ಆಸ್ತಿ ಮಾರಿ ಆಸ್ಪತ್ರೆಗೆ ಬಂದವರಿಗೆ ಆಗಿದ್ದು ಎಂಥಾ ನಿರಾಸೆ?
ಬೆಂಗಳೂರು, ಅಕ್ಟೋಬರ್ 14: ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯೊಂದರಲ್ಲಿ ಕಿಡ್ನಿ ವೈಫಲ್ಯದ ಚಿಕಿತ್ಸೆ ಪಡೆದ ಯೆಮನ್ ದೇಶದ ಹದಿನೆಂಟು ವರ್ಷದ ಯುವತಿಗೆ ಎರಡೂ ಕಿವಿ ಕೇಳಿಸದಂತಾಗಿದೆ. ವೈದ್ಯಕೀಯ ನಿರ್ಲಕ್ಷದಿಂದಲೇ ಹೀಗಾಗಿದೆ ಎಂದು ಆಕೆಯ ಪೋಷಕರು ಆರೋಪಿಸಿದ್ದಾರೆ.
ಆಕೆ ಕೇಳಿಸಿಕೊಳ್ಳುವ ಶಕ್ತಿ ಕಳೆದುಕೊಳ್ಳುತ್ತಿದ್ದಾಳೆ ಎಂದು ತಿಳಿಸಿದ ನಂತರವೂ ವೈದ್ಯರು ಔಷಧ ಮುಂದುವರಿಸಿದರು ಎಂಬುದು ಪೋಷಕರ ಆರೋಪ. ಜೆಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಯೆಮೆನ್ ರಾಯಭಾರ ಕಚೇರಿಯಿಂದಲೂ ಆ ಆಸ್ಪತ್ರೆಗೆ ಪತ್ರ ಬರೆದಿದ್ದು, ಸ್ಪಷ್ಟನೆ ಕೇಳಲಾಗಿದೆ.['ಮುಂಜಿ ಶಾಸ್ತ್ರ'ದಲ್ಲಿ ವೈದ್ಯರ ನಿರ್ಲಕ್ಷ್ಯ: ಸಿಎಂಗೆ ಪೋಷಕರ ಪತ್ರ]

ಯೆಮನ್ ನಲ್ಲಿ ಟ್ಯಾಕ್ಸಿ ಚಾಲಕರಾಗಿರುವ ಅಬ್ದುಲ್ಲಾ ಸಯೀದ್ ಮೆಸರಿ ಎಂಬುವರು ತಮ್ಮ ಮಗಳ ಕಿಡ್ನಿ ವೈಫಲ್ಯದ ಚಿಕಿತ್ಸೆಗಾಗಿ ಬೆಂಗಳೂರಿಗೆ ಬಂದಿದ್ದಾರೆ. ಉತ್ತಮ ಚಿಕಿತ್ಸೆ ಸಿಗಲಿ ಎಂಬ ಕಾರಣಕ್ಕೆ ತಮ್ಮ ಆಸ್ತಿಯನ್ನೆಲ್ಲ ಮಾರಿ, ತಮ್ಮ ಕುಟುಂಬ ಸಮೇತರಾಗಿ ಏಪ್ರಿಲ್ 25ಕ್ಕೆ ಇಲ್ಲಿಗೆ ಬಂದಿದ್ದಾರೆ.
ಅವರ ಪಾಲಿಗೆ ಆ ಚಿಕಿತ್ಸೆಯೇ ದುಃಸ್ವಪ್ನದಂತಾಯಿತು ಎಂದು ಆ ಕುಟುಂಬಕ್ಕೆ ಸ್ನೇಹಿತರಾಗಿರುವವರು ಹೇಳುತ್ತಾರೆ. ಆ ಹುಡುಗಿಗೆ ಕಿವಿ ಕೇಳಿಸದಂತೆ ಅದ ಮೇಲೆ ಬೇರೆ ಆಸ್ಪತ್ರೆಗೆ ಪರೀಕ್ಷೆಗಾಗಿ ಕರೆದೊಯ್ದಿದ್ದಾರೆ. ಕಿಡ್ನಿ ವೈಫಲ್ಯದ ಚಿಕಿತ್ಸೆಗಾಗಿ ನೀಡಿದ ಔಷಧದ ಅಡ್ಡ ಪರಿಣಾಮದಿಂದಲೇ ಹೀಗಾಗಿದೆ ಎಂದು ಗೊತ್ತಾಗಿದೆ.[ಹುಲಿ ಕಚ್ಚಿದ್ದಕ್ಕಿಂತ ಬಡತನದ ಗಾಯವೇ ಹೆಚ್ಚು ಆಳ!]
ಆ ಹೆಣ್ಣುಮಗಳ ವೈದ್ಯಕೀಯ ವರದಿ ಪ್ರಕಾರ, ಔಷಧ ಪ್ರಮಾಣವನ್ನು ಎರಡಷ್ಟು ಮಾಡಿರುವುದು ಕಂಡುಬಂದಿದೆ. ಅದನ್ನು ಆ ಕುಟುಂಬದವರ ಗಮನಕ್ಕೂ ತಂದಿಲ್ಲ. ಈ ರೀತಿ 42 ದಿನ ಔಷಧ ನೀಡಿದ್ದಾರೆ ಎಂದು ಆ ಕುಟುಂಬಕ್ಕೆ ಸ್ನೇಹಿತರಾದ ಯೂಸುಫ್ ಎಂಬುವರು ತಿಳಿಸಿದ್ದಾರೆ. ವಕೀಲರು ನೀಡಿದ ಮಾಹಿತಿ ಪ್ರಕಾರ, ಚಿಕಿತ್ಸೆಗಾಗಿ ಇದೀಗ ಆ ಹುಡುಗಿಯನ್ನು ಈಜಿಪ್ಟ್ ಗೆ ಕರೆದೊಯ್ಯಲಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ










Click it and Unblock the Notifications