ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

|
Google Oneindia Kannada News

ಬೆಂಗಳೂರು, ಅಕ್ಟೋಬರ್ 20 : ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಚೇತರಿಸಿಕೊಳ್ಳುತ್ತಿದ್ದು, ಸೋಮವಾರ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ.

ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೃದಯ ಸಂಬಂಧಿ ಖಾಯಿಲೆಯಿಂದ ಅವರು ಬಳಲುತ್ತಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ಐಎಂಎ ಪ್ರಕರಣ: ಜಮೀರ್ ಅಹ್ಮದ್ ಗೆ ಸಿಬಿಐ ನೊಟೀಸ್ಐಎಂಎ ಪ್ರಕರಣ: ಜಮೀರ್ ಅಹ್ಮದ್ ಗೆ ಸಿಬಿಐ ನೊಟೀಸ್

Zameer Ahmed Khan Admitted To Hospital

ಚಿಕಿತ್ಸೆಗೆ ಜಮೀರ್ ಅಹಮದ್ ಖಾನ್ ಸ್ಪಂದಿಸುತ್ತಿದ್ದು ಸೋಮವಾರ ಡಿಸ್ಚಾರ್ಜ್ ಮಾಡಲಾಗುತ್ತದೆ ಎಂಬ ಮಾಹಿತಿ ಸಿಕ್ಕಿದೆ. ಮಾಜಿ ಸಚಿವರು ನೂರಾರು ಬೆಂಬಲಿಗರು ಆಸ್ಪತ್ರೆಯತ್ತ ಬರುತ್ತಿದ್ದು, ಯಾರಿಗೂ ಭೇಟಿಗೂ ಅವಕಾಶ ನೀಡಿಲ್ಲ.

ಟಿಪ್ಪು ಸುಲ್ತಾನ್ ವೇಶದಲ್ಲಿ ಕತ್ತಿ ಹಿಡಿದು ಕುದುರೆ ಏರಿ ಬಂದ ಜಮೀರ್ ಅಹ್ಮದ್!ಟಿಪ್ಪು ಸುಲ್ತಾನ್ ವೇಶದಲ್ಲಿ ಕತ್ತಿ ಹಿಡಿದು ಕುದುರೆ ಏರಿ ಬಂದ ಜಮೀರ್ ಅಹ್ಮದ್!

ಶನಿವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಜಮೀರ್ ಅಹಮದ್ ಖಾನ್‌ಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲು ಮಾಡಲಾಯಿತು.

ಟಿಪ್ಪು ಜಯಂತಿ ರದ್ದು: ಬಿಎಸ್ವೈಗೆ ಜಮೀರ್ ಬಹಿರಂಗ ಸವಾಲುಟಿಪ್ಪು ಜಯಂತಿ ರದ್ದು: ಬಿಎಸ್ವೈಗೆ ಜಮೀರ್ ಬಹಿರಂಗ ಸವಾಲು

ಮೊದಲು ಜೆಡಿಎಸ್‌ನಲ್ಲಿದ್ದ ಜಮೀರ್ ಅಹಮದ್ ಖಾನ್ 2018ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಸೇರಿದ್ದರು. 2018ರ ವಿಧಾನಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಕಣಕ್ಕಿಳಿದು ಜಯಗಳಿಸಿದ್ದರು. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಆಹಾರ ಸಚಿವರಾಗಿದ್ದರು.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರಿಗೆ ಜಮೀರ್ ಅಹಮದ್ ಖಾನ್ ಆಪ್ತರಾಗಿದ್ದಾರೆ. ಬಹುಕೋಟಿ ರೂಪಾಯಿ ಐಎಂಎ ಹಗರಣದಲ್ಲಿ ಕೆಲವು ದಿನಗಳ ಹಿಂದೆ ಸಿಬಿಐ ವಿಚಾರಣೆಯನ್ನು ಎದುರಿಸಿದ್ದಾರೆ.

English summary
Chamarajpet Congress MLA and Former minister Zameer Ahmed Khan admitted to private hospital in Bengaluru due to heart related health issue.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X