ಅತೃಪ್ತರಿಗೆ ಝೀರೋ ಟ್ರಾಫಿಕ್: ಎಂ.ಬಿ.ಪಾಟೀಲ್ ಮೇಲೆ ಸ್ಪೀಕರ್ ಗರಂ
ಬೆಂಗಳೂರು, ಜುಲೈ 22: 'ಝೀರೋ ಟ್ರಾಫಿಕ್' ವಿಚಾರ ಸದನದಲ್ಲಿ ಭಾರಿ ಕಾವೇರಿದ ಚರ್ಚೆ ನಡೆಯಿತು. ಸ್ಪೀಕರ್ ರಮೇಶ್ ಕುಮಾರ್ ಅವರು ಗೃಹ ಸಚಿವ ಎಂ.ಬಿ.ಪಾಟೀಲ್ ಅವರನ್ನು ತರಾಟೆಗೆ ತೆಗೆದುಕೊಂಡ ಘಟನೆಯೂ ನಡೆಯಿತು.
ವಿಶ್ವಾಸಮತ ಯಾಚನೆ ಗೊತ್ತುವಳಿ ಮೇಲೆ ಮಾತನಾಡಿದ ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ ಅವರು, ಅತೃಪ್ತ ಶಾಸಕರು ಸ್ಪೀಕರ್ ಅವರನ್ನು ಭೇಟಿ ಮಾಡಲು ಮುಂಬೈನಿಂದ ಬಂದು ಎಚ್ಎಎಲ್ನಿಂದ ವಿಧಾನಸೌಧಕ್ಕೆ ಆಗಮಿಸಿದಾಗ ಅವರಿಗೆ ಝೀರೋ ಟ್ರಾಫಿಕ್ ನೀಡಿದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಅವರಿಗೆ ಏಕೆ ಝಿರೋ ಟ್ರಾಫಿಕ್ ನೀಡಲಾಯಿತು, ಹಾಗೆ ನೀಡಲು ನಿಯಮದಲ್ಲಿ ಅವಕಾಶವಿದೆಯೇ ಎಂದು ಪ್ರಶ್ನೆ ಮಾಡಿದರು.
ಇದಕ್ಕೆ ಉತ್ತರಿಸಿದ ಎಂ.ಬಿ.ಪಾಟೀಲ್ ಅವರು, 'ಅತೃಪ್ತ ಶಾಸಕರಿಗೆ ಭದ್ರತೆ ನೀಡಬೇಕು ಎಂದು ರಾಜ್ಯಪಾಲರು ಕಮೀಷನರ್ ಅವರಿಗೆ ಸೂಚಿಸಿದ್ದರು, ಆದರೆ ಅವರಿಗೆ ಝೀರೋ ಟ್ರಾಫಿಕ್ ನೀಡಿಲ್ಲ' ಎಂದು ಉತ್ತರಿಸಿದರು.
ಕಲಾಪದಲ್ಲಿ ಗದ್ದಲ, ಚರ್ಚೆ, ಸಿಟ್ಟು, ನಗು ಹಲವು ಭಾವ ಚಿತ್ರಗಳಲ್ಲಿ
ಆದರೆ ಇದಕ್ಕೆ ಸ್ವತಃ ಸ್ಪೀಕರ್ ಅವರೇ ಆಕ್ಷೇಪ ವ್ಯಕ್ತಪಡಿಸಿ, ನೀವು ನೀಡುತ್ತಿರುವ ಉತ್ತರವನ್ನು ನಿಮ್ಮ ಆತ್ಮ ಸಾಕ್ಷಿಯೇ ಒಪ್ಪುತ್ತಿದೆಯಾ? ಆ ಶಾಸಕರಿಗೆ ಝೀರೋ ಟ್ರಾಫಿಕ್ ನೀಡಿದ್ದನ್ನು ಇಡೀಯ ದೇಶವೇ ನೋಡಿದೆ, ಆದರೆ ನೀವು ಅತೃಪ್ತರಿಗೆ ಝೀರೋ ಟ್ರಾಫಿಕ್ ನೀಡಿಲ್ಲ ಎಂದು ಹೇಳುತ್ತಿದ್ದೀರಿ ಎಂದು ಗರಂ ಆದರು.

ಕ್ರಿಮಿನಲ್ಗಳಿಗೆ ಝೀರೋ ಟ್ರಾಫಿಕ್ ಕೊಟ್ಟುಬಿಡಿ: ಸ್ಪೀಕರ್ ಗರಂ
ಅತೃಪ್ತ ಶಾಸಕರಿಗೆ ಝೀರೋ ಟ್ರಾಫಿಕ್ ನೀಡಿದ್ದೀರಾ, ಮುಂದೆ ಕ್ರಿಮಿನಲ್ಗಳಿಗೂ ಕೊಟ್ಟುಬಿಡಿ ಎಂದು ಬೇಸರದಿಂದ ಹೇಳಿದರು. ಜನರ ಕೆಲವ ಮಾಡುವ ಪ್ರಮುಖರಿಗೆ ಮಾತ್ರ ಕೊಡುವ ಗೌರವವನ್ನು ಹೀಗೆ ಕಂಡ-ಕಂಡವರಿಗೆಲ್ಲಾ ಕೊಡುತ್ತೀರೇನು ಎಂದು ಸ್ಪೀಕರ್ ಅಸಮಾಧಾನ ವ್ಯಕ್ತಪಡಿಸಿದರು.

ಸಮಾಜವನ್ನು ಮುಂದಕ್ಕೆ ಹೇಗೆ ನಡೆಸುತ್ತೀರಾ: ಸ್ಪೀಕರ್
ಅತೃಪ್ತ ಶಾಸಕರಿಗೆ ಝೀರೋ ಟ್ರಾಫಿಕ್ ಕೊಟ್ಟಿದ್ದು ಯಾರು? ಏಕೆ ಕೊಟ್ಟರು? ಈಗ ನೀವು ಅವರಿಗೆ ಕೊಟ್ಟಿದ್ದೀರೆಂದರೆ ಮುಂದೆಯೂ ಅಂತಹವರಿಗೆ ಝಿರೋ ಟ್ರಾಫಿಕ್ ಕೊಡುವುದಿಲ್ಲವೆಂದು ಹೇಗೆ ನಂಬುವುದು ಎಂದ ಅವರು ಈ ಸಮಾಜವನ್ನು ಮುಂದೆಕ್ಕೆ ಹೇಗೆ ತೆಗೆದುಕೊಂಡು ಹೋಗುತ್ತೀರಾ ಎಂದು ಎಂ.ಬಿ.ಪಾಟೀಲ್ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

ಎಚ್.ಕೆ.ಪಾಟೀಲ್ ಅವರಿಂದಲೂ ವಿರೋಧ
ಇದಕ್ಕೆ ದನಿಗೂಡಿಸಿದ ಕಾಂಗ್ರೆಸ್ ಹಿರಿಯ ಎಚ್.ಕೆ.ಪಾಟೀಲ್ ಅವರು, ಅತೃಪ್ತ ಶಾಸಕರಿಗೆ ಝೀರೋ ಟ್ರಾಫಿಕ್ ಅನ್ನು ನೀಡಿರುವುದು ಇಡೀಯ ದೇಶ ನೋಡದೆ, ಇಂತಹಾ ಸತ್ಯವನ್ನು ನಾವು ಮುಚ್ಚಿಡಲು ಸಾಧ್ಯವಿಲ್ಲ, ಅವರಿಗೆ ಝೀರೋ ಟ್ರಾಫಿಕ್ ನೀಡಲು ಕಾರಣವೇನು ಎಂದು ಅವರೂ ಸಹ ಪ್ರಶ್ನೆ ಮಾಡಿದರು.

ನಾಳೆ ಉತ್ತರ ನೀಡುತ್ತೇನೆ ಎಂದು ಎಂ.ಬಿ.ಪಾಟೀಲ್
ಸ್ಪೀಕರ್ ಸೇರಿದಂತೆ ತಮ್ಮ ಪಕ್ಷದ ನಾಯಕರೇ ಎಂ.ಬಿ.ಪಾಟೀಲ್ ಅವರ ವಿರುದ್ಧ ಗರಂ ಆಗಿದ್ದ ಕಂಡು ಎಂ.ಬಿ.ಪಾಟೀಲ್ ಅವರು ಪೆಚ್ಚಾದರು. ಇದರ ಬಗ್ಗೆ ಮಾಹಿತಿ ಪಡೆದು ನಾಳೆ(?!) ಉತ್ತರ ನೀಡುವುದಾಗಿ ಹೇಳಿದರು.
-
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications