ಸಿಎಂಗೆ ಬಿರಿಯಾನಿ ತಂದ ಆಟೋ ಒಳಗೆ ಬಿಡದ ಪೊಲೀಸರು: ಜಮೀರ್ ಅಹಮದ್ ಮಾಡಿದ್ದೇನು?
ಬೆಂಗಳೂರು, ಜೂನ್ 29: ಬಕ್ರೀದ್ ಹಬ್ಬದ ಹಿನ್ನಲೆಯಲ್ಲಿ ಜಮೀರ್ ಅಹಮದ್ ಖಾನ್ ಸಿಎಂ ಸಿದ್ದರಾಮಯ್ಯ ಅವರಿಗೆ ಆಟೋದಲ್ಲಿ ಬಿರಿಯಾನಿ ಕಳುಹಿಸಿದ್ದರು. ಆದರೆ, ಭದ್ರತಾ ಸಿಬ್ಬಂದಿ ಆಟೋವನ್ನು ಒಳಗೆ ಕಾರಣ, ಬೆಂಜ್ ಕಾರಿನಲ್ಲಿ ಸಿಎಂ ಮನೆಗೆ ಬಿರಿಯಾನಿ ಕಳುಹಿಸಲಾಗಿದೆ.
ಇಂದು ಬಕ್ರೀದ್ ಹಬ್ಬ ಆಚರಣೆ ಹಿನ್ನಲೆಯಲ್ಲಿ ಜಮೀರ್ ಅಹಮದ್ ಖಾನ್ ಅವರು ವಿವಿಧ ರೀತಿ ಬಾಡೂಟವನ್ನು ಸಿಎಂ ನಿವಾಸಕ್ಕೆ ಆಟೋದಲ್ಲಿ ಕಳುಹಿಸಿಕೊಟ್ಟಿದ್ದರು. ಆದರೆ, ಪೊಲೀಸರು ಆಟೋವನ್ನು ಗೇಟ್ನಲ್ಲೇ ತಡೆದಿದ್ದು, ಒಳಗೆ ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಸಿಎಂ ಸರ್ಕಾರಿ ನಿವಾಸಕ್ಕೆ ಆಟೋವನ್ನು ಒಳ ಬಿಡಲು ಸಾಧ್ಯವಿಲ್ಲ ಎಂದು ಹೇಳಿದ ಬಳಿಕ ಊಟವನ್ನು ಸಿಎಂ ನಿವಾಸಕ್ಕೆ ಸಾಗಿಸಲೇಬೇಕೆಂದು ನಿರ್ಧರಿಸಿದ ಜಮೀರ್ ಅಹಮದ್ ಬೆಂಬಲಿಗರು ನಂತರ ಊಟದ ಬಾಕ್ಸ್ಗಳನ್ನು ಬೆಂಜ್ ಕಾರಿಗೆ ಶಿಫ್ಟ್ ಮಾಡಿ ಕಳುಹಿಸಿಕೊಟ್ಟಿದ್ದಾರೆ.
ಬೆಂಜ್ ಕಾರನ್ನು ಪೊಲೀಸರು ಸಿಎಂ ಸರ್ಕಾರಿ ನಿವಾಸಕ್ಕೆ ತೆರಳಲು ಅನುಮತಿ ಕೊಟ್ಟಿದ್ದು, ಕೊನೆಗೂ ಜಮೀರ್ ಅಹಮದ್ ಕಳುಹಿಸಿದ ಊಟವನ್ನು ಸಿದ್ದರಾಮಯ್ಯ ಅವರ ನಿವಾಸಕ್ಕೆ ತಲುಪಿಸುವಲ್ಲಿ ಜಮೀರ್ ಅಹಮದ್ ಬೆಂಬಲಿಗರು ಯಶಸ್ವಿಯಾಗಿದ್ದಾರೆ.
ಬಕ್ರೀದ್ ಆಚರಣೆಯಲ್ಲಿ ಭಾಗವಹಿಸಿದ್ದ ಸಿದ್ದರಾಮಯ್ಯ
ಇನ್ನು ನಗರದ ಚಾಮರಾಜಪೇಟೆಯಲ್ಲಿರುವ ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡಿದ್ದರು. ಮುಸ್ಲಿಂ ಸಮುದಾಯದವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಸಂದರ್ಭದಲ್ಲಿ ಸಿಎಂ ಕೂಡ ಭಾಗಿಯಾಗಿದ್ದರು.
ಮುಸ್ಲಿಂ ಧರ್ಮಗುರುಗಳು ಸಿಎಂ ಸಿದ್ದರಾಮಯ್ಯ ಅವರನ್ನು ಸಂಪ್ರದಾಯದಂತೆ ಟೋಪಿ ಹಾಕುವ ಮೂಲಕ ಬರಮಾಡಿಕೊಂಡರು. ಸಚಿವ ಜಮೀರ್ ಅಹಮದ್ ಖಾನ್ ಸಿದ್ದರಾಮಯ್ಯ ಅವರಿಗೆ ಪುಸ್ತಕ ನೀಡಿದರು. ಸಾವಿರಾರು ಮುಸ್ಲಿಮರು ಭಾಗವಹಿಸಿ, ಪ್ರಾರ್ಥನೆ ಸಲ್ಲಿಸಿದರು.
ಪ್ರಾರ್ಥನೆಯ ನಂತರ ಸಿದ್ದರಾಮಯ್ಯ ನೆರೆದಿದ್ದ ಎಲ್ಲರಿಗೂ ಬಕ್ರೀದ್ ಹಬ್ಬದ ಶುಭಾಶಯ ಕೋರಿದರು. ಪ್ರಾರ್ಥನೆ ಮೂಲಕ ಇಡೀ ಮನುಕುಲಕ್ಕೆ ಒಳ್ಳೆಯದಾಗಲಿ ಎಂದು ಪ್ರಾರ್ಥನೆ ಮಾಡಿದ್ದೀರಾ, ನಿಮ್ಮ ಜೊತೆ ಭಾಗಿಯಾಗಿರುವುದಕ್ಕೆ ನನಗೂ ಖುಷಿಯಾಗಿದೆ ಎಂದು ಹೇಳಿದರು.
ನಾವೆಲ್ಲರೂ ಒಗ್ಗಟ್ಟಿನಿಂದ, ಒಂದಾಗಿ ಇರಬೇಕು, ನಮ್ಮನ್ನು ಬೇರ್ಪಡಿಸಲು, ಸಾಮರಸ್ಯ ಹಾಳು ಮಾಡಲು ನಮ್ಮಲ್ಲೇ ಕೆಲವು ಶಕ್ತಿಗಳು ಪ್ರಯತ್ನಿಸುತ್ತವೆ ಅದಕ್ಕೆಲ್ಲಾ ನಾವು ಬೆಲೆ ಕೊಡಬಾರದು. ಎಲ್ಲರೂ ಒಗ್ಗಟ್ಟಿನಿಂದ ಇದ್ದಾಗ ರಾಜ್ಯದ ಅಭಿವೃದ್ಧಿಯಾಗುತ್ತದೆ ಎಂದು ಹೇಳಿದರು.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?











Click it and Unblock the Notifications