ಆರ್ಸಿಬಿ ಕಪ್ಗೆ ಮುತ್ತು ಕೊಟ್ಟೆ, ಚಿನ್ನಸ್ವಾಮಿ ಸ್ಟೇಡಿಯಂಗೆ ಹೋಗಿ ಅಭಿನಂದಿಸಿದ್ದು ನಿಜ: ಡಿಕೆ ಶಿವಕುಮಾರ್
ಆರ್ಸಿಬಿ ಸಂಭ್ರಮಾಚರಣೆ ವೇಳೆ ಸಂಭವಿಸಿದ್ದ ಕಾಲ್ತುಳಿತ ಪ್ರಕರಣ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮೇಲೆ ಹಲವು ಟೀಕೆಗಳು ವ್ಯಕ್ತವಾಗಿತ್ತು. ಇನ್ನು ಕಾಲ್ತುಳಿತ ಸಂಭವಿಸಿದ ಮೇಲೂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದರಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡ ಪಾಲ್ಗೊಂಡಿದ್ದಕ್ಕೆ ಭಾರೀ ಖಂಡನೆ ವ್ಯಕ್ತವಾಗಿತ್ತು. ಇಂತಹ ದುರ್ಘಟನೆ ಸಂಭವಿಸಿದ ಮೇಲೂ ಸ್ಟೇಡಿಯಂನಲ್ಲಿ ಮತ್ತೊಂದು ಕಾರ್ಯಕ್ರಮಕ್ಕೆ ಅವಕಾಶ ಏಕೆ ಕೊಟ್ಟಿದ್ದು? ಎಂದು ವಿಪಕ್ಷಗಳು ಕೂಡ ಆರೋಪ ಮಾಡಿತ್ತು. ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಅವರೇ ಸ್ಪಷ್ಟನೆ ನೀಡಿದ್ದಾರೆ.
ಪೊಲೀಸ್ ಆಯುಕ್ತರು ನನ್ನ ಬಳಿ ಬಂದು ಆರ್ಸಿಬಿ ತಂಡದವರಿಗೆ 10 ನಿಮಿಷಗಳಲ್ಲಿ ಕಾರ್ಯಕ್ರಮ ಮುಗಿಸುವಂತೆ ಸೂಚನೆ ನೀಡಿ ಎಂದು ಮನವಿ ಮಾಡಿಕೊಂಡರು. ಇದೇ ಕಾರಣಕ್ಕೆ ನಾನು ಆ ಕಾರ್ಯಕ್ರಮಕ್ಕೆ ಹೋಗಿ, 10 ನಿಮಿಷಗಳಲ್ಲಿ ಕಾರ್ಯಕ್ರಮ ಮುಗಿಸುವಂತೆ ಸೂಚನೆ ನೀಡಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಿಧಾನಸಭೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಆರ್ಸಿಬಿ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಉತ್ತರ ನೀಡುವ ವೇಳೆ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಅವರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾರ್ಯಕ್ರಮಕ್ಕೆ ಸರ್ಕಾರ ಅನುಮತಿ ನೀಡದಿದ್ದರೆ, ಉಪಮುಖ್ಯಮಂತ್ರಿಗಳು ಹೋಗಿದ್ದು ಯಾಕೆ? ಎಂದು ಪ್ರಶ್ನೆ ಕೇಳಿದರು. ಇದಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ಸ್ಪಷ್ಟನೆ ಕೊಟ್ಟರು. ನನ್ನನ್ನು ಪದೇ ಪದೆ ನೆನೆಯದಿದ್ದರೆ ನಿಮಗೆ ಸಮಾಧಾನ ಆಗುವುದಿಲ್ಲ. ನಿಮ್ಮ ಪಕ್ಷದವರಿಗೆ ಖುಷಿ ಪಡಿಸಲೂ ಆಗುವುದಿಲ್ಲ. ನಿಮಗೆ ಖುಷಿ ಆಗುವಂತೆ ಉತ್ತರ ಕೊಡಲೂ ಆಗುವುದಿಲ್ಲ ಎಂದು ತಿರುಗೇಟು ನೀಡಿದರು.
