ವಿಶ್ವ ಯೋಗ ದಿನ; ಕೊರೊನಾ ಮತ್ತು ಯೋಗ ಜಾಗೃತಿ ನಡಿಗೆ
ಬೆಂಗಳೂರು, ಜೂನ್ 20: ಶ್ರೀ ಯೋಗ ಮತ್ತು ಸಾಂಸ್ಕೃತಿಕ ಅಕಾಡೆಮಿ ಹಾಗೂ ಆಚಾರ್ಯ ಯೋಗ ಯೂತ್ ಕ್ಲಬ್ ವತಿಯಿಂದ ಇಂದು ಕೊರೊನಾ ಮತ್ತು ಯೋಗ ಜಾಗೃತಿ ನಡಿಗೆಯನ್ನು ಆಯೋಜಿಸಲಾಗಿತ್ತು.
Recommended Video
ರಾಜರಾಜೇಶ್ವರಿ ನಗರದ ರಾಜೇಶ್ವರಿ ವಿದ್ಯಶಾಲಾದಿಂದ ಜ್ಞಾನಾಕ್ಷಿ ವಿದ್ಯಾನಿಕೇತನ್ ವರೆಗೆ ಜಾಗೃತಿ ನಡಿಗೆಯಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳಿಗೆ ಸ್ಯಾನಿಟೈಸರ್, ಗ್ಲೌಸ್ ಹಾಗೂ ಮಾಸ್ಕ್ ವಿತರಿಸಲಾಯಿತು. ಕಾರ್ಯಕ್ರಮ ಪ್ರಾರಂಭವಾಗುವ ಮೊದಲು ಚೀನಾ ಗಡಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ, "ಯೋಗ ಮಾಡಿ ರೋಗ ಮುಕ್ತರಾಗಿ" ಎಂದು ಕಾಂಗ್ರೆಸ್ ಮುಖಂಡ ಎಂ.ರಾಜ್ ಕುಮಾರ್ ಅವರು ಸಂದೇಶ ನೀಡಿದರು. ಕಾರ್ಯಕ್ರಮದಲ್ಲಿ ಬಿಬಿಎಂಪಿ ಸದಸ್ಯರಾದ ನಳಿನಿ ಎಂ ಮಂಜು ಅವರು ಪಾಲ್ಗೊಂಡಿದ್ದರು. ಇಂಥ ಸಂದರ್ಭದಲ್ಲಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಕಾರ್ಯಕ್ರಮ ಹಮ್ಮಿಕೊಂಡು ಜನರಿಗೆ ಅರಿವು ಮೂಡಿಸುವುದು ತುಂಬಾ ಮುಖ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು ರಾಜರಾಜೇಶ್ವರಿ ವಿದ್ಯಾ ಶಾಲೆ ಅಧ್ಯಕ್ಷ ಗೋಪಾಲನ್.

ವ್ಯವಸ್ಥಿತವಾಗಿ ಹಾಗೂ ಎಲ್ಲಾ ತರಹದ ಮುಂಜಾಗ್ರತಾ ಕ್ರಮಗಳೊಂದಿಗೆ ಈ ಜಾಗೃತಿ ನಡಿಗೆ ಹಮ್ಮಿಕೊಂಡಿರುವುದು ಉತ್ತಮ ಕಾರ್ಯ ಎಂದು ಶ್ಲಾಘಿಸಿದರು ಗಾರ್ಡನ್ ಸಿಟಿ ಕೋಪರೇಟಿವ್ ಸೊಸೈಟಿಯ ಚೇರ್ಮೆನ್ ಮೋಹನ್.ಕೆ. ಬಿಜೆಪಿ ಮುಖಂಡರಾದ ಶಶಿಕಾಂತ್ ರಾವ್, ಜಗದೀಶ್ ಆರ್ ಚಂದ್ರ, ರಾಜರಾಜೇಶ್ವರಿ ಅಸೋಸಿಯೇಷನ್ ಯೂತ್ ಅಧ್ಯಕ್ಷರಾದ ವೀರು ರಜಪೂತ, ಯೋಗ ಮತ್ತು ಸಾಂಸ್ಕೃತಿಕ ಅಕಾಡೆಮಿ ಅಧ್ಯಕ್ಷ ಕಾರ್ಯದರ್ಶಿಗಳಾದ ರಮೇಶ್ ಶ್ರೀಮತಿ ಹಾಗೂ ಆಚಾರ್ಯ ಯೋಗ ಯೂತ್ ಕ್ಲಬ್ ಅಧ್ಯಕ್ಷ ಕೆ.ಎಸ್ ಮೋಹನ್ ಕುಮಾರ್, ಕಾರ್ಯದರ್ಶಿ ರಾಜೇಶಾಚಾರಿ ಅವರು ಪಾಲ್ಗೊಂಡಿದ್ದರು.
ಯೋಗ ಜಾಗೃತಿ ನಡಿಗೆಯಲ್ಲಿ ಸುಮಾರು 60 ಜನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
-
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications