ಝಿಕಾ ವೈರಾಣು ಪತ್ತೆ ಕಿಟ್ ಗಾಗಿ ಮನವಿ: ಖಾದರ್
ಬೆಂಗಳೂರು, ಫೆ. 02: ಜಾಗತಿಕವಾಗಿ ಭೀತಿ ಸೃಷ್ಟಿಸಿರುವ ಝಿಕಾ ವೈರಾಣು ಕರ್ನಾಟಕಕ್ಕೂ ಕಾಲಿಡುವ ಆತಂಕ ಎದುರಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಯು.ಟಿ ಖಾದರ್, ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ಝಿಕಾ ವೈರಾಣು ಸೋಂಕಿತರ ಪರೀಕ್ಷೆ ಮಾಡುವ ಕಿಟ್ ನಮ್ಮಲ್ಲಿ ಲಭ್ಯವಿಲ್ಲ. ಈ ಸಂಬಂಧ ವಿಶ್ವ ಆರೋಗ್ಯ ಸಂಸ್ಥೆ (WHO) ಹಾಗೂ ಕೇಂದ್ರ ಸರ್ಕಾರದ ನೆರವು ಕೋರಲಾಗಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.[ಜಾಗತಿಕ ಮಹಾಮಾರಿ ಝಿಕಾ ವೈರಾಣುಗೆ ಔಷಧಿ ಇದೆಯಂತೆ!]
ಡೆಂಗ್ಯೂ, ಚಿಕೂನ್ ಗುನ್ಯಾ ರೋಗಾಣುಗಳನ್ನು ಹರಡುವ ರೀತಿಯಲ್ಲೇ ಈಡಿಸ್ ಈಜಿಪ್ಟಿ ಮಾರಕವಾದ ಝಿಕಾ ರೋಗದ ವೈರಾಣುಗಳು ಹರಡುತ್ತವೆ. [ಡೆಂಗ್ಯೂ ತಡೆಗೆ ಯಾವ ಮುಂಜಾಗ್ರತಾ ಕ್ರಮ ಬೇಕು?]

ಗರ್ಭಿಣಿಯರಿಗೆ ಎಚ್ಚರಿಕೆ: ಮುಖ್ಯವಾಗಿ ಹುಟ್ಟುವ ಮಕ್ಕಳ ಮೇಲೆ ತೀವ್ರ ಪರಿಣಾಮ ಬೀರಲಿದ್ದು, ಈ ಬಗ್ಗೆ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.
ದಕ್ಷಿಣ ಆಫ್ರಿಕಾದಲ್ಲಿರುವ ನಿರ್ದಿಷ್ಟ ಸೊಳ್ಳೆಗಳಿಂದ ಈ ರೋಗ ಹಬ್ಬುತ್ತದೆ ಎಂಬುದು ತಿಳಿದು ಬಂದಿದ್ದು ಅಲ್ಲಿಂದ ದೇಶಕ್ಕೆ ಬರುವವರಿಗೆ ಈ ರೋಗ ಬಂದಿದೆಯೇ?ಎಂಬುದನ್ನು ಅರಿತುಕೊಳ್ಳಲು ನಿರ್ದಿಷ್ಟ ಕಿಟ್ ಅನ್ನು ಒದಗಿಸಬೇಕು ಎಂದು ಕೋರಲಾಗಿದೆ.
ದಕ್ಷಿಣ ಆಫ್ರಿಕಾದಲ್ಲಿ ಸೊಳ್ಳೆ ಕಚ್ಚಿಸಿಕೊಂಡು ಇಲ್ಲಿಗೆ ಬಂದವರನ್ನು ಸೊಳ್ಳೆಗಳು ಕಚ್ಚಿ, ಆ ಸೊಳ್ಳೆಗಳು ಬೇರೆಯವರಿಗೆ ಕಚ್ಚಿದರೆ ಝೀಕಾ ರೋಗ ಹರಡುತ್ತದೆಯೇ? ಎಂಬುದರ ವಿವರಗಳನ್ನು ಪಡೆಯಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ದೆಹಲಿ ಹಾಗೂ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ ವಹಿಸಿದರೆ ದಕ್ಷಿಣ ಆಫ್ರಿಕಾದಿಂದ ಬರುವವರನ್ನು ಪರೀಕ್ಷಿಸಲು ನೆರವಾಗುತ್ತದೆ. ಪ್ರವಾಸಿಗರನ್ನು ಪರೀಕ್ಷಿಸಿದರೆ ಶೇಕಡಾ ತೊಂಭತ್ತರಷ್ಟು ಸಮಸ್ಯೆ ನಿವಾರಣೆಯಾಗುತ್ತದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ಪರೀಕ್ಷಾ ಕೇಂದ್ರ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.(ಒನ್ ಇಂಡಿಯಾ ಸುದ್ದಿ)
-
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
KAS ಅಭ್ಯರ್ಥಿಗಳಿಗೆ ಬಿಗ್ ಶಾಕ್ ನೀಡಿದ KPSC: 384 ಗೆಜೆಟೆಡ್ ಪ್ರೊಬೇಷನರ್ಸ್ ಸಂದರ್ಶನ ಮುಂದೂಡಿಕೆ -
ಮಾರ್ಚ್ 15ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 16ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ











Click it and Unblock the Notifications