ಅಂದು ವಿಧಾನಸೌಧದ ಮುಂದೆ ನಡೆದ ಸರ್ಕಾರಿ ಕಾರ್ಯಕ್ರಮಕ್ಕೆ ಬಂದಿದ್ದ ಕೆಎಸ್ಸಿಎ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಹೋಗಲು ಸಾಧ್ಯವಾಗದೇ ಹತಾಶರಾಗಿದ್ದರು. ಇನ್ನು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸುವಂತೆ ನೀವೇ ಬಂದು ವ್ಯವಸ್ಥೆ ಮಾಡಿ ಎಂದು ಪೊಲೀಸ್ ಕಮೀಷನರ್ ಅವರು ನನ್ನ ಬಳಿ ಮನವಿ ಮಾಡಿಕೊಂಡಿದ್ದರು ಎಂದಿದ್ದಾರೆ.
ಕಾರ್ಯಕ್ರಮಕ್ಕೆ ಹೋಗಿದ್ದು ನಿಜ!
ನಾನು ಕಾರ್ಯಕ್ರಮಕ್ಕೆ ಹೋಗಿದ್ದೂ ನಿಜ, ಅಲ್ಲಿ ಇದ್ದಿದ್ದೂ ನಿಜ, ಅಲ್ಲಿ ಆರ್ಸಿಬಿ ಆಟಗಾರರಿಗೆ ಅಭಿನಂದನೆ ಸಲ್ಲಿಸಿದ್ದೂ ನಿಜ. ಜೊತೆಗೆ 10 ನಿಮಿಷಗಳಲ್ಲಿ ಈ ಕಾರ್ಯಕ್ರಮ ಮುಗಿಸಬೇಕು ಎಂದು ಅವರಿಗೆ ಸೂಚನೆ ಕೊಟ್ಟಿದ್ದೂ ನಿಜ. ಇದೇ ಮಾತನ್ನು ನಾನು ಕುನ್ಹಾ ಅವರ ತನಿಖಾ ತಂಡದ ಮುಂದೆ ಹೇಳಿಕೆ ನೀಡಿದ್ದೂ ನಿಜ ಎಂದು ಒಪ್ಪಿಕೊಂಡಿದ್ದಾರೆ. ನಾನು ಚಿನ್ನಸ್ವಾಮಿ ಸ್ಟೇಡಿಯಂಗೆ ಹೋಗಿಲ್ಲ ಎಂದು ಹೇಳುತ್ತಿಲ್ಲ. ಅಲ್ಲಿಗೆ ಹೋಗಲು ನಿಮ್ಮ ಅನುಮತಿಯ ಅಗತ್ಯವೂ ನನಗಿಲ್ಲ. ಪೊಲೀಸರ ಮನವಿ ಮೇಲೆ ನನ್ನ ಜವಾಬ್ದಾರಿಯಿಂದ ನಾನು ಹೋಗಿ ಅವರಿಗೆ ಸೂಚನೆ ನೀಡಿದ್ದೇನೆ. ಕಪ್ಗೆ ಮುತ್ತು ನೀಡಿದ್ದೇನೆ, ಆಟಗಾರರಿಗೆ ಅಭಿನಂದಿಸಿದ್ದೇನೆ ಬಿಜೆಪಿಗರ ಆರೋಪಗಳಿಗೆ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.
-
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Nandini: ಆರ್ಸಿಬಿ ಜೊತೆ ರಾರಾಜಿಸಲಿದೆ ನಮ್ಮ ಹೆಮ್ಮೆಯ 'ನಂದಿನಿ': ಐಪಿಎಲ್-2026ರಲ್ಲಿ ಕನ್ನಡಿಗರಿಗೆ ಡಬಲ್ ಧಮಾಕಾ -
RCB Yash Dayal: ಐಪಿಎಲ್ 2026ರ ಸೀಸನ್ನಿಂದ ಸ್ಟಾರ್ ವೇಗಿ ಯಶ್ ದಯಾಳ್ ಔಟ್; ಆರ್ಸಿಬಿ ಅಧಿಕೃತ ಮಾಹಿತಿ -
IPL 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಟಿಕೆಟ್ ಮಾರಾಟ ಶುರು; ಇಲ್ಲಿವೆ ಬುಕಿಂಗ್ ಮಾಡುವ ವಿಧಾನಗಳು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
ಐಪಿಎಲ್ನಲ್ಲಿ ಯಾರೂ ಕೊಳ್ಳದಿದ್ದರೂ ಅಯೋಧ್ಯೆಯಲ್ಲಿ ಅಬ್ಬರಿಸಿದ ಆರ್ಸಿಬಿ ಮಾಜಿ ಆಟಗಾರ; 195 ರನ್ ಚಚ್ಚಿದ ಸ್ವಸ್ತಿಕ್ ಚಿಕಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ











Click it and Unblock the Notifications