ಯಶವಂತಪುರ ಸಿ.ವಿ.ರಾಮನ್ ರಸ್ತೆ ಬಂದ್: ಪರ್ಯಾಯ ಮಾರ್ಗ ಹೀಗಿದೆ ನೋಡಿ
ಬೆಂಗಳೂರು, ಸೆಪ್ಟಂಬರ್ 28: ಬಿಬಿಎಂಪಿ ಕೈಗೊಂಡಿರುವ ವೈಟ್ ಟಾಪಿಂಗ್ ಕಾಮಗಾರಿ ಕಾರಣಕ್ಕೆ ಯಶವಂತಪುರದ ಸರ್ ಸಿ.ವಿ. ರಾಮನ್ ರಸ್ತೆಯಲ್ಲಿ ಒಂದು ತಿಂಗಳ ಕಾಲ ಸಂಚಾರ ಸ್ಥಗಿತಗೊಳ್ಳಲಿದೆ. ಸಾರ್ವಜನಿಕರು ಪರ್ಯಾಯ ಮಾರ್ಗ ಕಂಡು ಕೊಳ್ಳಬೇಕಿದ್ದು, ಅದರ ಸಂಪೂರ್ಣ ಮಾಹಿತಿ ಇಲ್ಲಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯು ಯಶವಂತಪುರದ ಸರ್ ಸಿ.ವಿ.ರಾಮನ್ ರಸ್ತೆಯ ಒಂದು ಬದಿಯಲ್ಲಿ ವೈಟ್ಟಾಪಿಂಗ್ ಕಾಮಗಾರಿ ಆರಂಭಿಸಲಾಗಿದೆ. ಈ ಹಿನ್ನೆಲೆಯಲ್ಲಿ ಈ ರಸ್ತೆಯ ಒಂದು ಭಾಗವನ್ನು ಸೆಪ್ಟೆಂಬರ್ 27ರ ಮಂಗಳವಾರದಿಂದ ಸುಮಾರು ಒಂದು ತಿಂಗಳ ಕಾಲ ಸ್ಥಗಿತಗೊಳಿಸಲು ತೀರ್ಮಾನಿಸಲಾಗಿದೆ. ಹೀಗಾಗಿ ಎಲ್ಲ ಮಾದರಿಯ ವಾಹನಗಳ ಸಂಚಾರವನ್ನು ಈ ರಸ್ತೆಯಲ್ಲಿ ಬಂದ್ ಮಾಡಲಾಗಿದೆ.
ಕಾಮಗಾರಿ ಹಿನ್ನೆಲೆಯಲ್ಲಿ ಯಶವಂತಪುರ ಸಂಚಾರ ಪೊಲೀಸರು ರಸ್ತೆ ಮುಚ್ಚಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಅಲ್ಲದೇ ಒಂದು ತಿಂಗಳ ಈ ಮಾರ್ಗದಲ್ಲಿ ಓಡಾಡುವ ವಾಹನಗಳ ಸವಾರರು ತಮ್ಮ ನಿಗದಿತ ಸ್ಥಳ ತಲುಪಲು ಪರ್ಯಾಯ ರಸ್ತೆಯಲ್ಲಿ ಸಂಚರಿಸುವಂತೆ ಪಟ್ಟಿ ಬಿಡುಗಡೆ ಮಾಡಿದ್ದಾರೆ.

ಪರ್ಯಾಯ ಮಾರ್ಗ ಯಾವವು?
ಮತ್ತಿಕೆರೆ ಬಿಇಎಲ್ ಯಶವಂತಪುರ ಕಡೆಯಿಂದ ವೃತ್ತದ ಕಡೆಗೆ ಹೋಗುವ ವಾಹನಗಳು (ಲಘು ವಾಹನಗಳಿಗೆ ಮಾತ್ರ) ಯಶವಂತಪುರ ವೃತ್ತ-ಪ್ರವೇಶ ರಸ್ತೆ ಮೂಲಕ ಹೋಗಿ ಎಚ್ಎಂಟಿ ಮುಖ್ಯ ರಸ್ತೆಯಲ್ಲಿ ಎಡ ತಿರುವು ತೆಗೆದುಕೊಳ್ಳಬೇಕು. ಇನ್ನು ಭಾರಿ ವಾಹನಗಳು ಮತ್ತು ಬಿಎಂಟಿಸಿ ಬಸ್ಗಳು ಮಾತ್ರ ಯಶವಂತಪುರ ವೃತ್ತದಲ್ಲಿ ಎಡ ತಿರುವು ಪಡೆದು ಯಶವಂತಪುರ ಬಜಾರ್ ಮಾರ್ಗವಾಗಿ ಬಾಂಬೆ ಡೈಯಿಂಗ್ ರಸ್ತೆ, ಎಚ್ಎಂಟಿ ಮುಖ್ಯ ರಸ್ತೆಗೆ ಎಡ ತಿರುವು ಪಡೆದುಕೊಳ್ಳಬೇಕು.
ಬಿಇಎಲ್ ಸರ್ಕಲ್ನಿಂದ ಯಶವಂತಪುರಕ್ಕೆ ಬರುವ ವಾಹನಗಳು ಯು ಟರ್ನ್ ಪಡೆದು ಬಾಂಬೆ ಡೈಯಿಂಗ್ ಆರ್ಟಿಒ ಕಚೇರಿ ಮಾರ್ಗವಾಗಿ ಯಶವಂತಪುರ ವೃತ್ತಕ್ಕೆ ಸಾಗಬೇಕಿದೆ. ಇನ್ನೂ ತುಮಕೂರು ರಸ್ತೆಯಿಂದ ಮೆಜೆಸ್ಟಿಕ್ ಕಡೆಗೆ ಹೋಗುವ ವಾಹನಗಳು ತುಮಕೂರು ರಸ್ತೆ, ಆರ್ಎಂಸಿ ಯಾರ್ಡ್ನಿಂದ ಮಾರಪ್ಪನಪಾಳ್ಯ ಹೂವಿನ ಮಾರುಕಟ್ಟೆ, ಸೋಪ್ ಫ್ಯಾಕ್ಟರಿ ವೃತ್ತ ಹಾದು ನವರಂಗದ ಮೂಲಕ ರಾಜ್ಕುಮಾರ್ ರಸ್ತೆ ಅನುಸರಿಸಿ ತೆರಳಬೇಕಿದೆ.

ಅದೇ ರೀತಿ ಯಶವಂತಪುರ ವೃತ್ತದಿಂದ ಮೇಖ್ರಿ ವೃತ್ತಕ್ಕೆ ಹೋಗುವ ವಾಹನಗಳು ಯಶವಂತಪುರ ವೃತ್ತದಿಂದ ರಸ್ತೆ ಮೂಲಕ ಡಿಸಿಪಿ ಕಚೇರಿ ಬಿಎಚ್ಇಎಲ್ ಜಂಕ್ಷನ್ನಲ್ಲಿ ಸರ್ವಿಸ್ ರಸ್ತೆಗೆ ಇಳಿದು ಮುಂದೆ ಸಾಗಿ ಎಡ ತಿರುವ ಪಡೆದುಕೊಳ್ಳಬೇಕು ಎಂದು ಪ್ರಕಟಣೆ ತಿಳಿಸಿದೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications