ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕುಮಾರಸ್ವಾಮಿ ಅವರೇ ನಮ್ಮ ಮುಖ್ಯಮಂತ್ರಿ: ಜಮೀರ್ ಅಹ್ಮದ್

|
Google Oneindia Kannada News

Recommended Video

ಕುಮಾರಸ್ವಾಮಿ ಅವರ ಕುರಿತು ಜಮೀರ್ ಅಹ್ಮದ್ ಹೇಳಿದ್ದೇನು ? | Oneindia Kannada

ಬೆಂಗಳೂರು, ಜೂನ್ 6: ಜೆಡಿಎಸ್‌ನಲ್ಲಿದ್ದಾಗ ಕುಮಾರಸ್ವಾಮಿ ಮತ್ತು ದೇವೇಗೌಡ ಅವರೊಂದಿಗೆ ಮನಸ್ತಾಪದಿಂದ ಪಕ್ಷ ತ್ಯಜಿಸಿ ಕಾಂಗ್ರೆಸ್ ಸೇರ್ಪಡೆಯಾಗಿದ್ದ ಶಾಸಕ ಜಮೀರ್ ಅಹ್ಮದ್ ಖಾನ್, ಕುಮಾರಸ್ವಾಮಿ ಅವರೇ ನಮ್ಮ ಮುಖ್ಯಮಂತ್ರಿ. ಅವರ ಜತೆಗೂಡಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.

ಬುಧವಾರ ಪ್ರಮಾಣವಚನ ಸ್ವೀಕರಿಸಲಿರುವ ಕಾಂಗ್ರೆಸ್ ಶಾಸಕರ ಸಂಭಾವ್ಯ ಪಟ್ಟಿಯಲ್ಲಿ ಜಮೀರ್ ಅಹ್ಮದ್ ಅವರ ಹೆಸರೂ ಇದೆ.

ಸಚಿವ ಸ್ಥಾನಕ್ಕಾಗಿ ನಾನು ಲಾಬಿ ನಡೆಸಿಲ್ಲ : ಜಮೀರ್ ಅಹ್ಮದ್ಸಚಿವ ಸ್ಥಾನಕ್ಕಾಗಿ ನಾನು ಲಾಬಿ ನಡೆಸಿಲ್ಲ : ಜಮೀರ್ ಅಹ್ಮದ್

'ನನಗೆ ಸಚಿವ ಸ್ಥಾನ ಖಚಿತ ಎಂದು ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಹೇಳಿದ್ದಾರೆ. ಕಾಂಗ್ರೆಸ್‌ನಲ್ಲಿ ಇದ್ದರೂ ಸಚಿವ ಸ್ಥಾನ ಸಿಗುತ್ತಿತ್ತು, ಜೆಡಿಎಸ್‌ನಲ್ಲಿ ಇದ್ದರೂ ಮಂತ್ರಿಯಾಗುತ್ತಿದ್ದೆ' ಎಂದು ಜಮೀರ್ ಹೇಳಿದ್ದಾರೆ.

zameer ahmed said kumaraswamy is our cm

ಕುಮಾರಸ್ವಾಮಿ ಅವರೊಂದಿಗಿನ ಹಿಂದಿನ ವೈಮನಸ್ಸಿನ ಕುರಿತು ಮಾತನಾಡದ ಅವರು, ಕುಮಾರಸ್ವಾಮಿ ಅವರು ನಮ್ಮ ಮುಖ್ಯಮಂತ್ರಿ. ಅವರ ಜತೆಗೆ ಕೆಲಸ ಮಾಡುತ್ತೇನೆ ಎಂದಿದ್ದಾರೆ.

ಜಮೀರ್ ಅಹ್ಮದ್ ಅವರಿಗೆ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಸ್ಥಾನ ಸಿಗುವ ನಿರೀಕ್ಷೆಯಿದೆ.

ದೇವೇಗೌಡರೇ ವಿರುದ್ಧವಾಗಿ ನಿಂತರೂ ಗೆಲುವು ನನ್ನದೇ: ಜಮೀರ್ ಅಹಮದ್ದೇವೇಗೌಡರೇ ವಿರುದ್ಧವಾಗಿ ನಿಂತರೂ ಗೆಲುವು ನನ್ನದೇ: ಜಮೀರ್ ಅಹಮದ್

ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇರುವಾಗ ಜೆಡಿಎಸ್‌ನಲ್ಲಿ ಜಮೀರ್ ಅಹ್ಮದ್ ಸೇರಿದಂತೆ ಏಳು ಶಾಸಕರು ಪಕ್ಷದ ವರಿಷ್ಠರ ವಿರುದ್ಧ ಬಂಡಾಯ ಎದ್ದಿದ್ದರು. ದೇವೇಗೌಡರ ಕುಟುಂಬದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದ ಭಿನ್ನಮತೀಯ ಶಾಸಕರು, ಬಳಿಕ ಕಾಂಗ್ರೆಸ್ ಸೇರ್ಪಡೆಯಾಗಿದ್ದರು.

English summary
Once a rival of HD Kumaraswamy, Congress MLA Zameer Ahmed Khan said that Kumaraswamy is our CM and he will happy to work with him. Zameer is one of the rebel MLAs who came out from JDS and joined Congress.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X