ಬೇಗ್ ಮಂತ್ರಿ ಆಗಿದ್ದಾಗ ಕಾಂಗ್ರೆಸ್ ಚೆನ್ನಾಗಿತ್ತಾ: ಜಮೀರ್ ಪ್ರಶ್ನೆ
ಬೆಂಗಳೂರು, ಮೇ 21: ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಅನ್ನು ಟೀಕಿಸಿರುವ ಕಾಂಗ್ರೆಸ್ ಶಾಸಕ ರೋಷನ್ ಬೇಗ್ ಅವರ ಮೇಲೆ ಕಾಂಗ್ರೆಸ್ ಮುಸ್ಲಿಂ ನಾಯಕರು ಸಾಲಾಗಿ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ರೋಷನ್ ಬೇಗ್ ಹೇಳಿಕೆ ಬಗ್ಗೆ ಮಾತನಾಡಿದ ಸಚಿವ ಜಮೀರ್ ಅಹ್ಮದ್, ರೋಷನ್ ಬೇಗ್ ವಿರುದ್ಧ ವಾಗ್ದಾಳಿ ನಡೆಸಿದರು.
ಸಿದ್ದರಾಮಯ್ಯ ವಿರುದ್ಧ ಬೇಗ್ ವಾಗ್ದಾಳಿ, ಕೆಪಿಸಿಸಿಯಿಂದ ನೋಟಿಸ್
ರೋಷನ್ ಬೇಗ್ ಮಂತ್ರಿ ಆಗಿ ಅಧಿಕಾರ ಅನುಭವಿಸಿದ್ದಾಗ ಕಾಂಗ್ರೆಸ್ ಚೆನ್ನಾಗಿತ್ತು, ಈಗ ಚೆನ್ನಾಗಿಲ್ಲವಾ? ಎಂದು ವ್ಯಂಗ್ಯವಾಗಿ ಪ್ರಶ್ನೆ ಮಾಡಿದ್ದಾರೆ.
ಯಾವ ಕಾರಣಕ್ಕೆ ಕಾಂಗ್ರೆಸ್ ಸರಿ ಇಲ್ಲ ಎಂದು ಬೇಗ್ ಹೇಳಿದ್ದಾರೋ ಗೊತ್ತಿಲ್ಲ, ಅವರು ಹೇಳಿದ ತಕ್ಷಣ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಅವರನ್ನು ಬದಲಾವಣೆ ಮಾಡಲಾಗುತ್ತದೆಯಾ? ತಾವು ಸಚಿವರಾಗಿದ್ದಾಗ ಸಿದ್ದರಾಮಯ್ಯ ಒಳ್ಳೆಯವರಾಗಿದ್ದರಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ರೋಷನ್ ಬೇಗ್ ಹೇಳಿಕೆಗೆ ಕಾಂಗ್ರೆಸ್ಸಿಗರು ಫುಲ್ ಗುಸ್ಸಾ: ಕೋಳಿ, ಕಬಾಬ್ ಏನಿದು?
ರೋಷನ್ ಬೇಗ್ ಈಗಾಗಲೇ ನಿರ್ಣಯ ಮಾಡಿಬಿಟ್ಟಂತಿದೆ, ಅವರನ್ನು ಹಿಡಿದಿಟ್ಟುಕೊಳ್ಳಲು ಆಗುವುದಿಲ್ಲ, ಅವರು ಎಲ್ಲಿ ಬೇಕಾದರೂ ಹೋಗಲಿ, ಶಿವಾಜಿನಗರದ ಮುಸ್ಲೀಮರು ಅವರೊಂದಿಗೆ ಇದ್ದಾರಾ ಎಂಬುದು ನೋಡಿಕೊಳ್ಳಲಿ ಎಂದು ಜಮೀರ್ ಅಹ್ಮದ್ ಹೇಳಿದರು.