Zika Virus Guidelines: ಝಿಕಾ ವೈರಸ್ನಿಂದ ತಪ್ಪಿಸಿಕೊಳ್ಳೋದು ಹೇಗೆ?, ಆರೋಗ್ಯ ಇಲಾಖೆಯ ಮಾರ್ಗಸೂಚಿ ಗಮನಿಸಿ
Zika Virus Guidelines: ಬೆಂಗಳೂರು, ನವೆಂಬರ್, 02: ರಾಜ್ಯದಲ್ಲಿ ಈಗಾಗಲೇ ಕೋವಿಡ್ನಿಂದ ಜನರು ಬೇಸತ್ತು ಹೋಗಿದ್ದರು. ಮತ್ತೇ ಇದೀಗ ಝಿಕಾ ವೈರಸ್ ಪತ್ತೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಹಾಗಾದರೆ ರೋಗದ ಲಕ್ಷಣಗಳು ಏನು?, ಇದು ಹೇಗೆ ಹರಡುತ್ತದೆ? ಇದರಿಂದ ತಪ್ಪಿಸಿಕೊಳ್ಳುವುದು ಹೇಗೆ ಎನ್ನುವ ಅಂಶಗಳನ್ನು ಇಲ್ಲಿ ಗಮನಿಸಿ.
ರೋಗದ ಲಕ್ಷಣಗಳು
* ಕಣ್ಣು ಕೆಂಪಾಗುವಿಕೆ
* ತಲೆ ನೋವು
* ಜ್ವರ
* ಕೀಲುಗಳಲ್ಲಿ ನೋವು
* ಗಂಧೆಗಳು
* ಸ್ನಾಯುಗಳಲ್ಲಿ ನೋವು

ಝಿಕಾ ವೈರಸ್ ತಡೆಗಟ್ಟಲು ಏನು ಮಾಡಬೇಕು?
* ನೀರು ಶೇಖರಣಾ ಪರಿಕರಗಳನ್ನು ಮುಚ್ಚಳದಿಂದ ಮುಚ್ಚಿಡಿ ಮತ್ತು ವಾರಕ್ಕೊಮ್ಮೆ ಸ್ವಚ್ಛಗೊಳಿಸಿ.
* ಮನೆಯ ಸುತ್ತ-ಮುತ್ತ ನೀರು ನಿಲ್ಲದಂತೆ ಎಚ್ಚರವಹಿಸಿ ಹಾಗೂ ಘನತ್ಯಾಜ್ಯ ವಸ್ತುಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಿ.
* ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸಿ, ಮಕ್ಕಳು, ವಯೋವೃದ್ದರು ವಿಶ್ರಾಂತಿ ಪಡೆಯುವಾಗ ಸೊಳ್ಳೆ ಪರದೆ, ಸೊಳ್ಳೆ ನಿರೋಧಕಗಳನ್ನು ಬಳಸಿ.
* ಸೊಳ್ಳೆಗಳು ಸಾಮಾನ್ಯವಾಗಿ ಸಂತಾನೋತ್ಪತ್ತಿ ಮಾಡುವುದು ನಿಂತ ನೀರಲ್ಲಿ. ಆದ್ದರಿಂದ ಮನೆಯ ಸುತ್ತಲೂ ನೀರು ನಿಲ್ಲದಂತೆ ಮುಂಜಾಗ್ರತೆ ವಹಿಸಬೇಕು.
* ಪ್ರತಿಯೊಬ್ಬ ವ್ಯಕ್ತಿಯೂ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡರೆ, ವೈರಸ್ ಹರಡುವ ಸಾಧ್ಯತೆ ಕಡಿಮೆಯಾಗುತ್ತೆ.
* ರೋಗ ಲಕ್ಷಣಗಳು ಸೌಮ್ಯ ಹಾಗೂ ಸಾಧಾರಣ ಸ್ವರೂಪವಾಗಿದ್ದು, 2 ರಿಂದ 7 ದಿನಗಳವರೆಗೆ ಇರುತ್ತದೆ.
ಗರ್ಭಿಣಿಯರು ವಿಶೇಷವಾಗಿ ಎಚ್ಚರಿಕೆ ವಹಿಸಬೇಕು. ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುತ್ತದೆ. ಯಾವುದೇ ರೋಗ ಲಕ್ಷಣಗಳು ಕಂಡುಬಂದಲ್ಲಿ ಹತ್ತಿರದ ಸರ್ಕಾರಿ ಆಸ್ಪತ್ರೆ/ವೈದ್ಯರನ್ನು ಸಂಪರ್ಕ ಮಾಡಿ ಎಂದು ಆರೋಗ್ಯ ಇಲಾಖೆ ಸಲಹೆ ನೀಡಿದೆ.
-
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ












Click it and Unblock the Notifications