ಪೆಟಾ ಅಂತಿಮ ಸ್ಪರ್ಧೆಯಲ್ಲಿ ಬೆಂಗಳೂರಿನ ಯುವಕ
ಬೆಂಗಳೂರು, ಅಕ್ಟೋಬರ್ 15 : ಪ್ರಾಣಿಗಳ ಸಂರಕ್ಷಣೆಗಾಗಿ ಹೋರಾಟ ನಡೆಸಿರುವ ಪೀಪಲ್ ಫಾರ್ ದಿ ಎಥಿಕಲ್ ಟ್ರೀಟ್ಮೆಂಟ್ ಆಫ್ ಎನಿಮಲ್ಸ್ (ಪೆಟಾ) ಸಂಸ್ಥೆ ನಡೆಸಿದ ಇಂಡಿಯಾಸ್ ಕ್ಯೂಟೆಸ್ಟ್ ವೆಜಿಟೇರಿಯನ್ ನೆಕ್ಸ್ಟ್ ಡೋರ್ ಸ್ಪರ್ಧೆಯಲ್ಲಿ ನೂರಾರು ಜನರನ್ನು ಹಿಂದಿಕ್ಕಿ ಬೆಂಗಳೂರಿನ ಕಾಲೇಜು ವಿದ್ಯಾರ್ಥಿ ಕುಶಾಲ್ ಹೆಬ್ಬಾರ್ ಅಂತಿಮ ಹಂತ ತಲುಪಿದ್ದಾರೆ.
ಕುಶಾಲ್ ಸೇರಿದಂತೆ 20 ಅಂತಿಮ ಸ್ಪರ್ಧಾಳುಗಳನ್ನು ಆಯ್ಕೆ ಮಾಡಿರುವ ಪೆಟಾ ಸ್ಪರ್ಧೆಯ ತೀರ್ಪುಗಾರರು, ಮೂರು ಪ್ರಮುಖ ಅಂಶಗಳನ್ನು ಅಭ್ಯರ್ಥಿಗಳ ಆಯ್ಕೆಗೆ ಪರಿಗಣಿಸಿದ್ದಾರೆ. ಅವೆಂದರೆ, ಸ್ಪರ್ಧಾಳುಗಳ ದೈಹಿಕ ಆರೋಗ್ಯ, ಪ್ರಾಣಿಗಳನ್ನು ಕಾಪಾಡಲು ಇರಬೇಕಾದ ಸಮರ್ಪಣಾ ಮನೋಭಾವ ಮತ್ತು ಸಸ್ಯಾಹಾರಿಯಾಗಿದ್ದಕ್ಕೆ ಕಾರಣಗಳು.
ಈಗ, ತನ್ನ ನೆಚ್ಚಿನ ಸ್ಪರ್ಧಾಳು ಯಾರೆಂದು ಆಯ್ಕೆ ಮಾಡುವ ಜವಾಬ್ದಾರಿ ಸಾರ್ವಜನಿಕರ ಮೇಲಿದೆ. ಮೇಲಿನ ಮೂರು ಗುಣಲಕ್ಷಣಗಳು ಮತ್ತು ಸಾರ್ವಜನಿಕರು ಹಾಕಿದ ಮತಗಳ ಆಧಾರದ ಮೇಲೆ ಒಬ್ಬ ಪುರುಷ ಮತ್ತು ಒಬ್ಬ ಮಹಿಳೆಯನ್ನು ಜಯಶಾಲಿ ಎಂದು ಆಯ್ಕೆ ಮಾಡಲಾಗುವುದು.

ಕಟ್ಟಾ ಸಸ್ಯಾಹಾರಿಯಾಗಿರುವ ಬೆಂಗಳೂರಿನ ಯುವಕ ಕುಶಾಲ್ ಹೆಬ್ಬಾರ್, ಬಿಎನ್ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದು, "ಪ್ರಾಣಿಗಳೆಂದರೆ ನನಗೆ ತುಂಬಾ ಪ್ರೀತಿ, ಬರೀ ರುಚಿ ನೋಡುವ ಉದ್ದೇಶದಿಂದ ಕೂಡ ಮಾಂಸಾಹಾರವನ್ನು ಎಂದೂ ಸೇವಿಸುವುದಿಲ್ಲ" ಎಂದು ಅಭಿಮಾನದಿಂದ ಹೇಳಿದ್ದಾರೆ.
ಪೆಟಾ ನ್ಯೂಟ್ರಿಷನಿಸ್ಟ್ ಭುವನೇಶ್ವರಿ ಗುಪ್ತಾ ಹೇಳುವಂತೆ, "ಸಸ್ಯಾಹಾರಿಗಳು ಮಾಂಸಾಹಾರಿಗಳಿಗಿಂತ ತೆಳ್ಳಗಿರುತ್ತಾರೆ ಮತ್ತು ಆರೋಗ್ಯವಂತರಾಗಿರುತ್ತಾರೆ. ಅವರ ಜೀವಮಾನ ಕಾಲದಲ್ಲಿ ಎಷ್ಟೊಂದು ಪ್ರಾಣಿಗಳು ಕಸಾಯಿಖಾನೆಯಲ್ಲಿ ಬಲಿಯಾಗುವುದನ್ನು ತಪ್ಪಿಸುತ್ತಾರೆ. ಸಣ್ಣ ಸಂಗತಿಯೇನಲ್ಲ."
ಮಾಂಸಾಹಾರ ಮತ್ತು ಬೇಕರಿ ಉತ್ಪನ್ನಗಳ ಸೇವನೆಯಿಂದ ಹೃದಯಬೇನೆ, ಲಕ್ವ, ಮಧುಮೇಹ, ಕ್ಯಾನ್ಸರ್ ಮತ್ತು ಬೊಜ್ಜಿನಂತಹ ರೋಗಗಳು ಬರುವ ಸಾಧ್ಯತೆಗಳು ಹೆಚ್ಚು. ಈ ದೃಷ್ಟಿಯಿಂದಲಾದರೂ ಜನರು ಸಸ್ಯಾಹಾರಕ್ಕೆ ಮೊರೆಹೋಗುವುದು ಉಚಿತ.
ಭಾರತದ ಶ್ರೀಸಾಮಾನ್ಯ ನಾಗರಿಕರಿಗಾಗಿ ಏರ್ಪಡಿಸಲಾಗಿದ್ದ ಈ ಸ್ಪರ್ಧೆಯ ವಿಜೇತರನ್ನು ನವೆಂಬರ್ 1ರಂದು, ಅಂದರೆ ಕನ್ನಡ ರಾಜ್ಯೋತ್ಸವದಂದು ಘೋಷಿಸಲಾಗುವುದು. ಕನ್ನಡಿಗನೊಬ್ಬನು ಕನ್ನಡ ರಾಜ್ಯೋತ್ಸವದಂದೇ ಗೆದ್ದರೆ ಕನ್ನಡಿಗನಿಗೆ ಅದಕ್ಕಿಂತ ಹೆಚ್ಚಿನ ಭಾಗ್ಯ ಇನ್ನೇನಿದೆ? ಕುಶಾಲ್ ನನ್ನು ಗೆಲ್ಲಿಸಬೇಕಿದ್ದರೆ ಇಲ್ಲಿ ವೋಟ್ ಮಾಡಿರಿ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications