೇಶ್ವರ ರಾವ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಬೆಂಗಳೂರು ಉತ್ತರ ನಗರ ನಿಗಮ ವ್ಯಾಪ್ತಿಯ ವಿವಿಧ ಪ್ರದೇಶಗಳನ್ನು ಶನಿವಾರ ಪರಿಶೀಲಿಸಿದ ಅವರು, ದೊಡ್ಡಬಳ್ಳಾಪುರ ಮುಖ್ಯ ರಸ್ತೆಯಲ್ಲಿನ ಸುಮಾರು 2 ಕಿಲೋಮೀಟರ್ ಉದ್ದದ ಯಲಹಂಕ ಮೇಲ್ಸೇತುವೆ ಕಾಮಗಾರಿ ಈಗಾಗಲೇ ಶೇ.70ರಷ್ಟು ಪೂರ್ಣಗೊಂಡಿದೆ ಎಂದು ಮಾಹಿತಿ ನೀಡಿದರು.

ರಾತ್ರಿ ಸಮಯದಲ್ಲಿ ಮಾತ್ರ ಕಾಮಗಾರಿ
"ಒಟ್ಟು 56 ಪಿಲ್ಲರ್ಗಳ ಪೈಕಿ 51 ಪಿಲ್ಲರ್ಗಳ ನಿರ್ಮಾಣ ಕಾರ್ಯ ಮುಗಿದಿದೆ. ಉಳಿದ ಐದು ಪಿಲ್ಲರ್ಗಳ ಕಾಮಗಾರಿ ಬಾಕಿಯ ಇದೆ. 447 ಸೆಗ್ಮೆಂಟ್ಗಳಲ್ಲಿ 351 ಸೆಗ್ಮೆಂಟ್ಗಳನ್ನು ಈಗಾಗಲೇ ಅಳವಡಿಸಲಾಗಿದ್ದು, ಇನ್ನೂ 96 ಸೆಗ್ಮೆಂಟ್ಗಳ ಅಳವಡಿಕೆ ಬಾಕಿ ಇದೆ. ಹಗಲು ವೇಳೆ ಈ ಭಾಗದಲ್ಲಿ ನಿರಂತರವಾಗಿ ವಾಹನ ಸಂಚಾರ ಇರುವುದರಿಂದ ರಾತ್ರಿ ಸಮಯದಲ್ಲಿ ಮಾತ್ರ ಕಾಮಗಾರಿ ನಡೆಸಲಾಗುತ್ತಿದೆ ಎಂದು ವಿವರಿಸಿದರು.
ನಗರ ಪಾಲಿಕೆಯಿಂದ ಡೀಡ್ ನೀಡಿರುವ ಜಾಗಗಳನ್ನು ಕೂಡಲೇ ವಶಕ್ಕೆ ಪಡೆದು ಫೆನ್ಸಿಂಗ್ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗುತ್ತಿಗೆದಾರರು ನಿಗದಿತ ಅವಧಿಯೊಳಗೆ ಉಳಿದ ಕಾಮಗಾರಿಯನ್ನು ಪೂರ್ಣಗೊಳಿಸಬೇಕೆಂದು ಸ್ಪಷ್ಟ ಸೂಚನೆ ನೀಡಿದರು.
ಈ ವೇಳೆ ಹೆಣ್ಣೂರು-ಬಾಗಲೂರು ರಸ್ತೆಯ 5 ಕಿಲೋಮೀಟರ್ ವ್ಯಾಪ್ತಿಯ ವೈಟ್ಟಾಪಿಂಗ್ ಕಾಮಗಾರಿಯ ಪ್ರಗತಿಯನ್ನು ಸಹ ಪರಿಶೀಲಿಸಿದರು. ರಸ್ತೆಯ ಒಂದು ಬದಿಯಲ್ಲಿ 4 ಕಿಮೀ ವೈಟ್ಟಾಪಿಂಗ್ ಕೆಲಸ ಪೂರ್ಣಗೊಂಡಿದ್ದು, ಉಳಿದ 1 ಕಿಮೀ ಕಾಮಗಾರಿ 15 ದಿನಗಳೊಳಗೆ ಮುಗಿಸಲು ಸೂಚನೆ ನೀಡಲಾಗಿದೆ. ಇನ್ನೊಂದು ಬದಿಯ ವೈಟ್ಟಾಪಿಂಗ್ ಕಾಮಗಾರಿಯನ್ನು ಒಂದು ತಿಂಗಳೊಳಗೆ ಆರಂಭಿಸಲಾಗುವುದು ಎಂದು ಮಾಹಿತಿ ನೀಡಿದರು.
ರೈಲ್ವೆ ಅಂಡರ್ಬ್ರಿಡ್ಜ್ಗೆ ಗಡುವು
ಯಲಹಂಕ ರೈಲ್ವೆ ಅಂಡರ್ಬ್ರಿಡ್ಜ್ (ಆರ್ಯುಬಿ) ಕಾಮಗಾರಿಯ ಕುರಿತು ಮಾತನಾಡಿದ ಅವರು, ಒಂದು ಬದಿಯ ಕೆಲಸ ಸಂಪೂರ್ಣವಾಗಿ ಮುಗಿದಿದ್ದು, ಬಾಕ್ಸ್ ಪುಷಿಂಗ್ ಕಾರ್ಯವೂ ಪೂರ್ಣಗೊಂಡಿದೆ. ಆದರೆ ಮತ್ತೊಂದು ಬದಿಯ ಕಾಮಗಾರಿ ಭೂಸ್ವಾಧೀನ ಸಮಸ್ಯೆಯಿಂದ ಸ್ಥಗಿತಗೊಂಡಿದೆ. ರೈಲ್ವೆ ಭೂಮಿ ಸಂಬಂಧಿತ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಿ, ಉಳಿದ ಕಾಮಗಾರಿಯನ್ನು ತಕ್ಷಣ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜೊತೆಗೆ ರಸ್ತೆ ಅಗಲೀಕರಣಕ್ಕೂ ಅಗತ್ಯ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಿದರು.
ಈ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಿ, ರೈಲ್ವೆ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಉಳಿದ ಕಾಮಗಾರಿಯನ್ನು ಕೂಡಲೇ ಪೂರ್ಣಗೊಳಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜೊತೆಗೆ ಈ ಭಾಗದಲ್ಲಿ ವಾಹನ ಸಂಚಾರದ ಒತ್ತಡ ಕಡಿಮೆ ಮಾಡಲು ರಸ್ತೆ ಅಗಲೀಕರಣಕ್ಕೂ ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.
ಯಲಹಂಕ ಫ್ಲೈಓವರ್ ಪೂರ್ಣಗೊಂಡ ಬಳಿಕ ಉತ್ತರ ಬೆಂಗಳೂರಿನ ದೊಡ್ಡಬಳ್ಳಾಪುರ ರಸ್ತೆ, ಹೆಬ್ಬಾಳ, ಬಾಗಲೂರು ಹಾಗೂ ಯಲಹಂಕ ಭಾಗಗಳಲ್ಲಿ ಸಂಚಾರ ಸುಗಮವಾಗಲಿದೆ. ಪ್ರತಿದಿನ ಸಾವಿರಾರು ಪ್ರಯಾಣಿಕರು ಎದುರಿಸುತ್ತಿರುವ ಟ್ರಾಫಿಕ್ ಸಮಸ್ಯೆ ಕಡಿಮೆಯಾಗಲಿದ್ದು, ನಗರಾಭಿವೃದ್ಧಿಗೆ ಇದು ಮಹತ್ವದ ಹೆಜ್ಜೆಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications