ಯಶವಂತಪುರ ರೈಲು ನಿಲ್ದಾಣ ಪುನರಾಭಿವೃದ್ಧಿಗೆ ಚಾಲನೆ, ಪೂರ್ಣ ಯಾವಾಗ ತಿಳಿಯಿರಿ
ಬೆಂಗಳೂರು, ಸೆಪ್ಟೆಂಬರ್ 20: ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದ ಪುನರಾಭಿವೃದ್ಧಿಗೆ ಸಂಬಂಧಿಸಿದ ಕಾಮಗಾರಿಗಳು ವೇಗ ಪಡೆದಿದ್ದು, ಸಿವಿಲ್ ಮತ್ತು ನಿರ್ಮಾಣ ಕಾರ್ಯಗಳು ಈಗ ಚುರುಕುಗೊಂಡಿವೆ.
ಹಂತ-1 ರ ಭಾಗವಾಗಿ ರೈಲ್ವೆ ನಿಲ್ದಾಣದ ಪ್ಲಾಟ್ಫಾರ್ಮ್ ನಂಬರ್ ಒಂದರ ಪೂರ್ವ ಭಾಗದಲ್ಲಿ ನಿರ್ಮಾಣ ಕಾರ್ಯವನ್ನು ಪ್ರಾರಂಭಿಸಲಾಗಿದೆ. ಏತನ್ಮಧ್ಯೆ ಮಲ್ಟಿ- ಲೆವೆಲ್ ಕಾರ್ ಪಾರ್ಕಿಂಗ್ (ಗ್ರೌಂಡ್+5), ಮತ್ತು ಆಗಮನ ಹಾಗೂ ನಿರ್ಗಮನ ಪ್ಲಾಜಾದೊಂದಿಗೆ ಎತ್ತರಿಸಿದ ರಸ್ತೆಗಾಗಿ ಇಳಿಜಾರುಗಳ ನಿರ್ಮಾಣ ಪ್ರಗತಿಯಲ್ಲಿದೆ ಎಂದು ನೈಋತ್ಯ ರೈಲ್ವೆ ಮಾಹಿತಿ ಮಾಡಿದೆ.

ಯಶವಂತಪುರ ರೈಲು ನಿಲ್ದಾಣದ ಪುನರಾಭಿವೃದ್ಧಿಯು ವಿಮಾನ ನಿಲ್ದಾಣ ಮಾದರಿಯ ಮೂಲಭೂತ ಸೌಕರ್ಯಗಳನ್ನು ಒದಗಿಸುತ್ತದೆ. ಈ ಯೋಜನೆಯು ಪ್ರಯಾಣಿಕರಿಗೆ ಉತ್ತಮ, ಆರಾಮದಾಯಕ ಮತ್ತು ತಡೆರಹಿತ ಅನುಭವವನ್ನು ಒದಗಿಸುತ್ತದೆ.
ರೈಲು ನಿಲ್ದಾಣದಲ್ಲಿ ಸಂಚಾರ ದಟ್ಟಣೆ ತಡೆಯುವ ನಿಟ್ಟಿನಲ್ಲಿ ವಾಹನಗಳಿಗೆ ಪ್ರತ್ಯೇಕ ಆಗಮನ ಮತ್ತು ನಿರ್ಗಮನ ಕೇಂದ್ರಗಳ ರಚನಾ ಕಲ್ಪನೆ ಇದೆ. ನಿಲ್ದಾಣವು ದೊಡ್ಡ ಏರ್ ಕಾನ್ಕೋರ್ಸ್ (14,800 ಚದರ ಮೀಟರ್ ಗಾತ್ರದಲ್ಲಿ) ಸಹ ಹೊಂದಿದ್ದು, ಇದು ಫುಡ್ ಕೋರ್ಟ್ಗಳು, ಚಿಲ್ಲರೆ ಅಂಗಡಿಗಳು, ವ್ಯಾಪಾರ ಕೇಂದ್ರಗಳು, ವಿಮಾನ ನಿಲ್ದಾಣಗಳಲ್ಲಿ ಇರುವಂತೆ ಕಾಯುವ ಕೋಣೆ ಮಾದರಿ ಕೊಠಡಿಗಳು ಇರುತ್ತದೆ ಎಂದು ತಿಳಿಸಲಾಗಿದೆ.
ಮಳೆ ನೀರು ಕೊಯ್ಲು, ಒಳಚರಂಡಿ ನೀರು ಸಂಸ್ಕರಣಾ ಘಟಕಗಳು, ಎಲ್ಇಡಿ ದೀಪಗಳನ್ನು ಅಳವಡಿಸುವುದು ಮತ್ತು ಇತರ ಗ್ರೀನ್ ಪ್ರಾಜೆಕ್ಟ್ ಯೋಜನೆ ಮೂಲಕ ಹಸಿರು-ಕಟ್ಟಡದ ನಿಯಮಗಳ ಪ್ರಕಾರ ನಿಲ್ದಾಣವನ್ನು ನಿರ್ಮಿಸಲಾಗುವುದು. ಸಾಕಷ್ಟು ನೈಸರ್ಗಿಕ ಬೆಳಕು ಮತ್ತು ಗಾಳಿಯನ್ನು ಅನುಮತಿಸಲು ಸಾಕಷ್ಟು ಅವಕಾಶವನ್ನು ಸಹ ಮಾಡಲಾಗುವುದು ಎಂದು ತಿಳಿಸಲಾಗಿದೆ.
ಪುನರಾಭಿವೃದ್ಧಿ ಯೋಜನೆಯ ಭಾಗವಾಗಿ, ನಿಲ್ದಾಣವು ಟ್ರ್ಯಾಕ್ಗಳು ಮತ್ತು ಪ್ಲಾಟ್ಫಾರ್ಮ್ಗಳ ಮೇಲೆ ನಿರ್ಮಿಸಲಾದ ಕಾನ್ಕೋರ್ಸ್ ಅನ್ನು ಸಹ ಹೊಂದಿರುತ್ತದೆ. ಇದು ರೈಲು ಪ್ರಯಾಣಿಕರಿಗೆ ಸಂಪರ್ಕವನ್ನು ಸುಧಾರಿಸಲು ಹೊಸ ನಿರ್ಗಮನ ಕಟ್ಟಡವನ್ನು ಸಂಪರ್ಕಿಸುತ್ತದೆ.
ಹಂತ-1 ಅಂದರೆ ಪೂರ್ವ ಭಾಗದ ಕಾಮಗಾರಿ ಪೂರ್ಣಗೊಂಡ ನಂತರ ಪಶ್ಚಿಮ ಭಾಗದಲ್ಲಿ ಯಶವಂತಪುರ ಮೆಟ್ರೋ ಬಳಿ ಕಾಮಗಾರಿ ಆರಂಭವಾಗಲಿದೆ. ಯಶವಂತಪುರ ನಿಲ್ದಾಣದ ಸಂಪೂರ್ಣ ಪುನರಾಭಿವೃದ್ಧಿ ಕಾರ್ಯವನ್ನು ಜುಲೈ 2025 ರೊಳಗೆ ಪೂರ್ಣಗೊಳಿಸುವ ಗುರಿಯನ್ನು ಹೊಂದಿದೆ.
M/s ಗಿರ್ಧಾರಿ ಲಾಲ್ ಕನ್ಸ್ಟ್ರಕ್ಷನ್ಸ್ ಪ್ರೈವೇಟ್ ಲಿಮಿಟೆಡ್ ದೆಹಲಿಯು ಈ ನಿಲ್ದಾಣದ ಮರುಅಭಿವೃದ್ಧಿಯ ಗುತ್ತಿಗೆಯನ್ನು ರೂ. 380 ಕೋಟಿಗೆ ಪಡೆದಿದೆ. ಜೂನ್ 2022 ರಲ್ಲಿ ಈ ನಿಲ್ದಾಣದ ಪುನರಾಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ಮಾಡಿದ್ದರು ಎಂಬುದನ್ನು ಇಲ್ಲಿ ಸ್ಮರಿಸಬಹುದು.
-
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು












Click it and Unblock the Notifications