ಯಶವಂತಪುರ ರೈಲ್ವೆ ನಿಲ್ದಾಣದ ಪುನರಾಭಿವೃದ್ಧಿ ಕಾಮಗಾರಿ ಆರಂಭ
ಬೆಂಗಳೂರು, ನವೆಂಬರ್ 29; ರೈಲ್ವೆ ಇಲಾಖೆ ಬೆಂಗಳೂರು ನಗರದ ಯಶವಂತಪುರ ರೈಲ್ವೆ ನಿಲ್ದಾಣದ ಪುನರಾಭಿವೃದ್ಧಿ ಕಾಮಗಾರಿ ಆರಂಭಿಸಿದೆ. ಯೋಜನೆಯ ವೆಚ್ಚ ರೂ. 380 ಕೋಟಿಯಾಗಿದೆ. ಪುನರಾಭಿವೃದ್ಧಿಗೊಂಡ ನಿಲ್ದಾಣವು ಪ್ರಯಾಣಿಕರು ಮತ್ತು ಸಾರ್ವಜನಿಕರನ್ನು ಆಕರ್ಷಿಸುವ 'ಸಿಟಿ ಸೆಂಟರ್' ಆಗಿ ಕಾರ್ಯನಿರ್ವಹಿಸಲಿದೆ ಎಂದು ರೈಲ್ವೆ ಹೇಳಿದೆ.
ಹಸಿರು ಕಟ್ಟಡದ ಪರಿಕಲ್ಪನೆಯಲ್ಲಿ ನಿರ್ಮಾಣವಾಗುವ ಈ ಕಟ್ಟಡವು ಬೆಂಗಳೂರು ನಗರದ ಒಂದು ವಿಶೇಷ ತಾಣವಾಗಿ ಹೊರಹೊಮ್ಮುತ್ತದೆ ಮತ್ತು ರೈಲು ಪ್ರಯಾಣದ ಉತ್ತಮ ಅನುಭವವನ್ನು ಜನರಿಗೆ ನೀಡಲಿದೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ರೈಲ್ವೆಯನ್ನು ಕೇವಲ ಸಾರಿಗೆ ಸಾಧನವಾಗಿ ಮಾತ್ರವಲ್ಲದ ಒಂದು ರಾಷ್ಟ್ರ ನಿರ್ಮಾಣದ ಸ್ವತ್ತನ್ನಾಗಿಯೂ ಅಭಿವೃದ್ಧಿಪಡಿಸುವುದು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ದೂರದೃಷ್ಟಿಯಾಗಿದೆ. ಅದಕ್ಕೆ ಅನುಗುಣವಾಗಿ ರೈಲ್ವೆ ಸಚಿವಾಲಯವು ಆಧುನಿಕ ಸೌಕರ್ಯಗಳೊಂದಿಗೆ ವಿಶ್ವ ದರ್ಜೆಯ ಟರ್ಮಿನಲ್ಗಳಾಗಿ ರೈಲ್ವೆ ನಿಲ್ದಾಣಗಳನ್ನು ಅಭಿವೃದ್ಧಿಪಡಿಸಲು ಪ್ರಾಮುಖ್ಯತೆ ನೀಡಿದೆ.

ಜೂನ್ 20ರಂದು ನರೇಂದ್ರ ಮೋದಿ ಯಶವಂತಪುರ ರೈಲು ನಿಲ್ದಾಣದ ಪುನರಾಭಿವೃದ್ಧಿಗೆ ಶಂಕುಸ್ಥಾಪನೆ ಮಾಡಿದರು. ನಂತರ ಟೆಂಡರ್ ಕರೆಯಲಾಯಿತು. ಅಸ್ತಿತ್ವದಲ್ಲಿರುವ ನೀತಿ ಮತ್ತು ಕಾರ್ಯವಿಧಾನದ ಪ್ರಕಾರ ಈಗ ಟೆಂಡರ್ ಅನ್ನು ಅಂತಿಮಗೊಳಿಸಿ ಮೆ. ಗಿರ್ಧಾರಿ ಲಾಲ್ ಕನ್ನಡಿಕ್ಷನ್ ಪ್ರೈವೇಟ್ ಲಿಮಿಟೆಡ್ಗೆ ಟೆಂಡರ್ ನೀಡಲಾಗಿದೆ. ಈ ಯೋಜನೆಯ ವೆಚ್ಚ ರೂ. 380 ಕೋಟಿ.
ಇಪಿಸಿ ಟೆಂಡರ್; ಈ ಟೆಂಡರ್ ಅನ್ನು ಇಂಜಿನಿಯರಿಂಗ್, ಖರೀದಿ ವ್ಯವಸ್ಥೆ ಮತ್ತು ನಿರ್ಮಾಣ ಮಾದರಿಯಲ್ಲಿ ಮಾಡಲಾಗಿದೆ. ಇದನ್ನು ಟರ್ನ್ ಕೀ ಒಪ್ಪಂದ ಎಂದೂ ಕರೆಯುತ್ತಾರೆ. ಇದರಲ್ಲಿ ಒಂದು ಏಜೆನ್ಸಿಯು ಯೋಜನೆಯನ್ನು ವಿನ್ಯಾಸಗೊಳಿಸುವ, ಸಂಗ್ರಹಿಸುವ, ನಿರ್ಮಿಸುವ ಮತ್ತು ಹಸ್ತಾಂತರಿಸುವ ಜವಾಬ್ದಾರಿಯನ್ನು ಹೊಂದಿರುತ್ತದೆ.
ಯೋಜನೆಯ ಭಾಗವಾಗಿ ಪ್ರತ್ಯೇಕವಾದ ಆಗಮನ, ನಿರ್ಗಮನ ಗೇಟ್ಗಳೊಂದಿಗೆ 216 ಮೀ ಅಗಲದ ಏರ್-ಕಾನ್ನೋರ್ಸ್ ಇರುತ್ತದೆ. ಪ್ಲಾಟ್ಫಾರ್ಮ್ ಮೇಲಿನ ಮಹಡಿಯಲ್ಲಿ ರೂಫ್ ಪ್ಲಾಜಾವು ಮಳಿಗೆಗಳು, ಫುಡ್ ಕೋರ್ಟ್, ಮನರಂಜನಾ ಕೇಂದ್ರಗಳು ಇತ್ಯಾದಿಗಳನ್ನು ಒಳಗೊಂಡಿರುತ್ತದೆ.
ನಿಲ್ದಾಣದ ಆವರಣದಲ್ಲಿ ಪ್ರಯಾಣಿಕರಿಗೆ ಸುಲಭವಾಗಿ ದಾರಿ ಹುಡುಕಲು ಸ್ಪಷ್ಟವಾಗಿ ವ್ಯಾಖ್ಯಾನಿಸಲಾದ ಎಲ್ಇಡಿ ಆಧಾರಿತ ಫಲಕಗಳನ್ನು ಒದಗಿಸಲಾಗುತ್ತದೆ. ಮೆಟ್ರೋ ನಿಲ್ದಾಣದ ಕಡೆಗೆ (ಪಶ್ಚಿಮ ಭಾಗ) ಹೊಸ ನಿಲ್ದಾಣದ ಕಟ್ಟಡವು 4 ಅಂತಸ್ತಿನ ಕಟ್ಟಡವಾಗಲಿದೆ.

ಪ್ಲಾಟ್ಫಾರ್ಮ್ 1 ರ ಕಡೆ ಬಹು ಮಹಡಿಯ (G+5 ರಚನೆ) ಕಾರ್ ಪಾರ್ಕಿಂಗ್ ಇರುತ್ತದೆ. ಪ್ಲಾಟ್ಫಾರ್ಮ್ ನಂ.1 ರ ಮೇಲೆ, ವಿಮಾನ ನಿಲ್ದಾಣದಲ್ಲಿರುವಂತೆ 'ಎ' ಕಾನ್ಕೋರ್ಸ್ಗೆ ನೇರ ಸಂಪರ್ಕದೊಂದಿಗೆ ನಿರ್ಗಮನ ಕಮ್-ಆಗಮನ ದ್ವಾರಾ ಇರುತ್ತದೆ.
'ಏ' ಕಾಮೋರ್ಸಿನ ಮೇಲ್ಛಾವಣಿಯು ನೇರವಾಗಿ ನೈಸರ್ಗಿಕ ಬೆಳಕನ್ನು ಒಳ ಬರುವಂತೆ ವ್ಯವಸ್ಥೆ ಹೊಂದಿರುತ್ತದೆ. ಇದಲ್ಲದೆ ಜನಸಂದಣಿ/ ದಟ್ಟಣೆಯನ್ನು ತಪ್ಪಿಸಲು ಸ್ಪಷ್ಟವಾಗಿ ಗುರುತಿಸಲಾದ ಡ್ರಾಪ್ ಮತ್ತು ಪಿಕ್-ಅಪ್ ಪಾಯಿಂಟ್ಗಳನ್ನು ಒದಗಿಸಲಾಗುತ್ತದೆ.
ಮೆಟ್ರೋ ನಿಲ್ದಾಣದಿಂದ ಹೋಗುವ/ ಬರುವ ಪ್ರಯಾಣಿಕರ ಅನುಕೂಲಕ್ಕಾಗಿ ಎರ್-ಕಾಮೋರ್ಸ್ ಮಟ್ಟದಲ್ಲಿಯೇ ಮೆಟ್ರೋ ನಿಲ್ದಾಣದೊಂದಿಗೆ ಪಾದಚಾರಿ ಮಾರ್ಗ ಮೂಲಕ ಸಂಪರ್ಕವನ್ನು ಒದಗಿಸಲು ಯೋಜನೆಯಲ್ಲಿ ಅವಕಾಶ ನೀಡಲಾಗಿದೆ.
ಸುಲಭ ಪ್ರವೇಶಕ್ಕಾಗಿ ಎರ್-ಕಾನ್ನೋರ್ಸ್ ನಿರ್ಗಮನ ಪಾಜಾಕ್ಕೆ ನೇರವಾಗಿ ಸಂಪರ್ಕಿಸುವ ಪೂರ್ವ ಭಾಗದಲ್ಲಿ (ಬೆಂಗಳೂರು ನಗರದ ಬದಿಯಲ್ಲಿ) ಅದೇ ಮಟ್ಟದಲ್ಲಿ ರಸ್ತೆ ಬರುತ್ತದೆ. ಸಾರ್ವಜನಿಕರ ಅನುಕೂಲಕ್ಕಾಗಿ ನಿಲ್ದಾಣದಲ್ಲಿ ಸಾರ್ವಜನಿಕ ಸಾರಿಗೆಯ ಎಲ್ಲಾ ವಿಧಾನಗಳ ಸೇವೆ ಕಲ್ಪಿಸಲು ಅವಕಾಶ ಇರುತ್ತದೆ.
ಈಗಾಗಲೇ ನಗರದ ಬೈಯಪ್ಪನಹಳ್ಳಿ ರೈಲು ನಿಲ್ದಾಣವನ್ನು ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿಗೊಳಿಸಲಾಗಿದೆ. ಕಂಟೋನ್ಮೆಂಟ್ ರೈಲು ನಿಲ್ದಾಣದ ಅಭಿವೃದ್ಧಿಗೂ ಯೋಜನೆ ರೂಪಿಸಲಾಗಿದೆ. ಪ್ರತಿನಿತ್ಯ 1 ಲಕ್ಷಕ್ಕೂ ಅಧಿಕ ಜನರು ಭೇಟಿ ನೀಡುವಂತೆ ಯಶವಂತಪುರ ನಿಲ್ದಾಣ ಅಭಿವೃದ್ಧಿಗೊಳಿಸಲಾಗುತ್ತದೆ. 2025ರ ವೇಳೆಗೆ ಈ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ.
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ












Click it and Unblock the Notifications