ಗುರುವಾರ ನೆಲಮಂಗಲಕ್ಕೆ ಯೋಗಿ ಆದಿತ್ಯನಾಥ್ ಆಗಮನ
ಬೆಂಗಳೂರು, ಆಗಸ್ಟ್ 31; ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗುರುವಾರ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ನೂತನವಾಗಿ ನಿರ್ಮಾಣ ಮಾಡಿರುವ ಪ್ರಕೃತಿ ಚಿಕಿತ್ಸಾ ಕೇಂದ್ರ 'ಕ್ಷೇಮವನ' ಉದ್ಘಾಟಿಸಲಿದ್ದಾರೆ.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಸಂಸ್ಥೆಯ ಘಟಕ 'ಕ್ಷೇಮವನ' ಉದ್ಘಾಟನೆಗೆ ಯೋಗಿ ಆದಿತ್ಯನಾಥ್ ಆಗಮಿಸುತ್ತಿದ್ದಾರೆ. ಸೆಪ್ಟೆಂಬರ್ 1ರ ಗುರುವಾರ 11.45ರ ಸುಮಾರಿಗೆ ಕಾರ್ಯಕ್ರಮ ನಡೆಯಲಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ರಾಜ್ಯಸಭಾ ಸದಸ್ಯ, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.

ನೆಲಮಂಗಲದ ಕುಣಿಗಲ್ ಬೈಪಾಸ್ ರಸ್ತೆಯ ಸಮೀಪದ ಸಂಭ್ರಮ ಹೋಟೆಲ್ ಹತ್ತಿರ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಸಂಸ್ಥೆಯ ಘಟಕ ಕ್ಷೇಮವನ ನಿರ್ಮಾಣ ಮಾಡಲಾಗಿದೆ.
ಈ ಹಿಂದೆ ಸಂಸ್ಥೆಯಿಂದ 'ಶಾಂತಿವನ', 'ಸೌಖ್ಯವನ' ನಿರ್ಮಾಣ ಮಾಡಲಾಗಿತ್ತು. 'ಕ್ಷೇಮವನ' ಸಂಸ್ಥೆಯ ಮೂರನೇ ವನವಾಗಿದೆ ಎಂದು ಸಂಸ್ಥೆಯ ಉಪಾಧ್ಯಕ್ಷರಾದ ಡಿ. ಸುರೇಂದ್ರ ಕುಮಾರ್ ಹೇಳಿದ್ದಾರೆ.
20 ಎಕರೆ ಪ್ರದೇಶ; 20 ಎಕರೆ ಪ್ರದೇಶದಲ್ಲಿ ಕ್ಷೇಮವನ ನಿರ್ಮಾಣ ಮಾಡಲಾಗಿದೆ. ಪ್ರಕೃತಿ ಚಿಕಿತ್ಸಾ ಕೇಂದ್ರವಿದಾಗಿದ್ದು, ದೇಹ ಮತ್ತು ಮನಸ್ಸಿನ ಸಮತೋಲನ ಕಾಯ್ದುಕೊಳ್ಳಲು ಸಹಾಯಕವಾಗಲಿದೆ.

ಪ್ರಾಚೀನ ವಸ್ತು, ಬಣ್ಣ, ವಿನ್ಯಾಸ ಮತ್ತು ಸಂರಚನೆ ಇಲ್ಲಿಯ ವಿಶೇಷತೆಯಾಗಿದೆ. ಮಹೇಶ್ ಡಿಯೋಫೋಡೆ ಈ ಕೇಂದ್ರವನ್ನು ವಿನ್ಯಾಸ ಮಾಡಿದ್ದಾರೆ. 400 ಜನರಿಗೆ ಏಕಕಾಲದಲ್ಲಿ ಶುಶ್ರೂಷೆ ನೀಡುವಂತಹ ಸೌಲಭ್ಯಗಳು ಕ್ಷೇಮವನದಲ್ಲಿವೆ.
86 ವಿಶೇಷ ಕೊಠಡಿ, ಶಯನಾರೋಗ್ಯ, ಪೌಷ್ಠಿಕ ಆಹಾರ ಸೇರಿದಂತೆ 5 ಬಗೆಯ ಶುಶ್ರೂಷೆ ವಿಧಾನಗಳಿವೆ. ನಿಸರ್ಗ ಸಹಜ ವಿಧಾನಗಳ ಮೂಲಕ ಆರೋಗ್ಯ ಕಾಪಾಡಿಕೊಳ್ಳಬಯಸುವವರು ಇಲ್ಲಿಗೆ ಭೇಟಿ ನೀಡಬಹುದಾಗಿದೆ.
ಪೌರಾಣಿಕವಾದ ಕೂರ್ಮಾವತಾರದ ಪರಿಕಲ್ಪನೆಯಲ್ಲಿ ಈ ಕ್ಷೇಮವನದ ಕಟ್ಟಡ ವಿನ್ಯಾಸಗೊಳಿಸಲಾಗಿದೆ. ಯೋಗ, ಧ್ಯಾನ, ಹವಾನಿಯಂತ್ರಿನ ಈಜುಕೊಳ ಸೇರಿದಂತೆ ವಿವಿಧ ಸೌಲಭ್ಯಗಳು ಇಲ್ಲಿವೆ.
ಎಸ್ಡಿಎಂ ಸೊಸೈಟಿ ನಿರ್ದೇಶಕಿ ಶ್ರದ್ಧಾ ಮಾತನಾಡಿ, "ಶೇ 60ರಷ್ಟು ಸಾಮಾನ್ಯ ಕೊಠಡಿಗಳು ಇಲ್ಲಿವೆ. ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಕಡಿಮೆ ದರದಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಚಿಕಿತ್ಸೆಯಲ್ಲಿ ಯಾವುದೇ ಭೇದಭಾವ ಇರುವುದಿಲ್ಲ" ಎಂದು ಹೇಳಿದ್ದಾರೆ.
ಮನುಷ್ಯನ ಒತ್ತಡ ನಿವಾರಣೆ ಜೊತೆಗೆ ಉತ್ತಮ ಆರೋಗ್ಯಕ್ಕಾಗಿ ಶಾಂತಿವನ, ಸೌಖ್ಯವನದ ನಂತರ ಕ್ಷೇಮವನ ನಿರ್ಮಾಣ ಮಾಡಲಾಗಿದೆ. ಇದನ್ನು ಉದ್ಘಾಟಿಸಲು ಯೋಗಿ ಆದಿತ್ಯನಾಥ್ ಬರುತ್ತಿರುವುದು ಸಂತಸ ತಂದಿದೆ. ಅವಕಾಶ ಸಿಕ್ಕಿದರೆ ಇದೇ ಮಾದರಿಯನ್ನು ದೇಶದ ವಿವಿಧ ಕಡೆ ವಿಸ್ತರಣೆ ಮಾಡಲಾಗುತ್ತದೆ ಎಂದು ಡಾ. ವೀರೇಂದ್ರ ಹೆಗ್ಗಡೆ ತಿಳಿಸಿದ್ದಾರೆ.
20 ಎಕರೆ ಪ್ರದೇಶದಲ್ಲಿ 93 ಕೋಟಿ ರೂ. ವೆಚ್ಚದಲ್ಲಿ ಕ್ಷೇಮನವ ನಿರ್ಮಾಣ ಮಾಡಲಾಗಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳ ಜನರ ಉತ್ತಮ ಆರೋಗ್ಯಕ್ಕೆ ಈ ಕೇಂದ್ರ ಸಹಾಯಕವಾಗಲಿದೆ. ಡಾ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ದಿನದಂದು ನೆಲಮಂಗಲದಲ್ಲಿ ಕ್ಷೇಮವನ ನಿರ್ಮಾಣ ಮಾಡುವ ಭರವಸೆ ನೀಡಿದ್ದರು.
ಪ್ರಕೃತಿ ಚಿಕಿತ್ಸೆಯ ಜೊತೆಗೆ ಇಲ್ಲಿ ವಸ್ತು ಸಂಗ್ರಹಾಲಯ ನಿರ್ಮಾಣ ಮಾಡಲಾಗಿದೆ. ನಿರುಪಯುಕ್ತ ವಸ್ತುಗಳು, ಪುರಾತನ ದೇವಾಲಯದ ಪಳಯುಳಿಕೆಗಳನ್ನು ಬಳಸಿಕೊಂಡು ಮನಸ್ಸಿಗೆ ನೆಮ್ಮದಿ ನೀಡುವಂತಹ ಪ್ರಾಚೀನ ವಾಸ್ತು ವಿನ್ಯಾಸದಲ್ಲಿ ಸಂಗ್ರಹಾಲಯ ನಿರ್ಮಾಣ ಮಾಡಲಾಗಿದೆ.
ಈಜುಕೊಳ, ಹಿಮಾಲಯದ ಗುಹೆಗಳನ್ನು ಹೋಲುವ ಧ್ಯಾನ ಕೇಂದ್ರ, ಪಾರ್ಶ್ವವಾಯು ಆದವರಿಗೆ ನೀರಿನ ಚಿಕಿತ್ಸೆ, ಆಯಸ್ಕಾಂತ ಚಿಕಿತ್ಸೆ, ಉಸಿರಾಟದ ಚಿಕಿತ್ಸೆ ಸೇರಿದಂತೆ 25 ಬಗೆಯ ಚಿಕಿತ್ಸೆಗಳು ಈ ಆವರಣದಲ್ಲಿ ಲಭ್ಯವಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications