ನವೆಂಬರ್ ನಲ್ಲಿ ಯಶವಂತಪುರ-ಪೀಣ್ಯ ಮೆಟ್ರೋ ರೈಲು
ಬೆಂಗಳೂರು, ಅ.16 : ಪೀಣ್ಯ ಮತ್ತು ಯಶವಂತಪುರದ ನಡುವೆ ಸಂಚರಿಸುವ ಜನರಿಗೆ ಸಿಹಿ ಸುದ್ದಿ ಕಾದಿದೆ. ನವೆಂವರ್ ಅಂತ್ಯಕ್ಕೆ ಈ ಮಾರ್ಗದ ನಮ್ಮ ಮೆಟ್ರೋ ಸಂಚಾರ ಪ್ರಾರಂಭಿಸಲು ಬಿಎಂಆರ್ ಸಿಎಲ್ ಸಿದ್ಧತೆ ನಡೆಸಿದೆ.
9.9 ಕಿ.ಮೀ. ವ್ಯಾಪ್ತಿಯ ಪೀಣ್ಯ-ಯಶವಂತಪುರ ನಡುವಿನ ನಮ್ಮ ಮೆಟ್ರೋ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ರೈಲ್ವೆ ಇಲಾಖೆಯ ಸುರಕ್ಷತೆಯ ಪ್ರಮಾಣ ಪತ್ರ ದೊರೆಕಿದರೆ, ಮಾರ್ಗದಲ್ಲಿ ಮೆಟ್ರೋ ಸಾರ್ವಜನಿಕರ ಸಂಚಾರಕ್ಕೆ ಮುಕ್ತವಾಗಲಿದೆ.

ಬಿಎಂಆರ್ ಸಿಎಲ್ ಅಧಿಕಾರಿಗಳು ನವೆಂವರ್ ಅಂತ್ಯದ ವೇಳೆಗೆ ಮಾರ್ಗದಲ್ಲಿ ರೈಲು ಸಂಚಾರ ಆರಂಭಿಸಲು ಸಜ್ಜಾಗಿದ್ದಾರೆ. ಈ ಕುರಿತು ಬಿಎಂಆರ್ ಸಿಎಲ್ ನಿರ್ದೇಶಕ ಪ್ರದೀಪ್ ಸಿಂಗ್ ಕರೋಲಾ ಸಹ ಹೇಳಿಕೆ ನೀಡಿದ್ದು, ನವೆಂಬರ್ 30ರೊಳಗೆ ಎಲ್ಲಾ ಕೆಲಸಗಳನ್ನು ಮುಗಿಸಿ, ರೈಲು ಸಂಚಾರ ಆರಂಭಿಸಲಾಗುವುದು ಎಂದು ಹೇಳಿದ್ದಾರೆ.
ಬಿಎಂಆರ್ ಸಿಎಲ್ ಶೀಘ್ರದಲ್ಲೇ ಪ್ರಾಯೋಗಿಕ ಸಂಚಾರ ವೀಕ್ಷಿಸಲು ಆಗಮಿಸುವಂತೆ ರೈಲ್ವೆ ಸುರಕ್ಷತಾ ಸಮಿತಿಗೆ ಆಹ್ವಾನ ನೀಡಲಿದೆ. ಆಹ್ವಾನ ತಲುಪಿದ ನಂತರ ಒಂದು ತಿಂಗಳ ಅವಧಿಯಲ್ಲಿ ಸಮಿತಿ ಆಗಮಿಸಿ ಪ್ರಾಯೋಗಿಕ ಸಂಚಾರದ ವೀಕ್ಷಣೆ ನಡೆಸಲಿದೆ.
ಆದರೆ, ರೀಚ್ 3ಬಿಯ ಪೀಣ್ಯ-ನಾಗಸಂದ್ರ ಮಾರ್ಗದ ಸಾರ್ವಜನಿಕರು ರೈಲು ಸಂಚಾರಕ್ಕಾಗಿ ಮಾರ್ಚ್ 2014ರವರೆಗೆ ಕಾಯುವುದು ಅನಿವಾರ್ಯವಾಗಿದೆ ಎಂದು ಪ್ರದೀಪ್ ಸಿಂಗ್ ಕರೋಲಾ ಹೇಳಿದ್ದಾರೆ.
ಸಚಿವರಿಂದ ಮೆಟ್ರೋ ಕಾಮಗಾರಿ ವೀಕ್ಷಣೆ : ನಮ್ಮ ಮೆಟ್ರೊ ನಿಲ್ದಾಣಗಳ ಬಳಿ ಇರುವ ಬಿಬಿಎಂಪಿ ಜಾಗದಲ್ಲಿ ವಾಹನ ನಿಲುಗಡೆ ವ್ಯವಸ್ಥೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ನಗರದ ಕೆ.ಆರ್.ರಸ್ತೆ ಮತ್ತು ಮೈಸೂರು ರಸ್ತೆಯ 'ನಮ್ಮ ಮೆಟ್ರೊ' ನಿಲ್ದಾಣಗಳ ಕಾಮಗಾರಿಯನ್ನು ಮಂಗಳವಾರ ಸಚಿವರು ಪರಿಶೀಲನೆ ನಡೆಸಿದರು. ಕೆಲವು ಮೆಟ್ರೊ ನಿಲ್ದಾಣಗಳಲ್ಲಿ ವಾಹನ ನಿಲುಗಡೆಗೆ ಅವಕಾಶವಿಲ್ಲದಂತೆ ಈ ಹಿಂದೆ ಯೋಜನೆ ರೂಪಿಸಲಾಗಿದೆ.
ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ನಿಲ್ದಾಣಗಳ ಸಮೀಪದಲ್ಲೇ ಇರುವ ಬಿಬಿಎಂಪಿ ಜಾಗವನ್ನು ಗುರುತಿಸಿ ವಾಹನ ನಿಲುಗಡೆ ಪ್ರದೇಶವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications