ಬೆಂಗಳೂರು: ಅತಿ ಹೆಚ್ಚು ಮಾರಣಾಂತಿಕ ರಸ್ತೆ ಅಪಘಾತ ಪ್ರದೇಶಗಳ ಪಟ್ಟಿ
ಬೆಂಗಳೂರು, ಡಿ. 13: ಸಿಲಿಕಾನ್ ಸಿಟಿಯಲ್ಲಿ ಜನರ ಸಂಖ್ಯೆಯಷ್ಟೇ ವಾಹನಗಳ ಸಂಖ್ಯೆಯೂ ಇದೆ. ಟ್ರಾಫಿಕ್ ಜಾಮ್ ಎಷ್ಟು ಸಾಮಾನ್ಯವೆನಿಸುತ್ತದೋ ಅಪಘಾತಗಳು ಕೂಡ ಸಾಮಾನ್ಯವೆನಿಸುವಂತಾಗಿವೆ.
ನಗರದ ಪ್ರಮುಖ ರಸ್ತೆಗಳಲ್ಲಿ ಪ್ರತಿದಿನ ಒಂದಲ್ಲ ಒಂದು ಅಪಘಾತ ಪ್ರಕರಣಗಳು ವರದಿಯಾಗುತ್ತಲೆ ಇರುತ್ತವೆ. ಸಣ್ಣ ರಸ್ತೆಗಳಲ್ಲಿ ಚಿಕ್ಕಪುಟ್ಟ ಅಪಘಾತಗಳಾಗು್ತತವೆ. ಆದರೆ ದೊಡ್ಡ ದೊಡ್ಡ ರಸ್ತೆಗಳಲ್ಲಿ ಮಾರಣಾಂತಿಕ ರಸ್ತೆ ಅಪಘಾತಗಳು ಸಂಭವಿಸುತ್ತವೆ. ಅದರಲ್ಲೂ ಹೆದ್ದಾರಿಗಳು, ಫ್ಲೈ ಓವರ್ಗಳಲ್ಲಿ ಇವುಗಳು ಜಾಸ್ತಿ.
ಬೆಂಗಳೂರಿನಲ್ಲಿ ಯಲಹಂಕದಲ್ಲಿ ಅತಿ ಹೆಚ್ಚು ರಸ್ತೆ ಅಪಘಾತಗಳು ವರದಿಯಾಗಿವೆ. ಇಲ್ಲಿನ ಅಪಘಾತಗಳಲ್ಲಿ ಸಾವಿನ ಸಂಖ್ಯೆ ಹೆಚ್ಚುತ್ತಲೇ ಇದೆ. ಈ ವರ್ಷದ ಮೊದಲ 10 ತಿಂಗಳಲ್ಲಿ ಈ ರಸ್ತೆಯಲ್ಲಿ ಮೃತಪಟ್ಟವರ ಸಂಖ್ಯೆ ಬರೋಬ್ಬರಿ 40 ರಷ್ಟಿದೆ.

2021 ರಲ್ಲಿ ಯಲಹಂಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 52 ಮಂದಿ ರಸ್ತೆ ಅಪಘಾತ ಪ್ರಕರಣಗಳಲ್ಲಿ ಮೃತಪಟ್ಟಿರುವ ವರದಿಯಾಗಿದೆ. ಈ ವರ್ಷದ ಮೊದಲ 10 ತಿಂಗಳಲ್ಲಿ ಈ ಸಂಖ್ಯೆ 40 ಕ್ಕೆ ಏರಿಕೆ ಆಗಿದೆ.
ಯಲಹಂಕ ಬಳಿಕ ಈ ವರ್ಷ ರಸ್ತೆ ಅಪಘಾತಗಳಿಂದಾಗಿ ಅತಿ ಹೆಚ್ಚು ಸಾವುಗಳು ಸಂಭವಿಸಿರುವ ಎರಡನೇ ಪ್ರದೇಶ ಪಕ್ಕದ ಚಿಕ್ಕಜಾಲ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. ಚಿಕ್ಕಜಾಲದಲ್ಲಿ 38 ಸಾವುಗಳು ವರದಿಯಾಗಿವೆ.
ಕಾಮಾಕ್ಷಿಪಾಳ್ಯದಲ್ಲಿ 37, ಕೆಂಗೇರಿಯಲ್ಲಿ 30, ಕೆಎಸ್ ಲೇಔಟ್ನಲ್ಲಿ 28, ಪೀಣ್ಯಾದಲ್ಲಿ 26, ದೇವನಹಳ್ಳಿಯಲ್ಲಿ 24 ರಸ್ತೆ ಅಪಘಾತಗಳು ವರದಿಯಾಗಿವೆ.
ಬೆಂಗಳೂರಿನ 44 ಟ್ರಾಫಿಕ್ ಪೊಲೀಸ್ ಠಾಣೆಗಳಿಂದ ಪಡೆದ ಮಾಹಿತಿಯ ಪ್ರಕಾರ, 2021 ರಲ್ಲಿ ಚಿಕ್ಕಜಾಲವು ಮೂರನೇ ಅತಿ ಹೆಚ್ಚು ಅಂದರೆ 40 ಸಾವುಗಳನ್ನು ಕಂಡಿದೆ.
ನಗರದಲ್ಲಿ ಕಳೆದ ವರ್ಷ ವರದಿಯಾದ 675 ರಸ್ತೆ ಅಪಘಾತ ಸಾವುಗಳಲ್ಲಿ ಯಲಹಂಕ ಮತ್ತು ಚಿಕ್ಕಜಾಲದ ಪ್ರಮಾಣ ಕ್ರಮವಾಗಿ 7.7% ಮತ್ತು 6% ರಷ್ಟಿದೆ. ಈ ವರ್ಷ, ಮೊದಲ 10 ತಿಂಗಳಲ್ಲಿ 577 ರಸ್ತೆ ಅಪಘಾತ ಸಾವುಗಳಲ್ಲಿ, ಎರಡು ಸ್ಥಳಗಳ ಪ್ರಮಾಣ ಕ್ರಮವಾಗಿ 6.9% ಮತ್ತು 6.6% ರಷ್ಟಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
ಮಾಲ್ಡೀವ್ಸ್ನಲ್ಲಿ ಬೋಟ್ ಅಪಘಾತ: ನಾಪತ್ತೆಯಾಗಿರುವ ಭಾರತದ ಖ್ಯಾತ ರ್ಯಾಲಿ ಪಟು ಹರಿ ಸಿಂಗ್ಗಾಗಿ ಮುಂದುವರಿದ ಶೋಧ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications