Zameer Ahmed Nomination Accepted: ಜಮೀರ್ ಅಹಮದ್ ಖಾನ್ ನಾಮಪತ್ರ ಅಂಗೀಕಾರ
ಬೆಂಗಳೂರು, ಏಪ್ರಿಲ್ 21: ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದರುವ ಮಾಜಿ ಸಚಿವ ಜಮೀರ್ ಅಹ್ಮದ್ ಅವರ ನಾಮಪತ್ರ ಅಂಗೀಕಾರವಾಗಿದೆ.
ಕನಕಪುರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಳಿಕ ಈಗ ಬೆಂಗಳೂರು ನಗರದ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಮೀರ್ ಅಹಮದ್ ಖಾನ್ ಅವರ ನಾಮಪತ್ರ ಸಲ್ಲಿಕೆಗೆ ಸಂಬಂಧ ಈಗ ಅವರಿಗೆ ಸಂಕಷ್ಟ ಎದುರಾಗಿತ್ತು. ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದರುವ ಮಾಜಿ ಸಚಿವ ಜಮೀರ್ ಅಹ್ಮದ್ ಅವರ ನಾಮಪತ್ರವನ್ನು ತಿರಸ್ಕರಿಸಬೇಕೆಂದು ನವಭಾರತ ಸೇನಾ ಪಾರ್ಟಿಯ ರುಕ್ಮಂಗದ ಎಂಬುವವರು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದರು.

ಜಮೀರ್ ಅಹಮದ್ ಖಾನ್ ಅವರು ತಾವು ಸಲ್ಲಿಸಿರುವ ನಾಮಪತ್ರದಲ್ಲಿ ಕೆಲವು ದೋಷಗಳನ್ನು ಮಾಡಿದ್ದಾರೆ. ನಿಯಮಗಳ ಪ್ರಕಾರ ಅವರು ಯಾವುದೇ ಅಭ್ಯರ್ಥಿಯು ತನಗೆ ಸಂಬಂಧಿಸಿದ ಮಾಹಿತಿಗಳನ್ನು ಮರೆಮಾಚಬಾರದು ಅಥವಾ ಅಪೂರ್ಣ ಮಾಹಿತಿ ನೀಡಬಾರದು. ಆದರೆ, ಜಮೀರ್ ಅವರು ಇಂಥ ತಪ್ಪುಗಳನ್ನು ಮಾಡಿದ್ದಾರೆ. ತಾವು ಸಲ್ಲಿಸಿರುವ ನಾಮಪತ್ರದಲ್ಲಿ ಅವರು ಒಂದು ಕಾಲಂ ಖಾಲಿ ಬಿಟ್ಟಿದ್ದಾರೆ. ಇದು ಕೂಡ ತಪ್ಪು. ಆದ್ದರಿಂದ ಅವರ ನಾಮಪತ್ರವನ್ನು ತಿರಸ್ಕರಿಸಬೇಕು ಎಂದು ನವಭಾರತ ಸೇನಾ ಪಾರ್ಟಿಯ ರುಕ್ಮಂಗದ ಅವರು ಆಗ್ರಹಿಸಿದ್ದರು.












Click it and Unblock the Notifications