ಬೆಂಗಳೂರಿನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಟೆಕ್ಕಿ ಕೊಲೆ
ಬೆಂಗಳೂರು, ಅಕ್ಟೋಬರ್ 09 : ಟೆಕ್ಕಿಯೊಬ್ಬರನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ತಾವರೆಕೆರೆಯಲ್ಲಿ ಭಾನುವಾರ ತಡರಾತ್ರಿ ನಡೆದಿದೆ.
ಅಸ್ಸಾಂ ಮೂಲದ ಪ್ರಣಯ್(24) ಕೊಲೆಯಾದ ಟೆಕ್ಕಿ. ಈ ಘಟನೆ ಬೆಂಗಳೂರಿನ ತಾವರೆಕೆರೆ ಮುಖ್ಯರಸ್ತೆಯ ಚಾಕೋಲೇಟ್ ಫ್ಯಾಕ್ಟರಿ ಬಳಿ ನಡೆದಿದೆ.

ಖಾಸಗಿ ಕಂಪನಿಯಲ್ಲಿ ಸಾಪ್ಟ್ ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಪ್ರಣಯ್ ಅವರನ್ನು ಭಾನುವಾರ ರಾತ್ರಿ ಸ್ನೇಹಿತನೊಬ್ಬ ಫೋನ್ ಮಾಡಿ ಕರೆದು ಹತ್ಯೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
#BIGNEWS: Youth stabbed to death at Tavarakere in #Bengaluru. Case registered at Madivala police station. pic.twitter.com/1WzOqwFr71
— NEWS9 (@NEWS9TWEETS) October 9, 2017
ಪ್ರಣಯ್ ಕೊಲೆಗೆ ಕಾರಣವೇನೆಂದು ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಮಡಿವಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.












Click it and Unblock the Notifications