ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

2 ವರ್ಷದ ಪ್ರೀತಿ ಎರಡೇ ನಿಮಿಷದಲ್ಲಿ ಯುವಕನ ಪ್ರಾಣವನ್ನೇ ಕಸಿಯಿತು

|
Google Oneindia Kannada News

ಬೆಂಗಳೂರು, ಜನವರಿ 9 : ಹೊರಗಡೆ ಹೋಗುತ್ತೇನೆ ಎಂದು ತಾಯಿಗೆ ಹೇಳಿ ಹೊರಟ ಯುವಕ ಎರಡು ದಿನಗಳ ನಂತರ ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. 2 ವರ್ಷಗಳ ಪ್ರೀತಿ 2 ನಿಮಿಷದಲ್ಲಿ ಯುವಕನ ಪ್ರಾಣ ಕಸಿದಿದೆ.

ರಹೀಂ ಮೃತ ದುರ್ದೈವಿ. ಜನವರಿ 7ರಂದು ಮನೆಯಿಂದ ಹೊರಗಡೆ ಹೋಗುತ್ತಿದ್ದೇನೆ ಎಂದು ತಾಯಿಗೆ ತಿಳಿಸಿದ್ದಾನೆ. ಬಳಿಕ ಎರಡು ದಿನವಾದರೂ ಆತ ಮನೆಗೆ ವಾಪಸ್ ಬಂದಿರಲಿಲ್ಲ. ಬಳಿಕ ನಿರ್ಜನ ಪ್ರದೇಶದಲ್ಲಿ ಆತನ ಶವವಾಗಿ ಪತ್ತೆಯಾಗಿದ್ದಾನೆ. ತಾಯಿಯ ರೋದನೆ ಮುಗಿಲು ಮುಟ್ಟಿದೆ.

ರಕ್ತದ ಮಡುವಿನಲ್ಲಿದ್ದರೂ ಹೆಂಡತಿಗೆ ಕರೆ ಮಾಡಿ ನನ್ನನ್ನು ಬದುಕಿಸು ಎಂದಿದ್ದ ಸೈಯದ್ ರಕ್ತದ ಮಡುವಿನಲ್ಲಿದ್ದರೂ ಹೆಂಡತಿಗೆ ಕರೆ ಮಾಡಿ ನನ್ನನ್ನು ಬದುಕಿಸು ಎಂದಿದ್ದ ಸೈಯದ್

ರಹೀಂ ಎರಡು ವರ್ಷಗಳಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಯುವತಿಗೆ ಅವರ ಪೋಷಕರು ಬೇರೊಬ್ಬ ಯುವಕನ ಜೊತೆ ವಿವಾಹ ನಿಶ್ಚಯ ಮಾಡಿದ್ದರು. ಇದರಿಂದ ರಹೀಂ ಸಾಕಷ್ಟು ನೊಂದಿದ್ದ.

Young man found dead in Bengaluru

ಕೊನೆಗೆ ಯುವತಿಯನ್ನು ಬಿಟ್ಟಿರಲಾರದೇ ರಹೀಂ ಪದೇ ಪದೇ ಆಕೆಗೆ ಫೋನ್ ಮಾಡಿ ಭೇಟಿಯಾಗಲು ಪ್ರಯತ್ನಿಸುತ್ತಿದ್ದ. ಇದರಿಂದ ಯುವತಿಯ ಸಂಬಂಧಿಕರೇ ನನ್ನ ಮಗನನ್ನು ಕೊಲೆ ಮಾಡಿಸಿದ್ದಾರೆ ಎಂದು ರಹೀಂ ಪೋಷಕರು ಆರೋಪ ಮಾಡಿದ್ದಾರೆ.

ಶಿವನಸಮುದ್ರದಲ್ಲಿ ನವದಂಪತಿ ಶವ ಪತ್ತೆ: ಮರ್ಯಾದಾ ಹತ್ಯೆ ಶಂಕೆ ಶಿವನಸಮುದ್ರದಲ್ಲಿ ನವದಂಪತಿ ಶವ ಪತ್ತೆ: ಮರ್ಯಾದಾ ಹತ್ಯೆ ಶಂಕೆ

ರಹೀಂ ಬೆಂಗಳೂರು ಹೊರವಲಯದ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಖಾಜಿ ಸೊಣ್ಣೇಹಳ್ಳಿ ನಿವಾಸಿಯಾಗಿದ್ದ. ಕೆಲವು ದಿನಗಳ ಹಿಂದಷ್ಟೇ ಹುಡುಗಿಯ ಪೋಷಕರು ಹಾಗೂ ಸಂಬಂಧಿಕರಿಗೆ ಈ ವಿಚಾರ ತಿಳಿದಿದೆ. ಹುಡುಗಿಯನ್ನು ಮಾತನಾಡಿಸಬಾರದು, ಭೇಟಿಯಾಗಬಾರದು ಎಂದು ಅವರು ಬೆದರಿಕೆ ಹಾಕಿದ್ದರು.

English summary
A youth has been brutally murdered for falling in love with a girl. Mother of man has alleged that relatives of girl have killed him. The body of a Young man Raheem's was found near Kadugodi in Bengaluru after 2 days of search.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X