Youth Congress: ಯೂತ್ ಕಾಂಗ್ರೆಸ್ ನಾಯಕರಿಗೆ ಚಳಿ ಬಿಡಿಸಿದ ಡಿ.ಕೆ.ಶಿವಕುಮಾರ್
ಕರ್ನಾಟಕ ಯುವ ಕಾಂಗ್ರೆಸ್ನ ಪದಾಧಿಕಾರಿಗಳಿಗೆ ಪದಗ್ರಹಣಕ್ಕೂ ಮುನ್ನವೇ ಡಿಸಿಎಂ ಡಿಕೆ ಶಿವಕುಮಾರ್ ಶಾಕ್ ಕೊಟ್ಟಿದ್ದಾರೆ. ಇಂದು ಅದ್ಧೂರಿಯಾಗಿ ಪದಗ್ರಹಣಕ್ಕೆ ಸಜ್ಜಾಗಿದ್ದ ಯೂತ್ ಕಾಂಗ್ರೆಸ್ ನಾಯಕರಿಗೆ ರಾತ್ರೋರಾತ್ರಿ ಚಳಿ ಬಿಡಿಸಿದ್ದಾರೆ. ಅಧಿಕಾರ ಸ್ವೀಕಾರಕ್ಕೂ ಮುನ್ನವೇ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದ ಯುವ ನಾಯಕರ ವಿರುದ್ಧ ಫುಲ್ ಗರಂ ಆಗಿರುವ ಡಿಕೆಶಿ ಖಡಕ್ ವಾರ್ನಿಂಗ್ ಕೂಡ ಕೊಟ್ಟಿದ್ದಾರೆ. ಡಿಕೆ ಶಿವಕುಮಾರ್ ಅವರ ಸಿಟ್ಟಿಗೆ ಕಾರಣವಾಗಿದ್ದು ಏನು ಗೊತ್ತಾ?
ಕರ್ನಾಟಕ ಯುವ ಕಾಂಗ್ರೆಸ್ನ ನೂತನ ಅಧ್ಯಕ್ಷ ಮಂಜುನಾಥ್ ಗೌಡ ಸೇರಿದಂತೆ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಸೋಮವಾರ ಅದ್ಧೂರಿಯಾಗಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ. ಈ ಹಿನ್ನೆಲೆ ರಸ್ತೆಯುದ್ದಕ್ಕೂ ಅನಧಿಕೃತ ಬ್ಯಾನರ್ ಹಾಗೂ ಫ್ಲೆಕ್ಸ್ ಅನ್ನು ಹಾಕುವ ಮೂಲಕ ಯುವ ಕಾಂಗ್ರೆಸ್ ನಾಯಕರು ನಿಯಮ ಉಲ್ಲಂಘಿಸಿದ್ದಾರೆ. ಕಾರ್ಯಕ್ರಮದ ಹೆಸರಿನಲ್ಲಿ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದ ನಾಯಕರ ನಡೆಗೆ ಡಿಕೆ ಶಿವಕುಮಾರ್ ಕೆಂಡವಾಗಿದ್ದಾರೆ. ತಮ್ಮದೇ ಪಕ್ಷದವರ ಮೇಲೆ ಗರಂ ಆಗಿರುವ ಡಿಕೆಶಿ ಖಡ್ ವಾರ್ನಿಂಗ್ ಕೊಟ್ಟಿದ್ದಾರೆ.

ಇದನ್ನೆಲ್ಲ ಬೂತ್ಗಳಲ್ಲಿ ಪ್ರದರ್ಶಿಸಿ: ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಅರಮನೆ ಮೈದಾನದ ಸುತ್ತಮುತ್ತ ಸೇರಿದಂತೆ ನಗರದಲ್ಲಿ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ ಹಾಕಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿ ಕಮಿಷನರ್ ಅವರಿಗೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ. ಅನಧಿಕೃತವಾಗಿ ಬ್ಯಾನರ್, ಫ್ಲೆಕ್ಸ್ ಹಾಕಿರುವವರು ತಾವಾಗಿಯೇ ತೆಗೆಯಬೇಕು. ತೆರವು ಮಾಡದಿದ್ದರೆ ಸಂಬಂಧಪಟ್ಟವರ ವಿರುದ್ಧ ದಂಡ ಸೇರಿದಂತೆ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಆದೇಶಿಸಿದ್ದೇನೆ. ಯುವ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಬಲವನ್ನು ಬೂತ್ಗಳಲ್ಲಿ ಪ್ರದರ್ಶಿಸಬೇಕೇ ಹೊರತು, ಈ ರೀತಿ ಬ್ಯಾನರ್, ಫ್ಲೆಕ್ಸ್ ಹಾಕಿಸಿ ಅಲ್ಲ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.
ಡಿ.ಕೆ.ಶಿವಕುಮಾರ್ ಅವರ ಆದೇಶದ ಬೆನ್ನಲ್ಲೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ರಾತ್ರೋರಾತ್ರಿ ಫೀಲ್ಡಿಗಿಳಿದಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಅರಮನೆ ಮೈದಾನ ಹಾಗೂ ನಗರದ ವಿವಿಧೆ ಯುವ ಕಾಂಗ್ರೆಸ್ ಹಮ್ಮಿಕೊಂಡಿರುವ ಯುವ ಸಂಕಲ್ಪ ಪದಗ್ರಹಣ ಸಮಾರಂಭಕ್ಕಾಗಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಅಳವಡಿಸಿರುವುದು ಕಂಡುಬಂದಿರುತ್ತದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಅಳವಡಿಸಿರುವವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಿರುವ ಹಿನ್ನಲೆಯಲ್ಲಿ ಎಲ್ಲ ಕಡೆ ಅನಧಿಕೃತ ಜಾಹೀರಾತುಗಳನ್ನು ತೆರವುಗೊಳಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಇದರ ಜೊತೆಗೆ ಫ್ಲೆಕ್ಸ್ ಅಳವಡಿಸಿರುವವರ ಮೇಲೆ ಸುಮಾರು 5 ಲಕ್ಷ ರೂಪಾಯಿ ದಂಡ ವಿಧಿಸುವ ಜೊತೆಗೆ ಕ್ರಿಮಿನಲ್ ಕೇಸ್ ಕೂಡ ದಾಖಲಿಸಲಾಗುವುದು. ಅದರಂತೆ ಬೆಂಗಳೂರಿನ ಬಳ್ಳಾರಿ ರಸ್ತೆಯಲ್ಲಿ ಬೃಹತ್ ಗಾತ್ರದ 40 ಫ್ಲೆಕ್ಸ್ ಹಾಗೂ ಸಣ್ಣ ಗಾತ್ರದ 130ಕ್ಕೂ ಹೆಚ್ಚು ಫ್ಲೆಕ್ಸ್ಗಳನ್ನು ತೆರವುಗೊಳಿಸಲಾಗಿದೆ. ಫ್ಲೆಕ್ಸ್ ತೆರವುಗೊಳಿಸಲು ಖರ್ಚಾಗುವ ಹಣವನ್ನು ಕೂಡ ಅವರಿಂದಲೇ ವಸೂಲಿ ಮಾಡಲಾಗುವುದು. ಅಧಿಕಾರಿಗಳು ಖುದ್ದು ಸ್ಥಳದಲ್ಲಿದ್ದು, ಅನಧಿಕೃತ ಫ್ಲೆಕ್ಸ್ಗಳ ತೆರವು ಕಾರ್ಯಾಚರಣೆಯನ್ನು ಮುಂದುವರಿಸಿದ್ದಾರೆ ಎಂದು ತುಷಾರ್ ಗಿರಿನಾಥ್ ತಿಳಿಸಿದ್ದಾರೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications