ಇಂದು ವೈಎಸ್ವಿ ದತ್ತ ಎಸ್ಎಸ್ಎಲ್ಸಿ ಪಾಠದ ಕೊನೆಯ ಕ್ಲಾಸ್
ಚಿಕ್ಕಮಗಳೂರು, ಜೂನ್ 11: ಮಾಜಿ ಶಾಸಕ ವೈಎಸ್ವಿ ದತ್ತ ತಮ್ಮ ಫೇಸ್ ಬುಕ್ ಖಾತೆಯ ಮೂಲಕ ಎಸ್ಎಸ್ಎಲ್ಸಿ ಮಕ್ಕಳಿಗೆ ಪಾಠ ಮಾಡುತ್ತಿದ್ದಾರೆ. ಇದು ರಾಜ್ಯಾದ್ಯಂತ ದೊಡ್ಡ ಜನಪ್ರಿಯತೆ ಪಡೆದಿದೆ.
Recommended Video
ಆದರೆ, ಇಂದು ವೈಎಸ್ವಿ ದತ್ತ ಕೊನೆಯ ಕ್ಲಾಸ್ ನಡೆಯಲಿದೆ. ಫೇಸ್ಬುಕ್ ಲೈವ್ ಪಾಠ ಇಂದು ಸಂಜೆ 7ಕ್ಕೆ ಗಂಟೆಯ ಲೈವ್ ಮೂಲಕ ಮುಗಿಯುತ್ತದೆ. ಮೇ 6 ರಿಂದ ತರಗತಿಗಳು ಶುರು ಆಗಿತ್ತು. ಇಂದು ಅಂತಿಮ ತರಗತಿ ನಡೆಯುತ್ತಿದೆ. ಸಂಜೆ 7 ರ ಫೇಸ್ಬುಕ್ ಲೈವ್ ನಲ್ಲಿ ತಪ್ಪದೇ ಭಾಗವಹಿಸಿ ಎಂದು ವೈಎಸ್ವಿ ದತ್ತ ತಿಳಿಸಿದ್ದಾರೆ.
ಈ ಬಗ್ಗೆ ಫೇಸ್ ಬುಕ್ ಲೈವ್ ನಲ್ಲಿ ಬರೆದುಕೊಂಡಿರುವ ದತ್ತ ''ಈ ಸಾಲಿನ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಮಕ್ಕಳು ಫೇಸ್ ಬುಕ್ ಲೈವ್ ಪಾಠ ನೋಡುವುದರ ಮೂಲಕ ನನ್ನನ್ನು ರಾಜಕೀಯ ವ್ಯಕ್ತಿಯಾಗಿ ಗುರುತಿಸದೆ ಪಾಠದ ಮೇಷ್ಟ್ರಾಗಿ ಗುರುತಿಸಿ ಹಲವಾರು ಹಳ್ಳಿಗಳಿಂದ ಕರೆ ಮಾಡಿ ಪಾಠದ ಬಗ್ಗೆ ಖುಷಿ ವ್ಯಕ್ತಪಡಿಸುತ್ತಾರೆ.ಕನ್ನಡ ಮಾಧ್ಯಮ ಮತ್ತು ಇಂಗ್ಲಿಷ್ ಮಾಧ್ಯಮದ ಅನೇಕ ಮಕ್ಕಳು ದಿನ ನನಗೆ ಕರೆ ಮಾಡುತ್ತಾರೆ. ಅವರ ಪೋಷಕರು ಸಹ ರಾಜಕೀಯದ ಮಧ್ಯೆ ಇದನ್ನು ಬಿಡದೆ ಮುಂದುವರಿಸಿ ಸಾರ್ ಎಂದು ಕೇಳಿಕೊಳ್ಳುತ್ತಿದ್ದಾರೆ.'' ಎಂದಿದ್ದಾರೆ.

''ಅಷ್ಟರ ಮಟ್ಟಿಗೆ ಈ ಫೇಸ್ ಬುಕ್ ಲೈವ್ ಪಾಠ ಸಾರ್ಥಕವಾಗಿದೆ ಎಂದು ಭಾವಿಸುತ್ತೇನೆ. ಮುಂಬರುವ ದಿನಗಳಲ್ಲಿ ನಾನು ಯಾವ ರೀತಿ ರಾಜಕೀಯ ಕೆಲಸ ಕಾರ್ಯಗಳ ನಡುವೆ ಪಾಠ ಮಾಡುವ ಮೇಷ್ಟ್ರಾಗಿ ತೊಡಗಿಸಿಕೊಳ್ಳಬೇಕೆಂಬುದರ ಬಗ್ಗೆ ನಿಮ್ಮೊಂದಿಗೆ ಚರ್ಚಿಸಲಿದ್ದೇನೆ. ನಿಮ್ಮ ಸಲಹೆ ಅಭಿಪ್ರಾಯಗಳನ್ನು ನಿರೀಕ್ಷಿಸುತ್ತಿದ್ದೇನೆ.'' ಎಂದು ಫೇಸ್ ಬುಕ್ನಲ್ಲಿ ಬರೆದುಕೊಂಡಿದ್ದಾರೆ.
ಕೊರೊನಾ ಲಾಕ್ಡೌನ್ನಿಂದ ಎಸ್ಎಸ್ಎಲ್ಸಿ ಪರೀಕ್ಷೆಗಳು ಮುಂದಕ್ಕೆ ಹೋಗಿತ್ತು. ಹೀಗಾಗಿ, ವೈಎಸ್ವಿ ದತ್ತ ಫೇಸ್ಬುಕ್ ಲೈವ್ನಲ್ಲಿ ಪುನರ್ಮನನ ತರಗತಿಗಳನ್ನು ತೆಗೆದುಕೊಳ್ಳುತ್ತಿದ್ದರು.
-
SSLC ಪರೀಕ್ಷೆಗೆ ಹಾಜರಾತಿ ಶಾಕ್: ನಿಯಮ ಉಲ್ಲಂಘಿಸಿದ 35,000 ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ











Click it and Unblock the Notifications