ವಿಕ್ಟೋರಿಯಾ ಆಸ್ಪತ್ರೆಯ ಆರೋಗ್ಯ ಕಾರ್ಯಕರ್ತರಿಗೆ KFC ಊಟ
ಬೆಂಗಳೂರು, ಏಪ್ರಿಲ್ 24: ಕೋವಿಡ್ 19 ಸೋಂಕಿನ ವಿರುದ್ಧದ ಹೋರಾಟಕ್ಕೆ ಕೈಜೋಡಿಸಿರುವ ಕೆಎಫ್ ಸಿ ಇಂಡಿಯಾ ಕಳೆದ ಎರಡು ವಾರಗಳಿಂದ ಪ್ರತಿನಿತ್ಯ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರು, ನರ್ಸ್ ಗಳು ಮತ್ತು ಸಿಬ್ಬಂದಿ ಸದಸ್ಯರಿಗೆ 200 ಊಟ ಪೂರೈಕೆ ಮಾಡುತ್ತಿದೆ.
ಕೋವಿಡ್ ಸೋಂಕಿನ ವಿರುದ್ಧ ಅವಿರತವಾಗಿ ದುಡಿಯತ್ತಿರುವ ಆರೋಗ್ಯ ಕಾರ್ಯಕರ್ತರು, ಸೋಂಕಿತರು ಮತ್ತು ಶಂಕಿತ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರಿಗೆ ನೆರವು ನೀಡುವ ಮೂಲಕ ಕೆಎಫ್ ಸಿ ಸೋಂಕಿನ ವಿರುದ್ಧ ಹೋರಾಟಕ್ಕೆ ತನ್ನ ಕೊಡಗೆ ನೀಡುತ್ತಿದೆ.
ದೇಶದಲ್ಲಿ ಇದುವರೆಗೆ ಹಲವು ಸಮುದಾಯಗಳಿಗೆ 1 ಮಿಲಿಯನ್ ಆಹಾರ ಪೂರೈಕೆ ಮಾಡಲಾಗಿದೆ ಎಂದು ಕೆಎಫ್ ಸಿ ಪ್ರಕಟಣೆ ತಿಳಿಸಿದೆ. ಇದಕ್ಕೆ Yum! Foundation ನೆರವು ಒದಗಿಸಿದೆ. ಈ ಆಹಾರಗಳಿಗೆ ಕೆಎಫ್ ಸಿ ಹಣಕಾಸಿನ ನೆರವು ನೀಡುತ್ತಿದೆ.

ಸಮಾಜಕ್ಕೆ ಮರಳಿ ನೀಡುವುದು ಕೆಎಫ್ ಸಿ ಯ ಮೂಲ ಮೌಲ್ಯಗಳಲ್ಲಿ ಒಂದು. ಒಂದು ದೇಶವಾಗಿ ನಾವೆಲ್ಲರೂ ಕೋವಿಡ್-19 ರೇಖೆಯನ್ನು ಸಮನಾಗಿಸಲು ಯತ್ನ ನಡೆಸುತ್ತಿದ್ದೇವೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ಅನೆಕ ಕುಟುಂಬಗಳಿಗೆ, ವ್ಯಕ್ತಿಗಳಿಗೆ ಅಗತ್ಯ ವಸ್ತುಗಳ ಲಭ್ಯತೆ ಇಲ್ಲದಂತಾಗಿದೆ. ಅಂತಹವರಿಗೆ ನೆರವಾಗುವುದು ನಮ್ಮ ಉದ್ದೇಶ. ಅವರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆ ತರಲು ನಮಗೆ ಒಂದು ಅವಕಾಶ ಲಭಿಸಿದೆ. ಕೋವಿಡ್-19 ವಿರುದ್ದದ ಹೋರಾಟದಲ್ಲಿ ನಾವೆಲ್ಲರೂ ಒಟ್ಟಿಗಿದ್ದು, ಎಲ್ಲರೂ ಸದೃಢವಾಗಿ ಹೊರಹೊಮ್ಮುತ್ತೇವೆ ಎಂಬ ನಂಬಿಕೆಯಿದೆ ಎಂದು ಕೆಎಫ್ ಸಿ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಸಮೀರ್ ಮೆನನ್ ಹೇಳಿದ್ದಾರೆ.
ದೆಹಲಿ, ಅಸ್ಸಾಂ, ಬೆಂಗಳೂರು, ಮುಂಬೈ, ಜಾರ್ಖಂಡ್ ಮತ್ತು ಇತರ ರಾಜ್ಯಗಳಲ್ಲಿ ಕೆಎಫ್ ಸಿ ರೆಸ್ಪಾನ್ಸ್ ನೆಟ್ ನೊಂದಿಗೆ ಕೈಜೋಡಿಸಿದೆ. ಜೊತೆಗೆ, ಕೆಎಫ್ ಸಿ ಆರೋಗ್ಯ ಕಾರ್ಯಕರ್ತರು, ವೈದ್ಯರಿಗೆ ಕೃತಜ್ಞತೆ ಸಲ್ಲಿಸುವುದು, ತಮ್ಮ ಉದ್ಯೋಗಿಗಳ ಸುರಕ್ಷೆ, ಗ್ರಾಹಕರಿಗೆ ಸುರಕ್ಷಿತ ಹಾಗೂ ಸಂಪರ್ಕರಹಿತ ವಿತರಣೆಯ ಬದ್ಧತೆಯನ್ನು ಹೊಂದಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications