ಹಣಕೊಟ್ಟು ಜನರನ್ನು ಸೇರಿಸುತ್ತಿದ್ದಾನೆ ಕುಮಾರಸ್ವಾಮಿ ಎಂದ ಜಮೀರ್
ಬೆಂಗಳೂರು, ಏಪ್ರಿಲ್ 30 : ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಇತ್ತೀಚೆಗಷ್ಟೆ ಕಾಂಗ್ರೆಸ್ ಗೆ ಸೇರ್ಪಡೆಗೊಂಡಿರುವ ಜಮೀರ್ ಅಹಮದ್ ಖಾನ್ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.
ಸೋಮವಾರ ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಚ್.ಸಿ. ಬಾಲಕೃಷ್ಣ ಪರವಾಗಿ ಮತಯಾಚನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿಯವರ ವಿರುದ್ಧ ಏಕವಚನದಲ್ಲಿ ದಾಳಿ ನಡೆಸಿ ಚನ್ನಪಟ್ಟಣ ಹಾಗೂ ರಾಮನಗರಕ್ಕೆ ಬರಬೇಡ ಎಂದು ಹೇಳಲು ಕುಮಾರಸ್ವಾಮಿ ಯಾರು, ಅವನ ಅನುಮತಿ ಪಡೆದೇ ನಾನು ಕ್ಷೇತ್ರಕ್ಕೆ ಬರಬೇಕೆ, ನಾನು ಬಂದು ಹೋದ ಬಳಿಕ ಸುಮಾರು 30 ಲಕ್ಷ ಹಣ ಹಂಚಿ ಜನರನ್ನು ಸೇರಿಸಿ ಸಮಾವೇಶ ಮಾಡಿದ್ದಾನೆ ಎಂದು ಜಮೀರ್ ವಾಗ್ದಾಳಿ ನಡೆಸಿದರು.
ಕುಮಾರಸ್ವಾಮಿ ಹಣಕೊಟ್ರು ಸೇರಿದ್ದು 200 ಜನ ಮಾತ್ರ: ಕುಮಾರಸ್ವಾಮಿ ಹಣಕೊಟ್ಟು ಜನರನ್ನು ಸೇರಿಸುತ್ತಾನೆ. ಆತನ ಅಭಿಮಾನಕ್ಕೆ ಜನ ಸೇರೋದಿಲ್ಲ .ನಾನು ನನ್ನ ಕ್ಷೇತ್ರದಲ್ಲಿ ಪ್ರಚಾರ ಮಾಡಿಲ್ಲ, ರಾಜ್ಯದ 52 ಕ್ಷೇತ್ರದಲ್ಲಿ ಈವರೆಗೆ ಪ್ರಚಾರ ಮಾಡಿದ್ದೇನೆ.

ಮೈಸೂರು ಭಾಗದಲ್ಲಿ ನನ್ನ ಸಮುದಾಯದ ಜನ ನನ್ನ ನಂಬಿ ಕಾಂಗ್ರೆಸ್ ಸೇರೋದನ್ನ ನೋಡಿ. ನನ್ನ ಸಮುದಾಯದ ಜನರನ್ನ ತುರುಕರು ಕಾಸುಕೊಟ್ಟರೆ ಬರ್ತಾರೆ ಅಂತ ಜರಿದಿದ್ದಾರೆ. ನನ್ನ ಜನ ಕಾಸಿಗೆ ಬದುಕಿಲ್ಲ. ಕೊಂಡುಕೊಳ್ಳಲು ಅವರು ಯಾರು. ಮುಸ್ಲಿಂರನ್ನು ಜರಿದು ಈಗ ನಾನು ಮಾತನಾಡಿಲ್ಲ ಎಂದು ಹೇಳುತ್ತಾರೆ ಎಂದು ಜಮೀರ್ ಆಕ್ರೋಶ ವ್ಯಕ್ತಪಡಿಸಿದರು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications