Zomato: ಬೆಂಗಳೂರು Vs ಚೆನ್ನೈ ಸಾಂಬಾರ್ ಎಂದ ಝೊಮ್ಯಾಟೊ; ನಮಗೆ ಸ್ವಿಗ್ಗಿ ಸಾಕು ಎಂದ ನೆಟ್ಟಿಗರು
Zomato: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು Vs ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯದಲ್ಲಿ ಆರ್ಸಿಬಿ ಭರ್ಜರಿ ಗೆಲುವು ದಾಖಲಿಸಿದೆ. ಸಿಎಸ್ಕೆ ವಿರುದ್ಧ ಆರ್ಸಿಬಿಯು 43 ರನ್ಗಳ ಭರ್ಜರಿ ಗೆಲುವು ದಾಖಲಿಸಿತ್ತು. ಇದರ ಬೆನ್ನಲ್ಲೇ ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ಗಳ ಸುರಿಮಳೆ ಶುರುವಾಗಿದೆ. ಝೊಮ್ಯಾಟೊ / Zomato ಸೋಷಿಯಲ್ ಮೀಡಿಯಾದಲ್ಲಿ ಮಾಡಿರುವ ಪೋಸ್ಟ್ವೊಂದು ಭಾರೀ ಚರ್ಚೆಗೆ ಕಾರಣವಾಗಿದೆ.
ಹೌದು, ಸಿಎಸ್ಕೆ ವಿರುದ್ಧ ಆರ್ಸಿಬಿ ಭರ್ಜರಿ ಗೆಲುವು ದಾಖಲಿಸಿದ ಮೇಲೆ Zomato ಬೆಂಗಳೂರು ಸಾಂಬಾರ್ Vs ಚೆನ್ನೈ ಸಾಂಬಾರ್ (Bengaluru sambar > Chennai sambar) #RCBvCSK ಎಂದು ಪೋಸ್ಟ್ ಮಾಡಿದೆ. ಇದೀಗ ಸೋಷಿಯಲ್ ಮೀಡಿಯಾದಲ್ಲಿ ಈ ಪೋಸ್ಟ್ ವೈರಲ್ ಆಗುತ್ತಿದ್ದು. ಇದಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

Zomato: ನೆಟ್ಟಿಗರು ಹೇಳಿದ್ದೇನು
ಇನ್ನು Zomato ಸೋಷಿಯಲ್ ಮೀಡಿಯಾ ಪೋಸ್ಟ್ಗೆ ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹಲವರು Zomato App ಅನ್ಇನ್ಸ್ಟಾಲ್ ಮಾಡುತ್ತಿರುವುದಾಗಿ ಹೇಳಿದ್ದಾರೆ. ಸಿಎಸ್ಕೆ ಅಭಿಮಾನಿಯೊಬ್ಬರು ಈ ಹಿಂದೆ ನೀವು ಯಾವಾಗ CSK vs RCB ಪಂದ್ಯದಲ್ಲಿ ಈ ರೀತಿ ಟ್ವೀಟ್ ಮಾಡಿದ್ದೀರಿ, CSK RCB ಗಿಂತ ಉತ್ತಮ ಎಂದು ಹೇಳಿದ್ದೀರಿ, ಈಗ ಅಭಿಮಾನಿಗಳ ಭಾವನೆಗಳೊಂದಿಗೆ ಮತ್ತು ಆಹಾರವನ್ನು ಹೋಲಿಸುವುದರೊಂದಿಗೆ ಏಕೆ ಆಟವಾಡುತ್ತಿದ್ದೀರಿ ಎಂದೂ ನೆಟ್ಟಿಗರೊಬ್ಬರು ಪ್ರಶ್ನೆ ಮಾಡಿದ್ದಾರೆ. ಝೊಮ್ಯಾಟೊ ಪ್ರಯತ್ನಿಸಿತು; ಪೂರ್ಣಗೊಳಿಸಿದ್ದು ಮಾತ್ರ ಬೆಂಗಳೂರು ಎಂದು ಆರ್ಸಿಬಿ ಅಭಿಮಾನಿಯೊಬ್ಬರು ಪ್ರತಿಕ್ರಿಯೆ ನೀಡಿದ್ದಾರೆ.
ಎಲ್ಪಿಜಿ ಕೊರತೆಯಿಂದಾಗಿ ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಸಾಂಬಾರ್ ಕೂಡ ನೀಡುತ್ತಿಲ್ಲ. 2 ದಿನಗಳ ಹಿಂದೆ ನಾನು ತಮಿಳುನಾಡಿನಲ್ಲಿ ಅನಿಯಮಿತ ಸಾಂಬಾರ್ ತಿಂದಿದ್ದೆ ಎಂದು ಸಿಎಸ್ಕೆ ಫ್ಯಾನ್ಸ್ ಕಾಮೆಂಟ್ ಮಾಡಿದ್ದಾರೆ. ಇದಕ್ಕೆ ಆರ್ಸಿಬಿ ಅಭಿಮಾನಿಗಳು ತಿರುಗೇಟು ನೀಡಿದ್ದಾರೆ.
ಮಹಾರಾಷ್ಟ್ರ ಸಾಂಬಾರ್
ಇನ್ನು ಬೆಂಗಳೂರು Vs ಚೆನ್ನೈ ಸಾಂಬಾರ್ನ ನಡುವೆ ಮಹಾರಾಷ್ಟ್ರದ ಸಾಂಬಾರ್ ಎನ್ನುವ ಚರ್ಚೆಯೂ ನಡೆದಿದೆ. ಸಾಂಬಾರ್ ಈ ಯಾವುದೇ ನಗರಗಳು ಅಥವಾ ರಾಜ್ಯಗಳಿಗೆ ಸೇರಿಲ್ಲ. ಇದನ್ನು ಮರಾಠಾ ಆಡಳಿತಗಾರರು ಛತ್ರಪತಿ ಸಂಭಾಜಿ ಮಹಾರಾಜರ ಗೌರವಾರ್ಥವಾಗಿ ಕಂಡುಹಿಡಿದರು. ನಿಮ್ಮ ಇತಿಹಾಸ ಪುಸ್ತಕಗಳನ್ನು ರಿಫ್ರೆಶ್ ಮಾಡಿ ಎಂದೂ ಮತ್ತೊಬ್ಬ ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ.
Bengaluru sambar > Chennai sambar.#RCBvCSK
— zomato (@zomato) April 5, 2026
ಚೆನ್ನೈ ಬಿರಿಯಾನಿ > ಬೆಂಗಳೂರು ಬಿರಿಯಾನಿ ಎಂದೂ ಕೆಲವರು ಕಾಮೆಂಟ್ ಮಾಡಿದ್ದಾರೆ. ಸಾಂಬಾರ್ ಬಿಡಿ ಬಿರಿಯಾನಿಯಲ್ಲಿ ಯಾರು ಬೆಸ್ಟ್ ಹೇಳಿ ಎಂದೂ ಕೆಲವು ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ.
-
RCB Vs CSK: ಆರ್ಸಿಬಿ ನೀಡಿದ ಗುರಿ ಮುಟ್ಟಲಾಗದೇ ಶರಣಾದ ಸಿಎಸ್ಕೆ -
ಚಿನ್ನಸ್ವಾಮಿಯಲ್ಲಿ ರನ್ ಮಳೆ ಹರಿಸಿ ಸಿಎಸ್ಕೆಗೆ ರೆಡ್ ಅಲರ್ಟ್ ನೀಡಿದ ಆರ್ಸಿಬಿ -
"ನಾನು ಔಟ್ ಆಗಿದ್ದಕ್ಕೇ ತುಂಬಾ ಖುಷಿಯಾಯ್ತು": ಸಿಎಸ್ಕೆ ಎದುರು ರನ್ ಮಳೆ ಹರಿಸಿದ ಬಳಿಕ ಪಡಿಕ್ಕಲ್ ಹೀಗಂದಿದ್ದೇಕೆ? -
Virat Kohli: ನಾನೇನು ವಿದೇಶಿ ಆಟಗಾರನಾ?: ಲಂಡನ್ ವಾಸ್ತವ್ಯದ ಬಗ್ಗೆ ಟೀಕಾಕಾರರಿಗೆ ವಿರಾಟ್ ಕೊಹ್ಲಿ ತಿರುಗೇಟು -
RCB vs CSK: ಆರ್ಸಿಬಿ ವಿರುದ್ಧ ಟಾಸ್ ಗೆದ್ದ ಸಿಎಸ್ಕೆ; ಪಕ್ಕಾ ಪ್ಲೇಯಿಂಗ್ 11 ಹೀಗಿದೆ ನೋಡಿ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
RCB Playing 11 Prediction: ಸಿಎಸ್ಕೆ ವಿರುದ್ಧ ಆರ್ಸಿಬಿ ಪ್ಲೇಯಿಂಗ್ 11 -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು?







Click it and Unblock the Notifications